ಸಪ್ತಸಾಗರ ವಾರ್ತೆ,ವಿಜಯಪುರ,ಜ.4:
ಕೃಷಿಯಲ್ಲಿ ನವೋದ್ಯಮವನ್ನು ಎಂಬ ಘೋಷವಾಕ್ಯದೊಂದಿಗೆ ರೈತರನ್ನು ಪ್ರೋತ್ಸಾಹಿಸಲು ಈ ಭಾಗದ ಹೆಚ್ಚಿನ ರೈತ ಫಲಾನುಭವಿಗಳು ತಮ್ಮ ಚಿಂತನೆಗಳನ್ನು ಆವಿಷ್ಕಾರವಾಗಿ ಪರಿವರ್ತಿನೆ ಕಂಡುಕೊಳ್ಳಲು ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ರೈತರಿಗೆ ಈ ಕೃಷಿ ಮೇಳದಲ್ಲಿ ಪರಿಚಯಿಸಲಾಗುತ್ತಿದೆ. ರೈತರು ಈ ಕೃಷಿ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಕೃಷಿಯೊಂದಿಗೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕೆಂದು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ ಹೇಳೀದರು.
ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಾಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ, ನಗರದ(ಹಿಟ್ನಳ್ಳಿ ಫಾರ್ಮ)ಪ್ರಾದೇಶಿಕ ಸಂಶೋಧನಾ ಕೇಂದ್ರದಲ್ಲಿ ಜ. 4 ರಿಂದ 6 ರವರೆಗೆ 3 ದಿನಗಳ ಕಾಲ ನಡೆಯುವ ಕೃಷಿ ಮೇಳ2025-26 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ರೈತರು ವಿವಿಧ ಬೆಳೆಗಳು ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳುಳ್ಳ ಪ್ರಾಯೋಗಿಕ ತಾಕುಗಳ ವೀಕ್ಷಣೆ, ವಿಚಾರ ಗೋಷ್ಠಿ, ಪೌಷ್ಟಿಕತೆ ಮತ್ತು ಆರ್ಥಿಕ ಭದ್ರತೆಗಾಗಿ ಸಾವಯವ ಮತ್ತು ನೈಸರ್ಗಿಕ ಕೃಷಿ, ಕೃಷಿ ಉದ್ದಿಮೆ ಅಭಿವೃದ್ಧಿ ಮತ್ತು ಮಾರುಕಟ್ಟೆ ಹಾಗೂ ಸುಸ್ಥಿರ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳು ಎಂಬ ವಿಷಯಗಳ ಮೇಲೆ ಈ ಕೃಷಿ ಮೇಳದಲ್ಲಿ ಚರ್ಚಾ ಗೋಷ್ಠಿ ರೈತರೊಂದಿಗೆ ವಿಚಾರ ವಿನಿಮಯ ಜರುಗಲಿವೆ ಅದರೊಂದಿಗೆ ಒಣ ಬೇಸಾಯ ತಂತ್ರಜ್ಞಾನ, ಹಿಂಗಾರಿ ಜೋಳದ ತಳಿ ಅಭಿವೃದ್ಧಿ, ಮಳೆ ನೀರು ಕೊಯ್ಲು, ಜೈವಿಕ ಗೊಬ್ಬರಗಳ ಉತ್ಪಾದನೆ ಹಾಗೂ ಬಳಕೆ, ಕಡಲೆ ಮತ್ತು ತೋಗರಿಯ ತಳಿಗಳು. ಎರೆಹುಳು ತಂತ್ರಜ್ಞಾನ, ಸಾವಯವ ಕೃಷಿ, ಕೃಷಿ ಸ್ಪಾರ್ಟಆಪ್, ನೈಸರ್ಗಿಕ ಕೃಷಿ, ಪಶು ಸಂಗೋಪನೆ, ಕೃಷಿ ಹವಾಮಾನ ಮಾಹಿತಿ, ಕೃಷಿ ಯಾಂತ್ರಿಕತೆ, ಬೀಜೋತ್ಪಾದನೆ, ಬೀಜ ಸಂಸ್ಕರಣೆ, ಕೃಷಿ ಮಾರುಕಟ್ಟೆ/ ಗೃಹ ವಿಜ್ಞಾನ ಮಾಹಿತಿ, ಬೃಹತ್ ಜಲಾನಯನ ಅಭಿವೃದ್ಧಿ ಪ್ರಾತ್ಯಕ್ಷಿಕೆ. ಮಣ್ಣು ಮತ್ತು ನೀರು ಸಂರಕ್ಷಣಾ ಕ್ರಮಗಳ ಕುರಿತು ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ರೈತ ಭಾಂದವರು ಸಮಗ್ರ ಮಾಹಿತಿಂiÀiನ್ನು ಪಡೆದುಕೊಂಡು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವಂತೆ ಅವರು ಕರೆ ನೀಡಿದರು.
ದೇವಹಿಪ್ಪರಗಿ ಮತಕ್ಷೆತ್ರದ ಶಾಸಕ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ್ ಕೃಷಿ ಮೇಳದಲ್ಲಿ ಸ್ಥಾಪಿಸಲಾಗಿರುವ ಮಳಿಗೆಗಳನ್ನು ವೀಕ್ಷಿಸಿ ಮಾತನಾಡಿ, ರೈತರಿಗೆ ಉಪಯುಕ್ತವಾದ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು ಕೃಷಿಯಲ್ಲಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಬಳಸಿಕೊಂಡು ರೈತರು ಅಭಿವೃದ್ಧಿ ಹೊಂದುವಂತೆ ಅವರು ಕರೆ ನೀಡಿದರು.
ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಕೃಷಿ ಇಲಾಖೆಯಿಂದ ಪ್ರಕಟಗೊಂಡ ಕೃಷಿ ಪ್ರಕಟಣೆಗಳನ್ನು ಬಿಡುಗಡೆಗೊಳಿಸಿ, ೩ ದಿನಗಳ ಕಾಲ ನಡೆಯುವ ಈ ಕೃಷಿ ಮೇಳದಲ್ಲಿ ರೈತರಿಗಾಗಿ ಅಭಿವೃದ್ಧಿ ಪಡಿಸಿದ ಅತ್ಯಾಧುನಿಕ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮಳಿಗಗಳು ಇದ್ದು ರೈತರು ಈ ಕೃಷಿ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಹೇಳಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ.ಎಲ್ ಪಾಟೀಲ್ ಪ್ರಾಸ್ಥಾವಿಕವಾಗಿ ಮಾತನಾಡಿ, ಈ ವರ್ಷದ ಕೃಷಿ ಮೇಳದ ಅಗ್ರಿಬ್ಯುಸಿನೆಸ್ ಇನ್ಕೂಬಟರ್ 2019ರಲ್ಲಿ ಪ್ರಾರಂಭಿಸಲಾಗಿದ್ದು, ಕೃಷಿ ನವೋದ್ಯಮಕ್ಕೆ ಪ್ರೋತ್ಸಾಹಿಸಲು ಅನುಕೂಲವಾಗಿದೆ. ಈಗಾಗಲೇ 3 ನವೋದ್ಯಮಗಳು ಕಾರ್ಯ ನಿರ್ವಹಿಸುತ್ತಿದ್ದು, ದ್ರಾಕ್ಷಿಯಲ್ಲಿ ರೋಬೋಟ್ ಚಾಲಿತ ಸಿಂಪರಣೆ, ಸೌರ ವಿದ್ಯುತ್ ಚಾಲಿತ ಕುಡಿ ಚೂಟುವ, ಸಿಂಪರಣೆ ಹಾಗೂ ಕಳೆ ತೆಗೆಯುವ ಯಂತ್ರಗಳ ತಯಾರಿಕೆ, ಬೆಂಚ್ ಗ್ರಾಪ್ಟಿಂಗ್ ತಂತ್ರಜ್ಞಾನ ಅಳವಡಿಕೆ ಮಾಹಿತಿ ನೀಡಲಾಗುತ್ತಿದೆ. ಕೃಷಿ ಮೇಳದಲ್ಲಿ ಒಟ್ಟು 200 ಮಳಿಗೆಗೆಳನ್ನು ಹಾಕಲಾಗಿದ್ದು ಅದರಲ್ಲಿ 10 ಯಂತ್ರೋಪಕರಣ,10 ಊಟದ ಮಳಿಗೆ, ರೈತರ ಕಬ್ಬಿನ ವಿವಿಧ ಉತ್ಪನ್ನಗಳ ಕುರಿತ ಕಬ್ಬಿನ ಅಂಕಣ, ಶಿರಿಧಾನ್ಯ ಮಳಿಗೆ, ಕೃಷಿ ಕೌಶಲ್ಯ ಆಧಾರಿತ ಮಳಿಗೆ ಹಾಗೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ರೈತರು ಈ ಮೇಳದ ಲಾಭವನ್ನು ಪಡೆದುಕೊಳ್ಳಬೇಕು ಎಂದು ಅವರು ಹೆಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ರೈತರು ಇಂದು ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ಸಮಗ್ರ ಬದಲಾವಣೆಯತ್ತ ಸಾಗಿ ಕೃಷಿಯಲ್ಲಿ ಹೊಸತನ ತರುವ ಚಿಂತನೆ ಹೊಂದಬೇಕು ಹಾಗೂ ನೂತನ ತಂತ್ರಜ್ಞಾ ಅಳವಡಿಸಿಕೊಂಡು ಕೃಷಿ ಪ್ರಗತಿ ಹೊಂದಬೇಕು ಎಂದು ಅವರು ಹೆಳಿದರು.
ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾದ ಶಿವಾನಗೌಡ ಎಸ್. ಬಿರಾದಾರ ಮಾತನಾಡಿದ ಕೃಷಿ ಮೇಳವು ರೈತರ ಹಬ್ಬವಾಗಿದೆ ಇಂದಿನ ಆಹಾರ ಪದ್ಧತಿ ಹೇಗಿರಬೇಕು, ಯಾವ ಋತುವಿನಲ್ಲಿ ಯಾವ ಬೆಳೆಗಳನ್ನು ಬೆಳೆಯಬೇಕು ಎಂಬ ಕುರಿತು ಕೃಷಿ ಮಹಾವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನಿಗಳು ರೈತರಿಗೆ ನಿರಂತರವಾಗಿ ಮಾರ್ಗದರ್ಶನ, ಅನೇಕ ಸಂಶೋಧನೆಗಳು, ತರಬೇತಿಗಳು ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಹಿಂದಿನ ಕಾಲದ ಬಿತ್ತನೆ ವಿಧಾನಗಳು ಮತ್ತು ಇಂದಿನ ಆಧುನಿಕ ಬಿತ್ತನೆ ಕ್ರಮಗಳಲ್ಲಿ ಅಪಾರ ಬದಲಾವಣೆಗಳು ಕಂಡುಬರುತ್ತಿವೆ. ಹೊಸ ತಂತ್ರಜ್ಞಾನ, ಸುಧಾರಿತ ಬೀಜ, ನೀರಾವರಿ ವ್ಯವಸ್ಥೆ ಹಾಗೂ ಸಮಗ್ರ ಕೃಷಿ ಪದ್ಧತಿಗಳಿಂದ ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಾಧ್ಯವಾಗಿದೆ ರೈತರು ತಮ್ಮ ಬಳಿ ಇರುವ ಜಮೀನನ್ನು ಮಾರದೆ, ಮಣ್ಣಿನ ಆರೋಗ್ಯ ಕಾಪಾಡುವ ದಿಸೆಯಲ್ಲಿ ಕಾರ್ಯನಿರ್ವಹಿಸಿ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ರೈತರಲ್ಲಿ ಮನವಿ ಮಾಡಿದರು.
ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಿಗೆ ಸನ್ಮಾನ: ರೈತ ಪಂಡಿತ ಗೌರವ ಪಡೆದ ಬತಗುಣಕಿ ರೈತರಾದ ಮುದ್ದುಗೌಡ ಪಾಟೀಲ್ ಮಾತನಾಡಿ, ಇಂದಿನ ರೈತರು ರಾಸಾಯನಿಕ ಕೃಷಿಯಿಂದ ದೂರ ಸರಿದು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ನೈಸರ್ಗಿಕ ಹಾಗೂ ಸಾವಯವ ಕೃಷಿಯಿಂದ ಪರಿಸರ ಹಾನಿ ಕಡಿಮೆಯಾಗುತ್ತದೆ, ಮಣ್ಣಿನ ಫಲವತ್ತತೆ ಕಾಪಾಡಬಹುದು ಮತ್ತು ಮುಂದಿನ ಪೀಳಿಗೆಗೆ ಆರೋಗ್ಯಕರ ಆಹಾರ ವ್ಯವಸ್ಥೆ ನೀಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಹೆಗಡಿಹಾಳ ಗ್ರಾಮದ ರೈತರಾದ ಕಾಶಿರಾಯ ಬಿರಾದಾರ, ಅಥರ್ಗಾದ ಬಶೀರಅಹಮ್ಮದ ಬಳಿಗಾರ, ರೈತ ಮಹಿಳೆ ಅನಿತಾ ಪಾಟೀಲ ಮಾತನಾಡಿದರು.
ಕೃಷಿ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕರಾದ ಡಾ. ಮಂಜುನಾಥ ಎಮ್.ವಿ, ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಾದ ಡಾ. ಕೃಷ್ಣರಾಜ ಪಿ, ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಪಾರ್ವತಿ ಕುರ್ಲೆ, ಸುರೇಶ ಘೋಣಸಗಿ, ಶಿವಾನಂದ ಮಂಗಾನವರ, ಬಸವರಾಜ ಕುಂದಗೋಳಮಠ, ವೀರನಗೌಡ ಪೊಲೀಸಗೌಡರ, ಕೃಷಿ ಮಹಾವಿದ್ಯಾಲಯ ಹಾಗೂ ವಿದ್ಯಾಧಿಕಾರಿಗಳಾದ ಡಾ. ಎಸ್.ಬಿ. ಜಗ್ಗೀನವರ, ಸಹ ವಿಸ್ತರಣಾ ನಿರ್ದೇಶಕರಾದ ಎಮ್.ಎಮ್ ಜಮಾದಾರ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಎಸ್.ಎಮ್ ವಸ್ತçದ ಪ್ರಗತಿ ರೈತರು ಹಾಗೂ ಇತರರು ಉಪಸ್ಥಿತರಿದ್ದರು.
ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಶಾಸಕ ವಿಠ್ಠಲ ಕಟಕದೊಂಡ


