ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು.
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ ಉತ್ನಾಳ, ಪ್ರಿಯಾಂಕಾ ಬಸವರಾಜ ನಂದಿಹಾಳ, ಸ್ಪೂರ್ತಿ ಮಹೇಶ ಶಟಗಾರ, ಭಾಗ್ಯಶ್ರೀ ಬಸವರಾಜ ಕುಂಬಾರ, ಲಕ್ಷ್ಮಿ ಮನೋಜಕುಮಾರ ಕಟಗೇರಿ, ರಫಾಬೇಗಂ ಅಬ್ದುಲರಜಾಕ್ ಬಳಬಟ್ಟಿ, ಸ್ಪೂರ್ತಿ ಶಂಕರೆಪ್ಪ ಹಾವಿನಾಳ,ಆಯುಷ ವೀರೇಂದ್ರ ಲಂಬು, ಸಮರ್ಥ ಶ್ರೀಕಾಂತ ಕಲ್ಲಿಪ್ಪರಗಿ, ಶಿವಯೋಗಯ್ಯ ಮಲ್ಲಿಕಾರ್ಜುನಯ್ಯ ತೋರಗಲ್ಲಮಠ, ಸುದೀಪ ಶ್ರೀನಿವಾಸರಾವ ಸೂರಗೊಂಡ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣೇಶ್ವರಿ ಶಂಕರ ಜಲ್ಲಿ, ಪ್ರಾರ್ಥನಾ ಅಕ್ಷಯ ಕುಲಕರ್ಣಿ, ನವ್ಯ ರಮೇಶ ಕತ್ತಿ, ಝೋರೇನ್ ಫಯಾಜಾಹ್ಮದ್ ಕಲಾದಗಿ, ರಾಹುಲ ಸಂಜಯಕುಮಾರ ಕೊಂಡಗೂಳಿ, ಸಾತ್ವಿಕ್ ಗುರಪ್ಪ ಲೋಕುರಿ, ಉದಯೇಶ್ವರಯ್ಯ ಚಂದ್ರಶೇಖರಯ್ಯ ಹಿರೇಮಠ ಮತ್ತು ಅದ್ಲಿಯಾ ಬಾನು ತಂದೆ ಮಹ್ಮದ್ ಇರಫಾನ ಶೇಖ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ, ಹಿರಿಯ ಪತ್ರಕರ್ತ ಗೋಪಾಲ ನಾಯಕ, ಜಿಲ್ಲಾಧ್ಯಕ್ಷ ಪ್ರಕಾಶ ಬೆನ್ನೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ವಿ. ಶಟಗಾರ, ರಾಜ್ಯ ಸಮಿತಿ ಸದಸ್ಯರಾದ ಕೆ. ಕೆ. ಕುಲಕರ್ಣಿ, ಕೌಶಲ್ಯಾ ಪನಾಳಕರ, ಎಸ್ಪಿ ಲಕ್ಷ್ನಣ ನಿಂಬರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಅಮರೇಶ ದೊಡಮನಿ ಉಪಸ್ಥಿತರಿದ್ದರು.
ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
