Latest posts

All
fashion
lifestyle
sports
tech

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ…

ಪ್ರಮುಖ ಸುದ್ದಿ

ಸಚಿವ ಎಂಬಿಪಿ ಸಾಧನೆಯನ್ನು ಪ್ರತ್ಯಕ್ಷವಾಗಿ ದರ್ಶನ ಮಾಡಿಸುತ್ತೇವೆ-ಗಣಿಹಾರ 01
02
ಮೇಲ್ಚಾವಣಿ ಕುಸಿತ ಪ್ರಕರಣ: ಬದುಕುಳಿದ ಎರಡು ಜೀವ- ಸಚಿವ ಎಂ. ಬಿ. ಪಾಟೀಲ್ ಭೇಟಿ ತಲಾ 5 ಲಕ್ಷ ಪರಿಹಾರ ಘೋಷಣೆ
03
ಮೋರಟಗಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ:ಮನೆ ಮೇಲ್ಚಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
04
ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

Popular

ಗಂಗಾಧರ್ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್
ಕೋ.ಚನ್ನಬಸಪ್ಪ ರಾಜ್ಯ ದತ್ತಿಪ್ರಶಸ್ತಿಗೆ ಸಾಹಿತಿ ರೂಪಾ ರಜಪೂತ ಆಯ್ಕೆ
ಅಭಿವೃದ್ಧಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯ-ಅಶೋಕ ಯಡಳ್ಳಿ
ಜೂನ್ 15ರಂದು ಅಪ್ರೆಂಟಿಸ್ ಮೇಳ

Latest posts

ಗಂಗಾಧರ್ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 11:ಪ್ರತಿ ವರ್ಷವೂ ಒಂದಲ್ಲ ಒಂದು ರ‍್ಯಾಂಕ್ ಮೂಲಕ ಗುರುತಿಸಿಕೊಂಡಿರುವ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಈ ಬಾರಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಜಿಲ್ಲೆಗೆ ಮತ್ತೊಂದು ಗರಿಮೂಡುವಂತೆ ಮಾಡಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2025-26 ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾಪರೀಕ್ಷೆಯಲ್ಲಿ ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸನಲ್ಲಿ(ಪ್ರಾ) 0.5 ರ‍್ಯಾಂಕ್ ಹಾಗೂ ಬಿಎಸ್‌ಸಿ ಅಗ್ರಿಯಲ್ಲಿ 3.5 ರ‍್ಯಾಂಕ್ ಪಡೆದುಕೊಂಡಿರುವುದು ಶ್ಲಾಘನೀಯವಾಗಿದೆ.ಇತ್ತೀಚೆಗೆ ಪ್ರಕಟಗೊಂಡ…

Read More

ಕೋ.ಚನ್ನಬಸಪ್ಪ ರಾಜ್ಯ ದತ್ತಿಪ್ರಶಸ್ತಿಗೆ ಸಾಹಿತಿ ರೂಪಾ ರಜಪೂತ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 11:ಕೋ.ಚನ್ನಬಸಪ್ಪನವರ 2026ರ ರಾಜ್ಯಮಟ್ಟದ ದತ್ತಿ ಪ್ರಶಸ್ತಿಯನ್ನು ಗ್ರಾಮೀಣ ಮಹಿಳೆ ಕವಿ, ಲೇಖಕಿರೂಪಾ ರಜಪೂತ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.ಗೌರವ ಕಾರ್ಯದರ್ಶಿಗಳಾದ ಡಾ.ಮಾಧವ ಗುಡಿ, ಶಿಲ್ಪಾ ಭಸ್ಮೆ ಗೌರವ ಕೋಶಾಧ್ಯಕ್ಷರಾದಅಭಿಷೇಕ ಚಕ್ರವರ್ತಿ, ಮಹಾದೇವಿ ತೆಲಗಿ ಆಯ್ಕೆ ಸಮಿತಿಯಲ್ಲಿಉಪಸ್ಥಿತರಿದ್ದರು.ಜೂ. 14ರಂದು ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಸಭಾಂಗಣದಲ್ಲಿ ರಾಜ್ಯಮಟ್ಟದ ದತ್ತಿ ನಿಧಿ ಪ್ರಶಸ್ತಿಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ…

Read More

ಅಭಿವೃದ್ಧಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯ-ಅಶೋಕ ಯಡಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತಿತರ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪತ್ರಕರ್ತರು ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‌ನ ಯುನಿಸೆಫ್ ಸಹಯೋಗದಲ್ಲಿ ಬುಧವಾರ…

Read More

ಜೂನ್ 15ರಂದು ಅಪ್ರೆಂಟಿಸ್ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜೂನ್ 15ರಂದು ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ‌.ಜಾನ್ಸನ್ ಲಿಫ್ಟ್ ಅಂಡ್ ಎಸ್ಕಲೇಟರ್ಸ ಕಂಪನಿ ಈ ಕ್ಯಾಂಪಸ್ ಸಂದರ್ಶನ ಆಯೋಜಿಸಿದೆ. ಐಟಿಐ ನ ನಾಬಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಯಲಿದೆ.ಆಸಕ್ತ ತರಬೇತಿದಾರರು ಸೂಕ್ತ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬೇಕು ಎಂದು ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯ ಸಂತೋಷ ಕರಿಗಾರ ಮಾಧ್ಯಮ…

Read More

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ ತರಬೇತಿಗೆ ವಿಜಯಪುರ ರೈತರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಆಯ್ದ 20 ಜನ ರೈತರ ತಂಡವು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದೆ.ನಿನ್ನೆ ಬುಧವಾರ ಸಂಜೆ ತಿಪಟೂರು ಅಕ್ಷಯಕಲ್ಪ ಕ್ಯಾಂಪಸ್ ಗೆ ತೆರಳುತ್ತಿರುವ ರೈತರಿಗೆ ಶುಭಕೋರಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು, ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಮತ್ತು ತೋಟಗಾರಿಕೆಯನ್ನು ಉತ್ತೇಜಿಸಲು ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್‌ಗಳ ಜಂಟಿ ಆಶ್ರಯದಲ್ಲಿ ಸಚಿವ ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ…

Read More

ಜೂ. 13ರಂದು ಜಿಲ್ಲಾ ಮಟ್ಟದ ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 11:ಜಿಲ್ಲಾ ಮಟ್ಟದ ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್ ಜೂ. 13ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ವರೆಗೆ ನಗರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅಮೇಚೂರು ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ರಾಜು ಬಿರಾದಾರ ತಿಳಿಸಿದ್ದಾರೆ.ಕೇಂದ್ರ ಸರ್ಕಾರದ ಸ್ಪೋರ್ಟ್ಸ್ ಅಥಾರಿಟಿ ಆಪ್ ಇಂಡಿಯಾ, ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೇಚೂರು ಸೈಕ್ಲಿಂಗ್ ಅಸೋಸಿಯೇಷನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್, ವಿಶಾಲ ಸೈಕಲ್ ಮಾಲ್, ವಿಜಯಪುರ ಸೈಕ್ಲಿಂಗ್…

Read More

ತಾಯಿ ಹಾಲು ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಿ: ಡಾ. ಮಾಸ್ತಿಹೊಳಿ ಧಾತ್ರಿ ಸಮಗ್ರ ಹಾಲುಣಿಸುವಿಕೆಯ ಮಹತ್ವದ ಕಾರ್ಯಾಗಾರ‌ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ಅವಧಿಗೂ ಮುನ್ನ ಶಿಶು ಜನನದಿಂದ‌ ಅಮೃತಕ್ಕೆ ಸಮಾನವಾದ ಎದೆಹಾಲು ಲಭ್ಯವಾಗದಿದ್ದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಹಾಲಿನ‌ ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಸಮಗ್ರ ಹಾಲುಣಿಸುವಿಕೆಯ ನಿರ್ವಹಣೆ ಕೇಂದ್ರ ಮತ್ತು ತಾಯಂದಿರ ಹಾಲಿನ ಬ್ಯಾಂಕ್ ಹಾಗೂ ಸುಶೇನಾ ಹೆಲ್ತ್ ಫೌಂಡೇಶನ್ ಹೈದ್ರಾಬಾದ ಇವರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ…

Read More

ಗ್ರಾಮ‌ಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 10:ಜಿಲ್ಲೆಯ ಸಿಂದಗಿ ತಾಲೂಕಿನ ಕೊಕಟನೂರ ಹಾಗೂ ಇಂಡಿ ತಾಲೂಕಿನ ಹಿಂಗಣಿ ಗ್ರಾಪಂ ನಲ್ಲಿ ಗ್ರಾಮ ಒನ್ ಫ್ರಾಂಚೈಸಿಗೆ ಇ- ಆಡಳಿತ ಆನ್ ಲೈನ್ ಅರ್ಜಿ‌ ಆಹ್ವಾನಿಸಿದೆ.ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆಗ್ರಾಮ ಒನ್ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಅಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಕೊಕಟನೂರ ಹಾಗೂ ಹಿಂಗಣಿ ಗ್ರಾಪಂನಲ್ಲಿ ಗ್ರಾಮ ಒನ್…

Read More

ಮೈಸೂರು ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ.10: ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ಧತಿಯಂತೆ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ. ಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಮೈಸೂರು ವಿವಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು https;//uucms.karnataka.gov.in ಆನ್‌ಲೈನ್…

Read More

ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನ ಆಚರಿಸಿದ ನಾಗಠಾಣದ ಚಿಣ್ಣರು

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 10:ಪ್ರತಿವರ್ಷ ಜೂನ್ 10 ರಂದು ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನವನ್ನಾಗಿ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ 2 ನೇ ವರ್ಗದ ವಿದ್ಯಾರ್ಥಿಗಳಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಪೆನ್ನುಗಳನ್ನು ಪ್ರದರ್ಶಿಸಿ ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನವನ್ನು ಆಚರಿಸಿದರು.ವಿದ್ಯಾರ್ಥಿ, ಶಿಕ್ಷಕ, ಕವಿ ಮತ್ತು ಬರಹಗಾರರಿಗೆ ಪೆನ್ನು ಅತ್ಯಂತ ಮುಖ್ಯ ವಸ್ತುವಾಗಿದೆ. ಪೆನ್ನು ಒಬ್ಬರ ಭಾವನೆಗಳು, ದೃಷ್ಟಿಕೋನಗಳು ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಹಾಯ ಮಾಡುವ ಪ್ರಮುಖ ಸಾಧನವಾಗಿದೆ. ಇದು ಭಾವನೆಗಳನ್ನು…

Read More