ಸಪ್ತಸಾಗರ ವಾರ್ತೆ, ಬೆಂಗಳೂರು, ಜು. 31:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆ ಸಚಿವರು, ಶಾಸಕರ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆ ಹಾಗೂ ಕಾರ್ಯಕ್ರಮಗಳ ಬಗ್ಗೆ ಗುರುವಾರ ಬೆಂಗಳೂರಿನಲ್ಲಿ ಚರ್ಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಶಾಸಕರಾದ ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ವಿಜಯಪುರ ಜಿಲ್ಲೆ ಸಚಿವರು, ಶಾಸಕರ ಜೊತೆಗೆ ಸಿಎಂ ಚರ್ಚೆ
