ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 25:
ನಗರದ ಇರ್ಫಾನ್ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಪತ್ರಿಕೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಬೀಳಗಿ ಅವರಿಗೆ ಡಿ. 27 ರಂದು ಬೆಳಗ್ಗೆ 10:30ಕ್ಕೆ ದಾವಣಗೆರೆಯ ವಿದ್ಯಾನಗರ ಬಡಾವಣೆಯಲ್ಲಿ ಇರುವ ಜಿಲ್ಲಾ ಕನ್ನಡ ಪರಿಷತ್ ಕುವೆಂಪು ಕನ್ನಡ ಭವನದಲ್ಲಿ ನಡೆಯುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ 6ನೇ ರಾಜ್ಯ ಭಾವೈಕ್ಯತೆ ಸಮ್ಮೇಳನದಲ್ಲಿ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದ್ದಾರೆ.
ಇರ್ಫಾನ್ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ


