Latest posts

All
fashion
lifestyle
sports
tech

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ…

ಪ್ರಮುಖ ಸುದ್ದಿ

ಸಚಿವ ಎಂಬಿಪಿ ಸಾಧನೆಯನ್ನು ಪ್ರತ್ಯಕ್ಷವಾಗಿ ದರ್ಶನ ಮಾಡಿಸುತ್ತೇವೆ-ಗಣಿಹಾರ 01
02
ಮೇಲ್ಚಾವಣಿ ಕುಸಿತ ಪ್ರಕರಣ: ಬದುಕುಳಿದ ಎರಡು ಜೀವ- ಸಚಿವ ಎಂ. ಬಿ. ಪಾಟೀಲ್ ಭೇಟಿ ತಲಾ 5 ಲಕ್ಷ ಪರಿಹಾರ ಘೋಷಣೆ
03
ಮೋರಟಗಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ:ಮನೆ ಮೇಲ್ಚಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
04
ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

Popular

ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಣೆ
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು- ಸಿಎಂ ಡಿ. ಕೆ. ಶಿವಕುಮಾರ್
ಎಸ್‌ಐಆರ್ ಪ್ರಕ್ರಿಯೆಶೇ.90 ಮ್ಯಾಪಿಂಗ್ ಪೂರ್ಣ:ಜಿಲ್ಲಾಧಿಕಾರಿ ಡಾ. ಆನಂದ ಹೇಳಿಕೆ
ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಕಿತ್ತೂರ ಆಯ್ಕೆ

Latest posts

ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 4:ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪ್ರಾಮಾಣಿಕ, ನಿಷ್ಪಕ್ಷಪಾತ ಹಾಗೂ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ವಿಜಯಪುರದ ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ ಸೊಲ್ಲಾಪುರದ ಸ್ಟಾರ್ ನ್ಯೂಸ್ ಚಾನೆಲ್ ವತಿಯಿಂದ ನೀಡಲಾಗುವ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಿಸಲಾಗಿದೆ.ದೀಪಕ್ ಶಿಂತ್ರೆ ಅವರು ಹಲವು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ಮರಾಠಿ ಪತ್ರಿಕೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಜಿಲ್ಲೆಯ ವಿವಿಧ ವಿಷಯಗಳ ಕುರಿತು ಅವರು ನಿರಂತರವಾಗಿ ವರದಿಗಾರಿಕೆ ನಡೆಸಿದ್ದಾರೆ….

Read More

ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು- ಸಿಎಂ ಡಿ. ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.04 “ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು….

Read More

ಎಸ್‌ಐಆರ್ ಪ್ರಕ್ರಿಯೆಶೇ.90 ಮ್ಯಾಪಿಂಗ್ ಪೂರ್ಣ:ಜಿಲ್ಲಾಧಿಕಾರಿ ಡಾ. ಆನಂದ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ,ಜೂ.4:ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಶೇ.90ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆ ನಡೆಲಾಗುವುದು. ಅರ್ಹ ಯಾವೊಬ್ಬ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು. ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು…

Read More

ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಕಿತ್ತೂರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 4:ದಲಿತ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾಗಿ ರವಿ ಕಿತ್ತೂರ ನೇಮಕಗೊಂಡಿದ್ದಾರೆ.ಸಮಾಜಮುಖಿ ಹಾಗೂ ಸೃಜನಾತ್ಮಕ ಚಟುವಟಿಕೆಯಲ್ಲಿ ಸದಾ ತಮ್ಮನ್ನು ತಾವು ತೊಡಗಿಸಿಕೊಂಡು, ಸಾಮಾಜಿಕ ಹೋರಾಟ ಮತ್ತು ದಲಿತಪರ ಚಿಂತನೆಯ ವ್ಯಕ್ತಿಗಳಾದರವಿ ಕಿತ್ತೂರ ಅವರನ್ನು ವಿಜಯಪುರ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬಗ್ಗೆ ದಲಿತ ಸಾಹಿತ್ಯ ಪರಿಷತ್ ಬೆಳಗಾವಿ ವಿಭಾಗದ ಸಂಯೋಜಕ ಮೋಹನ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಗೋವಿಂದಪುರ ಹತ್ಯಾಕಾಂಡ: ಮತ್ತೆ ಆರು ಜನರ ಬಂಧನ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 4:ಭೀಮಾತೀರದ 6 ಜನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಪ್ರಮುಖ ಆರೋಪಿ ಸೇರಿ 6 ಜನರನ್ನು ಫೊಲೀಸರು ಬಂಧಿಸಿದ್ದಾರೆ.ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ ಸೇರಿದಂತೆ 6 ಜನರನ್ನು ವಶಕ್ಕೆ ಪಡೆಯಲಾಗಿದೆ.ಕಳೆದ ಮೇ 29 ರಂದು ಗೋವಿಂದಪುರದಲ್ಲಿ ಜಮೀನು ವಿವಾದ ಹಿನ್ನೆಲೆ ನಡೆದಿದ್ದ ಭೀಕರ ಹತ್ಯಾಕಾಂಡದಲ್ಲಿ ಚಂದ್ರಕಾಂತ ನಿರಾಳೆ, ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್‌, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬಿರ್‌ ಅತ್ತಾರ ಅವರು ಭೀಕರವಾಗಿ ಕೊಲೆಯಾಗಿದ್ದರುಜೂನ್ 1 ರಂದು…

Read More

ಸಂವಿಧಾನದ ಪ್ರತಿ ಹಿಡಿದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

ಸಪ್ತಸಾಗರ ವಾರ್ತೆ,ಬೆಂಗಳೂರು: ಜೂ.03: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಭಾರತದ ಸಂವಿಧಾನ ಪ್ರತಿ ಹಿಡಿದು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.ಲೋಕಭವನದ ಗಾಜಿನ ಮನೆಯಲ್ಲಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಬೋಧಿಸಿದ ಗೌಪ್ಯತಾ ಪ್ರಮಾಣ ವಚನವನ್ನು ಶಿವಕುಮಾರ್ ಅವರು ಬುಧವಾರ ಸ್ವೀಕರಿಸಿದರು.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕಾಂಗ್ರೆಸ್…

Read More

ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯಯುತ ಸಮಾಜ ನಿರ್ಮಿಸಿ-ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 3: ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ತಂಬಾಕು ಸೇವನೆ ಸೇವನೆ ತ್ಯಜಿಸಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ್ ಎಸ್. ಹಾಗರಗಿ ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ವಿಜಯಪುರದ ನಾಗೂರ್ ನರ್ಸಿಂಗ್ ಕಾಲೇಜು ಹಾಗೂ…

Read More

ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ನವದೆಹಲಿ, ಜೂನ್ 2: “ಕರ್ನಾಟಕದ ಜನರು ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ. ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆಯನ್ನು ಸೇರಿ ನಾನು ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಕರ್ನಾಟಕದಲ್ಲಿ ಹೊಸ ಯುವ ಯುಗ ಪ್ರಾರಂಭವಾಗಲಿದೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌.ದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಕ್ಕೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.“ನಾನು ಯಾವುದನ್ನೂ ಕನಸು ಎಂದು ಹೇಳುವುದಿಲ್ಲ. ಕಠಿಣ ಪರಿಶ್ರಮದ ಜೊತೆಗೆ ಸಮರ್ಪಣೆ ಎಂದು ಕರೆಯುತ್ತೇನೆ.‌…

Read More

ನಿಸ್ವಾರ್ಥದಿಂದ ಬದುಕಿ ಬೇರೊಬ್ಬರಿಗೆ ಬೆಳಕಾಗಿ: ಎನ್.ಎಂ. ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 2:ಐಸ್‌ಕ್ರೀಮ್ ಹಾಗೂ ಮೇಣದ ಬತ್ತಿಗೆ ಕರಗುವ ಗುಣವಿದೆ. ಆದರೆಕರಗುವಿಕೆಯ ಹಿಂದಿರುವ ಉದ್ಧೇಶ ವಿಭಿನ್ನವಾಗಿರುತ್ತದೆ. ಐಸ್‌ಕ್ರೀಮ್ಸಮಯ ಇರುವ ಮೊದಲೆ ನನ್ನನ್ನು ತಿಂದು ತೃಪ್ತನಾಗು ಎಂದುಹೇಳಿದರೆ ಮೇಣದ ಬತ್ತಿ ನಾನು ಕರಗುವ ಮೊದಲೇ ಈ ಜಗತ್ತಿಗೆ ಒಂದಷ್ಟುಬೆಳಕನ್ನು ಕೊಡುತ್ತೇನೆ ಎನ್ನುವ ಸಾರ್ಥಕತೆ ತೋರುತ್ತದೆ. ನಮ್ಮಬದುಕು ಸಹ ಮೇಣದ ಬತ್ತಿಯಂತೆ ಬೇರೊಬ್ಬರಿಗೆ ಬೆಳಕುನೀಡುವಂತಾಗಬೇಕು. ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಎನ್.ಎಂ. ಬಿರಾದಾರ ಹೇಳಿದರು.ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ…

Read More

ತತ್ವಾಧಾರಿತ, ದೇಶಭಕ್ತಿಯ ಚಿಂತನೆಯುಳ್ಳ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಜಗದೀಶ ಶೆಟ್ಟರ್

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 2 :ಬಿಜೆಪಿ ತತ್ವಾಧಾರಿತ, ದೇಶಭಕ್ತಿಯ ಚಿಂತನೆಯುಳ್ಳ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.ಕೊಲ್ಹಾಪೂರ ಕನೇರಿಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸನ್ನಿಧಿಯಲ್ಲಿ ನಡೆದ ವಿಜಯಪುರ ಜಿಲ್ಲಾ ಬಿಜೆಪಿ ಪ್ರಶಿಕ್ಷಣ ಶಿಬಿರವನ್ನು ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಎಂಬುದು ತತ್ವಾಧಾರಿತ ಸಿದ್ಧಾಂತವುಳ್ಳ ಪಕ್ಷ, ಆದರೆ ಕಾಂಗ್ರೆಸ್ ಪಕ್ಷ ಕೇವಲ ಕುಟುಂಬ ಹಾಗೂ ವೋಟ್ ಬ್ಯಾಂಕ್ ಆಧಾರಿತ ರಾಜಕಾರಣವನ್ನು ಮೈಗೂಢಿಸಿಕೊಂಡಿದೆ. ಕೋಟ್ಯಂತರ…

Read More