ಸಪ್ತಸಾಗರ ವಾರ್ತೆ,ವಿಜಯಪುರ, ನ. 11:
ಕಾಲುವೆಯಲ್ಲಿ ಜಾರಿ ಬಿದ್ದು ಓರ್ವ ಯುವತಿ ಸೇರಿ ಇಬ್ಬರು ಬಾಲಕರು ನಾಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದ ಬಳಿಯ ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಯಲ್ಲಿ ಸಂಭವಿಸಿದೆ.
ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಯಾದವರು ಒಂದೇ ಕುಟುಂಬದ ಇಬ್ಬರು ಬಾಲಕರು ಹಾಗೂ ಓರ್ವ ಯುವತಿ ಸೇರಿದ್ದಾರೆ.
ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಾಲಕರು ಹಾಗೂ ಯುವತಿ ಬಸಮ್ಮ ಕೊಣ್ಣೂರ (21) ಸಂತೋಷ ಕೊಣ್ಣೂರು (16) ಹಾಗೂ ರವಿ ಕೊಣ್ಣೂರು (15) ಕಾಲುವೆ ನೀರಲ್ಲಿ ನಾಪತ್ತೆಯಾಗಿದ್ದಾರೆ.
ಮೂವರ ಶೋಧಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಮುಂದಾಗಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಶೋಧನಾ ಕಾರ್ಯ ಮುಂದುವರೆದಿದೆ.
ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ನಾಪತ್ತೆ


