ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ,ನ.10:
ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೋಮವಾರ ದಿಢೀರ ಭೇಟಿ ನೀಡಿ,ಕಚೇರಿ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಕಚೇರಿ ಕಾರ್ಯ‌ನಿರ್ವಹಣೆ ಕುರಿತು ಮಾಹಿತಿ‌ ನೀಡಿದರು.

Share this