ಸಪ್ತಸಾಗರ ವಾರ್ತೆ, ವಿಜಯಪುರ,ಆ.7:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೧೨, ೧೩ ಹಾಗೂ ೧೪ರಂದು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಎಂದು ಆಶಾ ಸಂಘಟನೆ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಅವರು ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ ಮತ್ತು ಸರ್ಕಾರದ ನಿರೀಕ್ಷೆಯಂತೆ ಆಶಾ ತನ್ನ ಸೇವೆಯಿಂದ ಕಟ್ಟಕಡೆಯ ಜನರನ್ನೂ ಆರೋಗ್ಯವಂತರನ್ನಾಗಿಡಲು ಹಗಲು-ರಾತ್ರಿ ಶ್ರಮಿಸುತ್ತಿರುವರು. ಇವರ ಸೇವೆಗೆ ಸಮುದಾಯದಿಂದ ಸಿಗುವ ಗೌರವಾದರಗಳು ಸಂತಸ ನೀಡಿವೆಯಾದರೂ, ಸೇವೆ ಪಡೆದುಕೊಳ್ಳುವ ನಮ್ಮ ಸರ್ಕಾರಗಳು ಇವರ ಸೇವೆಗೆ ತಕ್ಕ ಪ್ರತಿಫಲ ನೀಡದೆ ನಿರಾಸೆಯಲ್ಲಿರುವಂತೆ ಮಾಡಿವೆ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲಿ ೨೦೨೫ ಜನವರಿ ೭ ರಿಂದ ೧೦ ನೇ ತಾರೀಖಿನÀವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದಿತ್ತು. ಆಗ ಮುಖ್ಯಮಂತ್ರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಏಪ್ರಿಲ್ ೨೦೨೫ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.೧೦,೦೦೦ ಗಳ ಗೌರವಧನವನ್ನು ನೀಡಲಾಗುವುದು. ರೂ.೧೦,೦೦೦ ಹೊರತುಪಡಿಸಿ, ಕಾಂಪೋನೆಟ್ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಟ್ಸ್ ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ. ೧೦,೦೦೦ ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಲಾಗಿತ್ತು. ಇದು ಕಿಂಚಿತ್ತೂ ಕಾರ್ಯಗತವಾಗಿಲ್ಲ. ಈ ಕುರಿತು ಕೂಡಲೇ ಸರ್ಕಾರÀ ಆದೇಶ ನೀಡಬೇಕು ಎಂದು ಆಗ್ರಹಿಸಿದರು.
ಈ ವರ್ಷದ ಬಜೆಟ್ನಲ್ಲಿ ಎಲ್ಲಾ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ಗೌರವ ಧನ ಹೆಚ್ಚಳ ಮಾಡಲಾಗುವುದು. ಎಂದು ಭರವಸೆ ಕೂಡಾ ನೀಡಲಾಗಿತ್ತು. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.೧೦೦೦ ಹೆಚ್ಚಿಸಿದಂತೆ ೪೨೦೦೦ ಆಶಾ ಕಾರ್ಯಕರ್ತೆಯರಿಗೆ ರೂ.೧೦೦೦ ಹೆಚ್ಚಳ ಮಾಡಬೇಕು. ಆದರೆ ಈ ಬಜೆಟ್ನಲ್ಲಿ ಕೇವಲ ೧೫೦೦೪ ಆಶಾಗಳಿಗೆ ಕಡಿಮೆ ಇದ್ದ ತಂಡ ಆಧಾರಿತ ಪ್ರೋತ್ಸಾಹಧನ ರೂ.೧೦೦೦ ಮಾತ್ರ ನೀಡಲಾಗಿದೆ ಎಂದು ಅವರು ಹೇಳಿದರು.
ಕೆಲವು ಬಹುದಿನಗಳ ಬೇಡಿಕೆಗಳ ಬಗ್ಗೆ ಸೂಕ್ತಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ನಿರ್ದೇಶಿಸಿದ್ದರೂ ಅದು ಕೂಡಾ ಇನ್ನೂ ಕಾರ್ಯಗತಗೊಂಡಿಲ್ಲ ಎಂದು ತಿಳಿಸಿದರು.
ಈ ತೀರ್ಮಾನಗಳನ್ನು ಆರೋಗ್ಯ ಇಲಾಖೆಯ ಆಯುಕ್ತರು ಸರ್ಕಾರದ ಪರವಾಗಿ ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್ಗೆ ಆಗಮಿಸಿ ಸಾವಿರಾರು ಆಶಾಗಳ ಮುಂದೆ ಬಂದು ಘೋಷಣೆ ಮಾಡಿದ್ದರು. ನಂತರ ಹೋರಾಟ ಹಿಂತೆಗೆದುಕೊಳ್ಳಲಾಯಿತು. ಮಾಧ್ಯಮಗಳಲ್ಲೂ ಕೂಡ ಅಧಿಕೃತವಾಗಿ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ. ಆಡಳಿತ ಪಕ್ಷದ ಹಲವಾರು ಸಚಿವರುಗಳು, ಶಾಸಕರು ಈ ಬಗ್ಗೆ ಪೋಸ್ರ್ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಆದರೆ ನೋವಿನ ವಿಷಯವೆಂದರೆ ಇಲ್ಲಿಯವರೆಗೆ ೭ ತಿಂಗಳು ಕಳೆದರೂ ಈ ಕುರಿತು ಸ್ಪಷ್ಟ ಆದೇಶ ಹೊರಬಿದ್ದಿಲ್ಲ ಎಂದರು.
ಮತ್ತೊಂದೆಡೆ, ಆಶಾಗಳಲ್ಲಿಯೇ ಒಬ್ಬರನ್ನು ಕಳೆದ ೧೦ ವರ್ಷಗಳಿಂದ ೨೦ಆಶಾಗಳಿಗೆ ಒಬ್ಬರಂತೆ ಸುಮರು ೨೦೦೦ ಅಶಾಗಳನ್ನು ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಂಡು ಧಿಡೀರನೆ ತೆಗೆದು ಹಾಕಿರುವರು. ೬೦ ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ಧಿಡೀರನೆ ತೆಗೆದು ನಿವೃತ್ತಿ ಮಾಡಿರುತ್ತಾರೆ. ೧೭ ವರ್ಷದಿಂದ ಸೇವೆ ಮಾಡಿದ ಈ ಆಶಾಗೆ ಯಾವುದೇ ಪರಿಹಾರ ನೀಡದೆ ಬೀದಿಗೆ ತಳ್ಳಿರುವರು. ಈಗ ಕಾರ್ಯ ನಿರ್ವಹಿಸುವ ಸುಮಾರು ೪೧೦೦೦ ಆಶಾಗಳಿಗೆ ಅವರ ಕೆಲಸದ ಮೌಲ್ಯಮಾಪನ ಮಾಡುವ ಆದೇಶ ಹೊರಡಿಸಿ ವಿವಿಧ ರೀತಿಯಲ್ಲಿ ಮೌಲ್ಯಮಾಪನ ಮಾಡಿಸುತ್ತಿದ್ದಾರೆ. ಮೌಲ್ಯಮಾಪನದ ಮಾದರಿಯನ್ನು ಸಂಘದಿAದ ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ಅವರು ತಿಳಿಸಿದರು.
ಆಶಾ ಆನ್ಲೈನ್ ದಾಖಲಾತಿಯನ್ನು (ಆಶಾ ಸಾಫ್ಟ್) ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಈಗಾಗಲೇ ಈ ಆನ್ಲೈನ್ ದಾಖಲಾತಿಯು ಸರಿಯಾಗಿ ದಾಖಲಾಗದಿರುವ ಬಗ್ಗೆ, ವೆರಿಫೈ ಮಾಡದಿರುವ ಬಗ್ಗೆ, ಹಲವಾರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಸಂಘದಿAದ ಹೋರಾಡುತ್ತಲೇ ಇದ್ದೇವೆ. ಈಗ ಇದನ್ನು ಮಾದರಿಯಾಗಿ ಇಟ್ಟುಕೊಂಡಲ್ಲಿ ತಪ್ಪು ಮಾಹಿತಿಯಿಂದ ಆಶಾಗಳನ್ನು ಕೈಬಿಡುವಂತಾಗುತ್ತದೆ. ಈಗಾಗಲೇ ರಾಜ್ಯದ ಆಶಾಗಳು ಕೋಟ್ಯಂತರ ರೂ.ಗಳ ನÀಷ್ಟವನ್ನು ಈ ಆನ್ಲೆöÊನ್ ದಾಖಲಾತಿಯಿಂದ ಅನುಭವಿಸುತ್ತಿರುವರು. ಇದರಿಂದ ಕೆಲಸ ಕಳೆದುಕೊಳ್ಳುವ ಆತಂಕವನ್ನು ಅನುಭವಿಸುತ್ತಿರುವರು ಎಂದವರು ಹೇಳಿದರು.
ಜನಸಂಖ್ಯೆ ವಿಂಗಡಣೆಯನ್ನು ಈಗಾಗಲೇ ಅಲ್ಲಿಯ ಭೌಗೋಳಿಕರಣಕ್ಕೆ ತಕ್ಕಂತೆ ವಿಂಗಡಿಸಿದ್ದಾರೆ. ಮತ್ತಷ್ಟು ಜನಸಂಖ್ಯೆ ಹೆಚ್ಚಿಸಿದಲ್ಲಿ ಆಶಾಗಳಿಗೆ ಕಾರ್ಯ ನಿರ್ವಹಿಸಲು ತೊಂದರೆ ಆಗುತ್ತದೆ. ೩-೪ ಹಳ್ಳಿಗಳು ಬಂದರೆ ಕಾರ್ಯ ನಿರ್ವಹಿಸಲು ಕಷ್ಟವಾಗುತ್ತದೆ. ಇದರಿಂದ ಆಶಾಗಳಿಗೆ ಆತಂಕ ಸೃಷ್ಟಿಯಾಗಿದೆ.
ಮುಖ್ಯಮಂತ್ರಿಗಳು ಕಳೆದ ೭ ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಜಾರಿ ಮಾಡಬೇಕೆಂದು ಮತ್ತು ಕೆಳಗಿನ ಹಕ್ಕೊತ್ತಾಯಗಳಿಗೆ ಆಗ್ರಹಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ. ಈ ಮುಂದೆಯೂ ಆಶಾ ಕಾರ್ಯಕರ್ತೆಯರು ಉನ್ನತ ಹಂತದ ಹೋರಾಟಕ್ಕೆ ಅಣಿಯಾಗಿ ಆ.೧೨, ೧೩, ೧೪ ಆಗಸ್ಟ್ ೨೦೨೫ ಮೂರು ದಿನಗಳಂದು ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ “ಮಾತುಕೊಟ್ಟಂತೆ ನಡೆದುಕೊಳ್ಳಬೇಕೆಂದು” ಈ ಮೂಲಕ ಆಗ್ರಹಿಸಲು ಮುಂದಾಗಿರುವರು. ಹಾಗೆಯೇ ಎಂದಿನಂತೆ ಎಲ್ಲಾ ಆಶಾ ಕಾರ್ಯಕರ್ತೆಯರು ಹೋರಾಟದ ಯಶಸ್ಸಿಗೆ ಒಗ್ಗಟ್ಟಿನಿಂದ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಸಂಘದಿದ ಕರೆ ನೀಡುತ್ತೇವೆ ಎಂದು ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟದ ಭಿತ್ತಿಪತ್ರವನ್ನು (ಪೋಸ್ಟರ್) ಕೂಡಾ ಬಿಡುಗಡೆ ಮಾಡಲಾಯಿತು.
ಆಶಾ ಮುಖಂಡರಾದ ಲಕ್ಷ್ಮಿ ಸೀಮಿಕೇರಿ, ಬಸಮ್ಮ ಹೆಳವರ, ಅಂಬಿಕಾ ಒಳಸಂಗ, ಮಲ್ಲಮ್ಮ ಹರಿಜನ, ಸುಮಂಗಲಾ ಪಡಸಾಲಿ, ಬಸಮ್ಮ ಪಾಟೀಲ, ಮಲ್ಲಮ್ಮ ಕಂಠಿ. ಹಾಗೂ ಸಂಘಟನಾಕಾರರಾದ ಶಿವಬಾಳಮ್ಮ ಕೊಂಡಗೂಳಿ, ಶಿವರಂಜನಿ ಎಸ್.ಬಿ. ಇದ್ದರು.