ರಮಾಬಾಯಿ ಪ್ರೌಢಶಾಲೆಯಲ್ಲಿ ಶಿಕ್ಷಕ ದಿನಾಚರಣೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ, ಸಿದ್ದಾರ್ಥ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಮತ್ತು ಡಿಗ್ರಿ ಕಾಲೇಜಿನಲ್ಲಿ ಶುಕ್ರವಾರ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಜ್ಯೋತಿಬಾಪುಲೆ ಶಿಕ್ಷಕ ದಿನವನ್ನು ಆಚರಿಸಲಾಯಿತು.ಸಂಸ್ಥೆಯ ಸಂಸ್ಥಾಪಕ ತುಕಾರಾಂ ಚಂಚಲಕರ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಚಂಚಲಕರ ಅವರು ಮಾತನಾಡಿ, ಆಗಿನ ಕಾಲಘಟ್ಟದಲ್ಲಿ ಶಿಕ್ಷಣದ ಕೊರತೆ ಇದ್ದುದರಿಂದ ಬಹಳ ಪ್ರಯತ್ನಪಟ್ಟು ಮಾತೆ ಸಾವಿತ್ರಿಬಾಯಿ…


