ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26 :
ಜಿಲ್ಲೆಯ ಇಂಡಿ ಉಪವಿಭಾಗದ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 42 ಆರೋಪಿಗಳನ್ನು ಬಂಧಿಸಿ ಸುಮಾರು ₹1,20,04,750 ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳು ಸೇರಿದಂತೆ ವಿವಿಧ ಕಳವು ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,
ವಿಶೇಷ ತನಿಖಾ ತಂಡದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಒಟ್ಟು 20 ವಿವಿಧ ಸ್ವತ್ತಿನ ಪ್ರಕರಣಗಳನ್ನು ಭೇದಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಜೆಸಿಬಿ ಯಂತ್ರ, ಪೀಕಪ್ ವಾಹನ, ಸ್ಕಾರ್ಪಿಯೋ, ಟ್ರ್ಯಾಕ್ಟರ್ಗಳು ಹಾಗೂ ನೀರಿನ ಪಂಪ್ಸೆಟ್ಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಳ್ಳತನ ಹಾಗೂ ಸುಲಿಗೆ ಪ್ರಕರಣ: 42 ಆರೋಪಿಗಳ ಬಂಧನ


