ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ ಆಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 25 :ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ರತ್ನ, ಮಾಜಿ ಪ್ರಧಾನಮಂತ್ರಿ, ಮಹಾನ್ ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವನ್ನಾಗಿ ಅತ್ಯಂತ ಶ್ರದ್ಧೆ ಹಾಗೂ ಗೌರವದಿಂದ ಆಚರಿಸಲಾಯಿತು.ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ದಿ.ಅಟಲ್ ಬಿಹಾರಿ ವಾಜಪೇಯಿ ಸಮೃದ್ಧ ಭಾರತ ನಿರ್ಮಾಣದ ದಿವ್ಯ ಕನಸು ಹೊಂದಿದ್ದ ಶ್ರೇಷ್ಠ ನಾಯಕ,…


