ಸಪ್ತ ಸಾಗರ ವಾರ್ತೆ ವಿಜಯಪುರ, ಸೆ.29 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಮಯ ಪ್ರಜ್ಞೆಯಿಂದ ಸಾಹಸ ಪ್ರದರ್ಶಿಸಿ, ಇತರರ ಪ್ರಾಣ ರಕ್ಷಣೆ ಮಾಡಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮಕ್ಕಳ ದಿನಾಚರಣೆ-2025 ಪ್ರಯುಕ್ತ ನೀಡಲಾಗುವ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
2024 ಆಗಸ್ಟ್ 1 ರಿಂದ 2025 ಜುಲೈ 31ರೊಳಗೆ ಸಾಹಸ ಪ್ರದರ್ಶಿಸಿ ಪ್ರಾಣ ರಕ್ಷಣೆ ಮಾಡಿದ ಬಾಲಕರಿಗೆ ಹೊಯ್ಸಳ ಹಾಗೂ ಬಾಲಕಿಯರಿಗೆ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000/- ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪ್ರದಾನ ಮಾಡಲಾಗುವುದು.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷ ಅತ್ಯುತ್ತಮ ಸೇವೆ ಮಾಡಿದ ವ್ಯಕ್ಯಿಗಳಿಗೆ ಹಾಗೂ ಸಂಸ್ಥೆಗಳಿಗೆ ಕ್ರಮವಾಗಿ ತಲಾ 25,000 ರೂ. ಹಾಗೂ 1 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 17ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ


