ಋತುಚಕ್ರ ರಜೆಯ ಸೌಲಭ್ಯ ಒದಗಿಸಲು ಸರ್ಕಾರದ ನಿರ್ಧಾರ: ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಮಹಿಳಾ ನೌಕರರಿಗೆ ವರ್ಷಕ್ಕೆ 12 ಋತುಚಕ್ರ ರಜೆಯ ಸೌಲಭ್ಯವನ್ನು ಒದಗಿಸಲು ಸರಕಾರ ನಿರ್ಧಾರ ಮಾಡಿದ್ದನ್ನು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಮಹಿಳೆಯರ ಸಾಂವಿಧಾನಿಕ ಸ್ಥಾನಮಾನ ಎತ್ತಿ ಹಿಡಿದಂತಾಗಿದೆ. ಏಕೆಂದರೆ ಇದು ಸಂವಿಧಾನದ 21 ನೇ ವಿಧಿಗನುಗುಣವಾಗಿ ಮಹಿಳೆಯರಿಗೆ ಘನತೆಯಿಂದ ಬದುಕುವ ಹಕ್ಕನ್ನು ಒದಗಿಸಿಕೊಟ್ಟಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಘನ ಸರ್ಕಾರವು ಈ ಐತಿಹಾಸಿಕ ಮಹತ್ವದ ನಿರ್ಧಾರ ಕೈಗೊಂಡ ಭಾರತದ ಪ್ರಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.
ಈ ಐತಿಹಾಸಿಕ ಮಹತ್ವದ ನಿರ್ಧಾರ ತೆಗೆದುಕೊಂಡ ಘನ ಸರ್ಕಾರದ ಮುಖ್ಯ ಮಂತ್ರಿ, ಉಪಮುಖ್ಯಮಂತ್ರಿಗಳಿಗೂ ಹಾಗೂ ಸಚಿವರುಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Share this