ಸಚಿವ ಎಂ.ಬಿ. ಪಾಟೀಲ ಪ್ರವಾಸ


ಸಪ್ತಸಾಗರ ವಾರ್ತೆ, ವಿಜಯಪುರ, ಜು. 9: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು.11ರಿಂದ 14ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜು.11 ರಂದು ಬೆಳಗ್ಗೆ 10.30ಗಂಟೆಗೆ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ತಿಕೋಟಾ ತಾಲೂಕಿನ ಕೊರಬು ಗಲ್ಲಿ ರೂ.495 ಲಕ್ಷ ವೆಚ್ಚದಲ್ಲಿ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ನಂತರ ಮಧ್ಯಾಹ್ನ 12 ಗಂಟೆಗೆ ಮಲಕನದೇವರಹಟ್ಟಿ ಇಟರಾಯನಗುಡಿ ಗುಡಿಯಿಂದ ರೂ.495 ಲಕ್ಷ ವೆಚ್ಚದಲ್ಲಿ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ 5.2ಕಿ.ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಲಿದ್ದಾರೆ.
ಜು.12 ರಂದು ಬೆಳಗ್ಗೆ 10ಗಂಟೆಗೆ ವಿಜಯಪುರ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.200ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.100 ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಸ ನಿಯಂತ್ರಣ ಕಾಮಗಾರಿಗಳಿಗೆ ಚಾಲನೆ ನೀಡುವರು.
ನಂತರ ಬೆಳಗ್ಗೆ 10.30ಗಂಟೆಗೆ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.200 ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗೆ ಚಾಲನೆ ನೀಡುವರು.
ಜು.13ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 12ಗಟೆವರೆಗೆ ಬಿ.ಎಂ.ಪಾಟೀಲ ರಸ್ತೆ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.
ಜು.14 ರಂದು ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಉಪಸ್ಥಿತರಿರಲಿದ್ದಾರೆ. ನಂತರ ಸಂಜೆ 5ಗಂಟೆಗೆ ದಿ ನ್ಯೂಯಾರ್ಕ್ ಟೈಮ್ಸ್ ವರದಿಗಾರ ಕರಣದೀಪಸಿಂಗ್ ಅವರೊಂದಿಗೆ ಸಂದರ್ಶನ ನೀಡಲಿದ್ದಾರೆ ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Share this