ಮುದ್ದೇಬಿಹಾಳದಲ್ಲಿ ಅಕಾಲಿಕ ಆಲಿಕಲ್ಲು ಮಳೆ: ತೋಟಗಾರಿಕೆ ಬೆಳೆಗಳಿಗೆ ಅಪಾರ ನಷ್ಟ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:
ಜಿಲ್ಲೆಯ ಮುದ್ದೇಬಿಹಾಳ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಆಲಿಕಲ್ಲು ಮಳೆ ಬಿದ್ದಿದೆ.
ಕೆಲ ಹೊತ್ತು ಸುರಿದ ಆಲಿಕಲ್ಲು ಮಳೆಯಿಂದ ಜನರು ಕೂಲ್ ಕೂಲ ಆಗಿದ್ದಾರೆ.
ನಿತ್ಯ ಸುಮಾರು 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಜನರಿಗೆ ಅಕಾಲಿಕ ಆಲಿಕಲ್ಲು ಮಳೆ ತಂಪೆರೆಯಿತು.
ಸುಡು ಬಿಸಿಲಿನ ಮಧ್ಯೆ ಸುರಿದ ಆಲಿಕಲ್ಲು ಮಳೆಯಿಂದಾಗಿ
ರಸ್ತೆ ಮೇಲೆಲ್ಲ ರಾಶಿರಾಶಿ ಆಲಕಲ್ಲುಗಳು ಬಿದ್ದಿದ್ದು, ಜನರು, ಮಕ್ಕಳು
ಆಲಿಕಲ್ಲುಗಳನ್ನು ಪಾತ್ರೆಗಳಲ್ಲಿ ತುಂಬಿಕೊಂಡು ಹೋಗುತ್ತಿರುವುದು ಕಂಡು ಬಂತು.
ಅಕಾಲಿಕ ಆಲಿಕಲ್ಲು ಮಳೆಯು
ದ್ರಾಕ್ಷಿ, ದಾಳಿಂಬೆ ಮುಂತಾದ ತೋಟಗಾರಿಕೆ ಬೆಳೆಗಳಿಗೆ ಭಾರಿ ಹಾನಿಯಾಗಿದ್ದು, ಆಲಿಕಲ್ಲು ಮಳೆಯಿಂದ ಅಪಾರ ನಷ್ಟ ಉಂಟಾಗಿ ತೋಟಗಾರಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

Share this