saptsagar_admin

ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ…

Read More

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಸಂಸದ ಜಿಗಜಿಣಗಿ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 13:ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಎಟಿಎಂ ಸರ್ಕಾರವಾಗಿದೆ. ಆದರೆ ಡೆಬಿಟ್ ಅಕೌಂಟ್ ನಲ್ಲಿ ಹಣವೇ ಇಲ್ಲ ಎಂದು ಛೇಡಿಸಿದರು.ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹೊರಗುತ್ತಿಗೆ ಆಧಾರದ ಕೆಲಸಗಾರರಿಗೂ ಸಂಬಳವಿಲ್ಲ.ತಮ್ಮರು ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ದಲಿತಪರ ಸರ್ಕಾರಿ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಇಲ್ಲ. ಎಲ್ಲವೂ ಗ್ಯಾರಂಟಿ ಯೋಜನೆಗಳಿಗೆ ಹಣ ಸೋರಿ ಹೋಗುತ್ತಿದೆ. ಗ್ಯಾರಂಟಿಯಿಂದ…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More

ಪಾಲಿಕೆ ನೌಕರರ ಹೋರಾಟಕ್ಕೆ ಬಿಜೆಪಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಶನಿವಾರ ಭೇಟಿ ನೀಡಿ, ಪಾಲಿಕೆ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಮಾತನಾಡಿ, ಪಾಲಿಕೆ ನೌಕರರ ನ್ಯಾಯಯುತ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಿಂದಗಿ ವಿಧಾನಸಭಾ…

Read More

ಜು. 14ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಡಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.14 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಮಧ್ಯಾಹ್ನ 12-05ಕ್ಕೆ ಸೊಲ್ಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12-50ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‍ಗೆ ಪೂಜೆ ಸಲ್ಲಿಸಲಿದ್ದಾರೆ.ಮಧ್ಯಾಹ್ನ 1-15ಕ್ಕೆ ಇಂಡಿ ಪೊಲೀಸ್ ಪರೇಡ್…

Read More

ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ:ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವ ಭರವಸೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಮಹಾನಗರ ಪಾಲಿಕೆ ನೌಕರರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ತಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಯ ನೀಡಿದರು.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.ರಾಜ್ಯದ…

Read More

ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More

ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿಧರಣಿ ಹೋರಾಟ ಕೈಬಿಡುವಂತೆ ಮನವೊಲಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11 :ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ‌ ಹೊರತಾದ ಅಂಗಡಿಗಳ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಿಯೋಗ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.ಶುಕ್ರವಾರ ಸಚಿವರ ತವರು ಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಘಟನೆಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ನೇತೃತ್ವದ ನಿಯೋಗದಲ್ಲಿ ಬಂದು ಸಚಿವ ಶಿವಾನಂದ ಪಾಟೀಲ ಅವರನ್ನು…

Read More