ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಬಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 18:
ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ರೌಡಿಶೀಟರ್ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆ
ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪೂರ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಯುನಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್.
ನಿನ್ನೆ ಓರ್ವನಿಗೆ ಚಾಕೂ ತೋರಿಸಿ 25 ಸಾವಿರ ಹಣ ಯುನಸ್ ದರೋಡೆ ಮಾಡಿದ್ದ.
ನಂತರ ಆತನು ಸ್ಕೂಟಿ ಸಹ ದರೋಡೆ ಮಾಡಿ ಪರಾರಿಯಾಗಿದ್ದ.
ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಯುನಸ್ ಆತನ ಸ್ವಗ್ರಾಮ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದತ್ತ ತೆರಳುತ್ತಿರುವ ಮಾಹಿತಿ ಅರಿತ ಪೊಲೀಸರು ಸಿಂದಗಿ ತಾಲೂಕಿನ ರಾಂಪುರ್ ಬಳಿ ಆರೋಪಿ ಯೂನಿಸ್ ನನ್ನು ಬಂಧಿಸಲು ಪೊಲೀಸರು ಹೊಂಚು ಹಾಕಿ ಕುಳಿತಿದ್ದರು. ಆಗ ಯುನಸ್ ಪೊಲೀಸರ ಮೇಲೆ ಚಾಕೂನಿಂದ ಹಲ್ಲೆ ಮಾಡಲು ಯುನಸ್ ಯತ್ನಿಸಿದ್ದಾನೆ. ಇಬ್ಬರು ಪೊಲೀಸ್ ಕಾನ್ಸಸ್ಟೇಬಲ್ ಹಾಗೂ ಇನ್ಸಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆಯತಪ್ಪಿ ಬಿದ್ದ ಇನ್ಸಪೆಕ್ಟರ್ ಪ್ರದೀಪ್ ತಳಕೇರಿ, ಈ ವೇಳೆ ಎಚ್ಚರಿಕೆ ನೀಡಲು ಗಾಳಿಯಲ್ಲಿ ಗುಂಡು‌ ಹಾರಿಸಿದ್ದಾರೆ. ಆದರೂ ಶರಣಾಗದ ಆರೋಪಿ ಯುನಸ್ ಕಾಲಿಗೆ ಇನ್ಸಪೆಕ್ಟರ್ ಪ್ರದೀಪ್ ತಳಕೇರಿ ಗುಂಡು ಹಾಕಿದ್ದಾರೆ. ಗಾಯಗೊಂಡ ಆರೋಪಿಗೆ ಸಿಂದಗಿ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಆರೋಪಿ ಯುನಸ್ ಮೃತಪಟ್ಟಿದ್ದಾಗಿ ಜಿಲ್ಲಾಸ್ಪತ್ರೆ ಮೂಲಗಳು ತಿಳಿಸಿವೆ.
ಮೃತ ಆರೋಪಿ ಯುನಸ್ ಎರಡು ಕೊಲೆ ಪ್ರಕರಣ, ಒಂದು ಕೊಲೆ ಯತ್ನ ಸೇರಿದಂತೆ 12 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದನು. ಈ‌ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

Share this