ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ
ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ…


