ಸಪ್ತಸಾಗರ ವಾರ್ತೆ ವಿಜಯಪುರ, ಜು. 16:
ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ
