saptsagar_admin

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 :ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ…

Read More

ತಿಕೋಟಾ-ಬಬಲೇಶ್ವರಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಅಧಿಸೂಚನೆ : ಆಕ್ಷೇಪಣೆಗೆ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಜಿಲ್ಲೆಯ ತಿಕೋಟಾ ಹಾಗೂ ಬಬಲೇಶ್ವರ ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ, ಉಪವಿಭಾಗಾಧಿಕಾರಿಗಳು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ ಹೊರಡಿಸಿದ ಅಧಿಸೂಚನೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಸಲಹೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಉಪವಿಭಾಗಾಧಿಕಾರಿಗಳು ವಿಜಯಪುರ ಇವರಿಗೆ ದಿನಾಂಕ 04-10-2025ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ಮೀರಿ ಬಂದ ಯಾವುದೇ ಸಲಹೆ ಹಾಗೂ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ. ಎಲ್ಲ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿದ ನಂತರ…

Read More

ಬೆಳೆ ಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಕೈ ಬಿಟ್ಟುಹೋಗದಂತೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೆಲವು ತಾಲೂಕಿನಲ್ಲಿ ರೈತರ ಬೆಳೆ ಹಾನಿಯಾಗಿದ್ದು, ಅತಿವೃಷ್ಟಿಯಿಂದಾಗಿ ಬೆಳೆ ಹಾನಿ ಕುರಿತು ಕೈಗೊಂಡ ಜಂಟಿ ಸಮೀಕ್ಷೆಯಲ್ಲಿ ಯಾವುದೇ ಅರ್ಹ ರೈತರ ಜಮೀನು ಕೈಬಿಟ್ಟು ಹೋಗದಂತೆ ನಿಗಾವಹಿಸಿ ಸರ್ಮಪಕ ಸಮೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು….

Read More

ಮಿಶ್ರ- ಸಮಗ್ರ ಕೃಷಿಯಿಂದ ರೈತರಿಗೆ ಲಾಭ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 : ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ…

Read More

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ, ದೆಹಲಿ, ಸೆ. 21:“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.“ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗ ಕೈಬಿಡಲು ನಿರ್ಧರಿಸಿದೆ. ಈ ಮಧ್ಯೆ…

Read More

ಡಾ. ರಾಘವೇಂದ್ರ ಕುಲಕರ್ಣಿ, ಪ್ರೊ. ಡಾ. ಕುಶಾಲದಾಸರಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21 : ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ರಚನಾಶಾಸ್ತ್ರ ವಿಜ್ಞಾನ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊಫೆಸರ್ ಡಾ. ಕುಸಾಲ ದಾಸ ಅವರಿಗೆ 2025ನೇ ವರ್ಷದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.ಡಾ. ರಾಘವೇಂದ್ರ ಕುಲಕರ್ಣಿ ಅವರು ಔಷಧ ವಿಜ್ಞಾನ ಮತ್ತು ಪಾಲಿಮರ್ ಕ್ಷೇತ್ರ ಹಾಗೂ ಡಾ. ಕುಸಾಲ ದಾಸ ಅವರು ಶರೀರ ರಚನಾಶಾಸ್ತ್ರ ಕ್ಷೇತ್ರದಲ್ಲಿ ಕೈಗೊಂಡಿರುವ ಸಂಶೋಧನೆಯನ್ನು ಪರಿಗಣಿಸಿ ಈ ಸ್ಥಾನ…

Read More

ಮಹಿಳೆಯರು ಜಾಣ್ಮೆಯಿಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 21: ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಜಾಣ್ಮೆಯಿಂದ ಸದುಪಯೋಗ ಪಡಿಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿ ಅತ್ಯುತ್ತಮ‌ ಸಾಧನೆ ಮಾಡುತ್ತಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ.- 1ರಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ವಿದ್ಯಾರ್ಥಿನಿಯರೊಂದಿಗೆ…

Read More

ಆನಂದ ಕಂಬಾರಗೆಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 21:ಜಿಲ್ಲೆಯ ತಿಕೋಟಾ ಪಿ ಎಂ ಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಮಾದರಿ ಶಾಲೆ ಆಂಗ್ಲ ಶಿಕ್ಷಕ ಆನಂದ ಕಂಬಾರ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಂದ ವಿದ್ಯಾರ್ಥಿ ಸ್ನೇಹಿ, ಇಂಗ್ಲಿಷ ವಿಷಯದ ರಾಜ್ಯ ಸಂಪನ್ಮೂಲ ಶಿಕ್ಷಕನಾಗಿ ಹಲವಾರು ಕಾರ್ಯಗಾರಗಳಲ್ಲಿ ಭಾಗವಹಿಸಿ ಹಲವಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿ, ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪ್ರಸ್ತುತ…

Read More

ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಯಲು ಮುಖ್ಯ ಕಾರ್ಯದರ್ಶಿಗಳ ಸೂಚನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 20:ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ,…

Read More

ಡಿ.7ರಂದು ವೃಕ್ಷೋತ್ಥಾನ ಹೆರಿಟೇಜ್ ರನ್: ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಯಶಸ್ವಿಗೊಳಿಸಿ-ಸಚಿವ ಎಂ.ಬಿ.ಪಾಟೀಲ ಕರೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20:ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಹಸರೀಕರಣಕ್ಕಾಗಿ, ಸ್ವಚ್ಛತೆಗಾಗಿ 2025ನೇ ಸಾಲಿನ ಡಿಸೆಂಬರ್ 7 ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವೃಕ್ಷೋತ್ಥಾನ ಹೆರಿಟೇಜ್ ರನ್‍ನಲ್ಲಿ ಜಿಲ್ಲಾಡಳಿತ, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸಕ್ರೀಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕರೆ ನೀಡಿದರು.ಶನಿವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ವೃಕ್ಷೋತ್ಥಾನ ಹೆರಿಟೇಜ್ ರನ್…

Read More