saptsagar_admin

ಕುಂಚದಲ್ಲಿ ಪ್ರಾಚೀನ ಸ್ಮಾರಕಗಳ ಸೆರೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.14: ಇಲ್ಲಿನ ಕೇಂದ್ರ ಬಸ್ ನಿಲ್ದಾಣ ಸಮೀಪದ ಹಳೆಯ ತಹಶೀಲದಾರ ಕಚೇರಿ ರಸ್ತೆಯಲ್ಲಿರುವ ಎತ್ತರವಾದ ಐತಿಹಾಸಿಕ ಸ್ಮಾರಕ ಸಾಥಮಂಜಿಲ್ ಹಾಗೂ ಜಲಮಂಜಿಲ್ ಬಳಿ ಶನಿವಾರ ಸಂಜೆ ಮಹಾರಾಷ್ಟ್ರದ ಕೊಲ್ಹಾಪುರದ ಹವ್ಯಾಸಿ ಚಿತ್ರಕಲಾವಿದರು ಹಾಗೂ ವಾಸ್ತುಶಿಲ್ಪಿಗಳು ಗುಂಪು ಗುಂಪಾಗಿ ಕುಳಿತು ಸ್ಮಾರಕಗಳ ಚಿತ್ರಬಿಡಿಸುತ್ತಿದ್ದುದು ಸಾರ್ವಜನಿಕರ ಗಮನ ಸೆಳೆಯಿತು.ಕೊಲ್ಹಾಪುರದ ಸುಮಾರು 30 ಜನ ಹವ್ಯಾಸಿ ಚಿತ್ರಕಲಾವಿದರು ಹಾಗೂ ವಾಸ್ತುಶಿಲ್ಪಿಗಳನ್ನೊಳಗೊಂಡ ತಂಡವು ಪ್ರಾಚೀನ ಸ್ಮಾರಕಗಳ ಚಿತ್ರ ಬಿಡಿಸುವ ಮೂರು ದಿನಗಳ ಶಿಬಿರವನ್ನು ನಗರದಲ್ಲಿ ಹಮ್ಮಿಕೊಂಡಿದೆ.ಶುಕ್ರವಾರ ಇಬ್ರಾಹಿಂ ರೋಜಾ,…

Read More

ಸೆ.15 ರಂದುವಿದ್ಯುತ್ಪೂರೈಕೆಯಲ್ಲಿವ್ಯತ್ಯಯ

ಸಪ್ತಸಾಗರ ವಾರ್ತೆ ವಿಜಯಪುರ,ಸೆ.13 :ನವರಸಪುರ ಶಾಖಾ ವ್ಯಾಪ್ತಿಯಲ್ಲಿ ಹೆಚ್.ಟಿ ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಸೇನಾ ನಗರ ಫೀಡರ್‌ನ ಮೇಲೆ ಬರುವ ಟ್ರೇಝರಿ ಕಾಲೋನಿ, ರಾಮದೇವ ನಗರ,ಅಯ್ಯಪ್ಪ ಸ್ವಾಮಿ ದೇವಸ್ಥಾನ,ಇಟಗಿ ಕಾಲೋನಿ, ವೇದಾಂತ ಹಾಸ್ಪಿಟಲ್, ನಿಂಬರಗಿ ಬಡಾವಣೆ, ಕುಲಕರ್ಣಿ ಲೇಔಟ್, ಖುರೇಷಿ ಕಾಲೋನಿ ಹತ್ತಿರದ ಪ್ರದೇಶಗಳಲ್ಲಿ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಮತ ಮೋಸದ ಬಗ್ಗೆ ಜಾಗೃತಿ ಮೂಡಿಸಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 13:ವಿಜಯಪುರ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ನಡೆಯಿತು.ಕೆ.ಪಿ.ಸಿ.ಸಿ. ಸೇವಾದಳದ ರಾಜ್ಯ ಅಧ್ಯಕ್ಷ ಎಂ. ರಾಮಚಂದ್ರಪ್ಪನವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ವಿಜಯಪುರ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೇಂದ್ರ ಸರಕಾರದ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ನಿರ್ದೆಶನದ ಮೇರೆಗೆ ಮತಪಟ್ಟಿಗಳಲ್ಲಿರುವ ದೋಷ ಹಾಗೂ ಮತ ಮೋಸದ ಕುರಿತು ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು…

Read More

ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಹಿಂದಿ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 13: ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧೀನದಲ್ಲಿ ನಡೆಯುವ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಹಿಂದಿ ದಿನವನ್ನು ಆಚರಿಸಲಾಯಿತು.ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಮತ್ತು ಶಾಲೆಯ ನಾಮಿನಿ ಚೇರ್ಮನ್ ಎಸ್.ಎಚ್. ನಾಡಗೌಡ ಅವರು ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ಸಂಸ್ಥೆಯ ಹಾಗೂ ಶಾಲೆಯ ಆಡಳಿತಾಧಿಕಾರಿಗಳು ಹಾಗೂ ಸಿಎಒ ಎಚ್. ವೆಂಕಟೇಶ ಮತ್ತು ಶಾಲೆಯ ಪ್ರಾಚಾರ್ಯೆ ವಿಜಯಲಕ್ಷ್ಮೀ ಪಟ್ಟೇದ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಇದೇ…

Read More

ಕ್ಯಾಂಪಸ್ ಸಂದರ್ಶನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆಯ್ಕೆ.

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 13: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್.‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ, ಎಂ.ಬಿ.ಎ. ವಿಭಾಗದಲ್ಲಿ ನಾನಾ ಕಾರ್ಪೋರೇಟ್‌ ಕಂಪನಿಗಳು ನಡೆಸಿದ ಕ್ಯಾಂಪಸ್‌ ಸಂದರ್ಶನದಲ್ಲಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾನಾ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.ಕುಮಾರ ಅಭಿಷೇಕ ಬಿಲ್ಲದ, ಕಾವ್ಯಾ ಹಿರೇಮಠ ಅವರು ಪುಣೆಯ ಡಿಸೈನ್‌ ಕರ್ವ ಟೆಕ್ನಾಲಜಿ ಕಂಪನಿಗೆ ಆಯ್ಕೆಯಾದರೆ, ನಿವೇದಿತಾ ತೊಂಡಿಹಾಳ, ಸಚೀನ ಪಟ್ಟಣಶೆಟ್ಟಿ, ಬಸವರಾಜ ದಡ್ಡಿಮನಿ, ಅರುಣ ಮೊಪಗಾರ ಅವರು ಜಿಕ್ಸಿಸ್‌…

Read More

ಆದರ್ಶ ಶಿಕ್ಷಕನಿಗೆ ಸಾರೋಟದಲ್ಲಿ‌ ಭವ್ಯ ಮೆರವಣಿಗೆ: ಕರ್ತವ್ಯ ನಿರ್ವಹಿಸುವ ಶಾಲೆಗೆ ₹ 51 ಸಾವಿರ ದೇಣಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12: ತಾಲ್ಲೂಕಿನ ಜಂಬಗಿ (ಆ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ರಾಜಕುಮಾರ ಮಾಳಿ ಅವರಿಗೆ 2025-26 ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ಪ್ರಯುಕ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮಸ್ಥರು ಸಾರೋಟದಲ್ಲಿ ಭವ್ಯ ಮೆರವಣಿಗೆ ಮಾಡುವ ಮೂಲಕ ಗೌರವ ಸಲ್ಲಿಸಿದರು.ಸಾರೋಟದಲ್ಲಿ ಮುಖ್ಯೋಪಾಧ್ಯಾಯನಿ ಎಲ್.ಎಂ‌. ದಿಗ್ಗಾಯಿ ಆಸೀನರಿದ್ದರು.ಶಿಕ್ಷಕ ಮಾಳಿ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿರುವುದಕ್ಕೆ ಗ್ರಾಮಸ್ಥರು, ಹಿರಿಯರು, ಯುವಕರು, ಮಕ್ಕಳು ಖುಷಿ ಇಮ್ಮಡಿಗೊಂಡಿತ್ತು. ಮೆರವಣಿಗೆ ಸಾಗುವಾಗ ವಾದ್ಯ…

Read More

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12:ಜಿಲ್ಲೆಯ ಅಲಮೇಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಒಟ್ಟು 10,69,500 ರೂ. ಮೌಲ್ಯದ ಚಿನ್ನ ಬೆಳ್ಳಿ ಹಾಗೂ ನಗದು ಜಪ್ತಿ ಮಾಡಿಕೊಂಡಿದ್ದಾರೆ.ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದ ಶರಣಬಸು ಜಾಲವಾದ, ಪ್ರಕಾಶ ಕಂಬಾರ ಬಂಧಿತ ಆರೋಪಿಗಳು.ಬಂಧಿತ ಆರೋಪಿತರಿಂದ 8,60,000 ಮೌಲ್ಯದ 86 ಗ್ರಾಂ. ಬಂಗಾರದ ಆಭರಣಗಳು,67,000 ಮೌಲ್ಯದ 67 ಗ್ರಾಂ ಬೆಳ್ಳಿ ಆಭರಣ ಹಾಗೂ ರೂ. 1,25,000 ಮೌಲ್ಯದ 5…

Read More

ಸೆ. 14 ರಂದು ಮಹಾಲಕ್ಷ್ಮಿ ಬ್ಯಾಂಕ್ ವಾರ್ಷಿಕ ಸರ್ವ ಸಾಧಾರಣ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12: ನಗರದ ಮಹಾವೀರ ಕಾಲೋನಿಯಲ್ಲಿರುವ ಶ್ರೀ ಸಂಗನಬಸವ ಸಮುದಾಯ ಭವನದಲ್ಲಿ ಸೆ. ೧೪ ರಂದು ಬೆಳಿಗ್ಗೆ ೧೧ ಕ್ಕೆ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ನಿಯಮಿತ ೯೫ ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಕರೆಯಲಾಗಿದೆ.ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯರು ಸಭೆಗೆ ಪಾಲ್ಗೊಳ್ಳಬೇಕು ಎಂದು ವ್ಯವಸ್ಥಾಪಕ ಪದ್ಮಾವತಿ ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಹೆಸ್ಕಾಂ ಗ್ರಾಮೀಣ ಉಪ ವಿಭಾಗವನ್ನು ಸ್ಥಳಾಂತರ ಮಾಡದಿರಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12 : ಹೆಸ್ಕಾಂ ಗ್ರಾಮೀಣ ಉಪ ವಿಭಾಗವನ್ನು ಶಿವಗಿರಿಗೆ ಸ್ಥಳಾಂತರ ಮಾಡುವುದನ್ನು ತಡೆಹಿಡಿಯುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಹೆಸ್ಕಾಂ ಅಧೀಕ್ಷಕ ಅಭಿಯಂತರ ಅವರ ಮೂಲಕ ಶುಕ್ರವಾರ ಹುಬ್ಬಳ್ಳಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ್ ಕಟಕದೊಂಡ ಅವರಿಗೂ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹೊಸ ಕಟ್ಟಡವನ್ನು ಕಟ್ಟಿಸಿರುತ್ತೀರಿ ಅಂತ ಅಲ್ಲಿಗೆ ಗ್ರಾಮೀಣ ಉಪವಿಭಾಗವನ್ನು ಸ್ಥಳಾಂತರ…

Read More

ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12:ದ್ರಾಕ್ಷಿ ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ರೈತ ಸಂಘ ಶುಕ್ರವಾರ ಮನವಿ ಸಲ್ಲಿಸಿತು.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ,ಇಡೀ ಕರ್ನಾಟಕದಲ್ಲಿ ಅಂದಾಜು 1 ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ. ವಿಜಯಪುರ ಜಿಲ್ಲೆಯಲ್ಲಿಯೇ ಶೇ. 70ರಷ್ಟು ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ 15-20 ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ. ಆದರೆ ದಲ್ಲಾಳಿಗಳ…

Read More