14ರಂದು ಮಧುಮೇಹ ಪಾದ ರೋಗದ ತಪಾಸಣೆ ಹಾಗೂ ಉಚಿತ ಚಿಕಿತ್ಸೆ ಶಿಬಿರ
ಸಪ್ತಸಾಗರ ವಾರ್ತೆ, ವಿಜಯಪುರ, ನ. 12:ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ನವೆಂಬರ್ 14 ರಂದು ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ನಡೆಯಲಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1…
ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್
ಸಪ್ತಸಾಗರ ವಾರ್ತೆ, ಬೆಂಗಳೂರು, ನ.12:ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಕಳೆದ ವರ್ಷ…
ಖಾಲಿ ಹುದ್ದೆಗಳ ಭರ್ತಿಗೆ ನಿರಾಣಿ ಪತ್ರ
ಸಪ್ತಸಾಗರ ವಾರ್ತೆ,ವಿಜಯಪುರ, 12 :ಮೀಸಲಾತಿ ಗೊಂದಲವನ್ನು ಆದಷ್ಟು ಬೇಗ ನಿವಾರಿಸಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕು ಹಾಗೂ ಕೂಡಲೇ ವಯೋಮಿತಿಯನ್ನು ಸಡಿಲಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಒತ್ತಾಯಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಲಿಖಿತ ಪತ್ರ ಬರೆದು ಒತ್ತಾಯಿಸಿರುವ ನಿರಾಣಿ ಅವರು, ಗ್ರಾಮೀಣ ಭಾಗದ ಬಡ ನಿರುದ್ಯೋಗಿಗಳು ಸರ್ಕಾರಿ ನೌಕರಿಯನ್ನು ಪಡೆದುಕೊಳ್ಳಬೇಕೆಂಬ ಮಹದಾಸೆಯೊಂದಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಸ್ವಂತ ಊರು, ವಯಸ ವಯಸ್ಸಾದ…
ಟೆಕ್ನಾಲಜಿ ಕ್ಲಿನಿಕ್ಸ್ : ಎರಡು ದಿನಗಳ ಅರಿವು ಕಾರ್ಯಕ್ರಮ
ಸಪ್ತಸಾಗರ ವಾರ್ತೆ, ವಿಜಯಪುರ,ನ.12:ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ,ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ನವೆಂಬರ್ 13 ಹಾಗೂ 14ರಂದು ಎರಡು ದಿನಗಳ “ಟೆಕ್ನಾಲಜಿ ಕ್ಲಿನಿಕ್ಸ್” – ಅರಿವು ಮೂಡಿಸುವ ಕಾರ್ಯಕ್ರಮವನ್ನು ಅಥಣಿ ರಸ್ತೆಯಲ್ಲಿರುವ ಹೊಟೇಲ್ “ಪ್ರವಾಸ” ದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10-30ಕ್ಕೆ ಕಾರ್ಯಕ್ರಮವನ್ನು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಅಧ್ಯಕ್ಷ ಡಾ. ಕೆ.ಎಚ್.ಮುಂಬಾರೆಡ್ಡಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ…
ವೃಕ್ಷಥಾನ್ ಹೆರಿಟೇಜ್ ರನ್-2025 ರ ನೋಂದಣಿ ಚುರುಕು
ಸಪ್ತಸಾಗರ ವಾರ್ತೆ, ವಿಜಯಪುರ, ನ. 12: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ರ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಿದ್ದಾರೆ.ಸರಕಾರಿ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು, ವೈದ್ಯರು ಸೇರಿದಂತೆ ನಾನಾ ಕ್ಷೇತ್ರಗಳ ಕ್ರೀಡಾಸಕ್ತರು ತಮ್ಮ ಕುಟುಂಬ ಸಮೇತ ನೋಂದಣಿ ಮಾಡಿಸುವ ಮೂಲಕ ಈ ಬಾರಿಯ ಓಟಕ್ಕೆ ಮೆರಗು ತರುತ್ತಿದ್ದಾರೆ.ಯಾದಗಿರಿ ಅಬಕಾರಿ ಇಲಾಖೆಯ ನಿರೀಕ್ಷಕ ಶ್ರೀಶೈಲ ಒಡೆಯರ 10…
ಜನರ ಆಶೋತ್ತರಗಳಿಗನುಗುಣವಾಗಿ ಯೋಜನೆ ರೂಪಿಸಿ ಜನರ ಜೀವನಮಟ್ಟ ಸುಧಾರಿಸಿ-ಉಪಾಧ್ಯಕ್ಷ ಡಿ.ಆರ್.ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ ನ.12: ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ದಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ದಿಯ ಕ್ರೀಯಾಯೋಜನೆಗಳನ್ನು ರೂಪಿಸುವ ಮೂಲಕ ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅವರು ಹೇಳಿದರು.ಮಂಗಳವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ದಿ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಭಿವೃದ್ದಿ ಯೋಜನೆಗಳನ್ನು…
ನ.15ರಂದು ಡಾ. ಎಂ.ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ ಲೋಕಾರ್ಪಣೆ
ಸಪ್ತಸಾಗರ ವಾರ್ತೆ, ವಿಜಯಪುರ ನ.11: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ ವಿಜಯಪುರ ಇವರ ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ಅವರ 40 ಪುಟಗಳ ಸಮಗ್ರ ಸಾಹಿತ್ಯ ಲೋಕಾರ್ಪಣೆ ಸಮಾರಂಭ ನಗರದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಭವನದಲ್ಲಿ ನವೆಂಬರ್ 15 ರಂದು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರಿನ ಕುಂದೂರು ಮಠದ ಡಾ. ಶರತ್ಚಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜರುಗುವ ವಿಚಾರ ಸಂಕಿರಣದಲ್ಲಿ ಡಾ.ವೀರಣ್ಣ ರಾಜೂರ, ಡಾ.ಎಸ್.ಕೆ.ಕೊಪ್ಪಾ, ಡಾ.ಗುರುಪಾದ…
ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷಎಸ್.ಜಿ. ನಂಜಯ್ಯನಮಠ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ
ಸಪ್ತಸಾಗರ ವಾರ್ತೆ, ವಿಜಯಪುರ ನ.11: ವಿಜಯಪುರ ವಿಮಾನ ನಿಲ್ದಾಣವು ಏರ್ ಬಸ್- 320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 618.75 ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.99.9 ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ…
ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಸಪ್ತಸಾಗರ ವಾರ್ತೆ ವಿಜಯಪುರ, ನ. 11 : ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ “2025-26ನೇ ಸಾಲಿನ ಮಕ್ಕಳ ದಿನಾಚರಣೆ” ನಿಮಿತ್ತ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡ 9-16 ವರ್ಷದೊಳಗಿನ ಜಿಲ್ಲಾಮಟ್ಟದ ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.ಕತೆ, ಕವನ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಕುಮಾರಿ ಶ್ರದ್ಧಾ ದತ್ತೂರೆ (ಪ್ರಥಮ ಸ್ಥಾನ) ಹಾಗೂ ಕುಮಾರಿ ವೈಭವಿ ಪತ್ತಾರ…
ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ನಾಪತ್ತೆ
ಸಪ್ತಸಾಗರ ವಾರ್ತೆ,ವಿಜಯಪುರ, ನ. 11:ಕಾಲುವೆಯಲ್ಲಿ ಜಾರಿ ಬಿದ್ದು ಓರ್ವ ಯುವತಿ ಸೇರಿ ಇಬ್ಬರು ಬಾಲಕರು ನಾಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದ ಬಳಿಯ ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಯಲ್ಲಿ ಸಂಭವಿಸಿದೆ.ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಯಾದವರು ಒಂದೇ ಕುಟುಂಬದ ಇಬ್ಬರು ಬಾಲಕರು ಹಾಗೂ ಓರ್ವ ಯುವತಿ ಸೇರಿದ್ದಾರೆ.ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಾಲಕರು ಹಾಗೂ ಯುವತಿ ಬಸಮ್ಮ ಕೊಣ್ಣೂರ (21) ಸಂತೋಷ ಕೊಣ್ಣೂರು (16) ಹಾಗೂ ರವಿ ಕೊಣ್ಣೂರು…



