ಶಿಕ್ಷಕಿಯ ಮೇಲೆ ಹಲ್ಲೆ: ಕ್ರಮಕ್ಕೆ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.14:
ಕೆ ಜಿ ಫ್ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನ ಹಳ್ಳಿಯ ಎಚ್. ಪಿ .ಎಸ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಯ ತಂದೆಯೊಬ್ಬ ಶಿಕ್ಷಕಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ತೀವ್ರವಾಗಿ ಖಂಡಿಸಿದೆ.
ಎಸ್. ಮಂಜುಳ ಎಂಬ ಶಿಕ್ಷಕಿಯ ಮೇಲೆ ಕಾರಣವಿಲ್ಲದೆ ವಿದ್ಯಾರ್ಥಿಯ ತಂದೆ ಹಲ್ಲೆ ಮಾಡಿದ ಕೃತ್ಯ ಅಮಾನವೀಯ ಪೈಶಾಚಿಕ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ ಅವರು ಖಂಡಿಸಿದ್ದಾರೆ.
ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಯ ತಂದೆಯ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಶಿಕ್ಷಕಿ ಮಂಜುಳಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ರೀತಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕಾರ್ಯ ಮುಂದೆ ಆಗದ ಹಾಗೆ ಸರಕಾರಿ ನೌಕರರ ರಕ್ಷಣೆಗೆ ಇನ್ನೂ ಪ್ರಬಲ ಕಾನೂನು ರಚನೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Share this