ಆನಂದ ಕಂಬಾರಗೆಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 21:
ಜಿಲ್ಲೆಯ ತಿಕೋಟಾ ಪಿ ಎಂ ಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಮಾದರಿ ಶಾಲೆ ಆಂಗ್ಲ ಶಿಕ್ಷಕ ಆನಂದ ಕಂಬಾರ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಂದ ವಿದ್ಯಾರ್ಥಿ ಸ್ನೇಹಿ, ಇಂಗ್ಲಿಷ ವಿಷಯದ ರಾಜ್ಯ ಸಂಪನ್ಮೂಲ ಶಿಕ್ಷಕನಾಗಿ ಹಲವಾರು ಕಾರ್ಯಗಾರಗಳಲ್ಲಿ ಭಾಗವಹಿಸಿ ಹಲವಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿ, ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪ್ರಸ್ತುತ ತಿಕೋಟಾದಲ್ಲಿ ಆಂಗ್ಲ ಭಾಷೆ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಅಳಿಲು ಸೇವೆಯನ್ನು ಗುರುತಿಸಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡ ಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು,ಸೆಪ್ಟೆಂಬರ್ 30 ರಂದು ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.

Share