saptsagar_admin

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 21:ಜಿಲ್ಲೆಯ ಇಂಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯ‌ನ್ನು ಇಂಡಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ಆ.19 ರಿಂದ ಸೆ.1 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪುರಾಣ ಮಹಾಮಂಗಲ ಕಾರ್ಯಕ್ರಮ ಆ.25ಕ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 21: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಉದಯಲಿಂಗೇಶ್ವರ ಹಿರೇಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳ ಪರ್ಯಂತರ ಜರುಗಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣದ ಮಹಾಮಂಗಲ ಕಾರ್ಯಕ್ರಮ ಆಗಸ್ಟ 25 ಕ್ಕೆ ಪೀಠಾಧ್ಯಕ್ಷ ಶ್ರೀ ಮ ಘ ಚ ಚನ್ನಮಲ್ಲಿಕಾರ್ಜುನ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಜರುಗುವದು.ಅಂದು ಬೆಳಿಗ್ಗೆ 7 ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಮಹಾಪೂಜೆ, 9 ಕ್ಕೆ ಶ್ರೀ ಉದಯಲಿಂಗೇಶ್ವರ ರಜತ ಮೂರ್ತಿಯ ಭವ್ಯ ಅಡ್ಡ ಪಲ್ಲಕ್ಕಿ ಮಹೋತ್ಸವವು…

Read More

ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕ್ಯಾಂಪಸ್ ಶೀಘ್ರ ಆರಂಭ:

ಸಪ್ತಸಾಗರ ವಾರ್ತೆ, ವಿಜಯಪುರ, ಆ. 21:ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್‍ ಅನ್ನು ಸ್ಥಾಪಿಸುತ್ತಿದೆ ಎಂದು ಬಿಎಲ್ ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Engineering, Computer Applications, Business Administration, Pharmacy, Law, Architecture, Design and Applied Sciences ಸೇರಿದಂತೆ ಹಂತ ಹಂತವಾಗಿ 8-10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತಾರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಿದೆ ಎಂದರು.ವಿವಿ ಈಗಾಗಲೇ ಇಂಜಿನಿಯರಿಂಗ್ ಮಹಾವಿದ್ಯಾಲಯ ಹೊಂದಿದ್ದು,ಬಿ.ಎಲ್.ಡಿ.ಇ….

Read More

ಅಸ್ಮಿತಾ ಖೇಲೋ ಇಂಡಿಯಾಗೆ ಯೋಗ ತಂಡ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ರಾಜ್ಯ ಮಟ್ಟದ ಅಸ್ಮಿತಾ ಖೋಲೋ ಇಂಡಿಯಾ ಯೋಗಾ ಕ್ರೀಡಾಕೂಟಕ್ಕೆ ತಿಡಗುಂದಿ ಮಾನಸ ಗಂಗೋತ್ರಿ ವಸತಿ ಶಾಲೆ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.ಆ.22ರಂದು ಚಿತ್ರದುರ್ಗದ ಮುರಘಾಮಠದಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಮಾರಿಯಮ್ಮ ಹರಿಜನ, ಭೂಮಿಕಾ ಛಲವಾದಿ, ಕಾವೇರಿ ಢವಳಗಿ, ಹರ್ಷಿತಾ ಹರಿಜನ, ಪ್ರಿಯಾ ಚವ್ಹಾಣ, ವೈಷ್ಣವಿ ರಾಠೋಡ ಆಯ್ಕೆ ಆಗಿದ್ದಾರೆ.ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸನಗೌಡ ಹರಾನಾಳ, ಬಸವರಾಜ ಬಾಗೇವಾಡಿ ಉತ್ನಾಳ, ಕೃಷ್ಣ ಭಜಂತ್ರಿ,ಮತ್ತು ಭಾಗ್ಯಶ್ರೀ ಚಲವಾದಿ ಅಭಿನಂದಿಸಿದ್ದಾರೆ.

Read More

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 20:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆ ಘಟಕ ಯೋಜನೆಯಡಿ1 ಲಕ್ಷ ರೂ. ಸಹಾಯಧನ ಹಾಗೂ 50 ಸಾವಿರ ರೂ. ಬೀಜಧನ (ಶೇ 4 ರಷ್ಟು ಬಡ್ಡಿ ದರ). ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ-ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಟು ಅಥವಾ ಗರಿಷ್ಟ 1.25ಲಕ್ಷ ರೂ.ಗಳ ಸಹಾಯಧನ….

Read More

ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ- ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 20: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಶ್ರಮಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು.ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯದಾದ್ಯಂತ ಎರಡು ತಿಂಗಳ ಕಾಲ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು, ಅಭಿಯಾನದ ಭಾಗವಾಗಿ ಮಾದಕ ವಸ್ತುಗಳ ಬಳಕೆಯನ್ನು…

Read More

ಸಾಮಾಜಿಕ ಏಳಿಗೆಗೆ ಡಿ.ದೇವರಾಜ್ ಅರಸುರವರ ಕೊಡುಗೆ ಅಪಾರ: ಬಬಲೇಶ್ವರ

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 20: ಹಿಂದುಳಿದ ವರ್ಗಗಳ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಡಿ. ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆ ಹಾಗೂ ಸಾಮಾಜಿಕ ಏಳಿಗೆಗೆ ಶ್ರಮಿಸಿದ್ದಾರೆ ಎಂದು ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬುಧವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ…

Read More

8 ರೌಡಿಶೀಟರ್ ಗಡಿಪಾರು

ಸಪ್ತಸಾಗರ ವಾರ್ತೆ ವಿಜಯಪುರ, ಆ. 20:ಜಿಲ್ಲೆಯಲ್ಲಿ ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಬರುವ ಹಿನ್ನೆಲೆಯಲ್ಲಿ ಎಂಟು ಜನ ರೌಡಿಶೀಟರ್ ಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಕೊಲೆ, ಕೊಲೆಗೆ ಯತ್ನ, ಆಯುಧ ಕಾಯ್ದೆ, ದೊಂಬಿ, ಹಲ್ಲೆ, ಕನ್ನಾ ಕಳವು ಮುಂತಾದ ಅಪರಾಧಿಕ ಪ್ರಕರಣಗಳಲ್ಲಿ ಈ ರೌಡಿ ಶೀಟರ್ ಗಳು ಭಾಗಿಯಾಗಿದ್ದರು.ಇನ್ನು 19 ಜನ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು…

Read More

ಒಳ ಮೀಸಲಾತಿ ಕುರಿತು ಸಚಿವ ಸಂಪುಟ ನಿರ್ಧಾರ: ಆಮ್ ಆದ್ಮಿ ಪಾರ್ಟಿ ಸ್ವಾಗತ

ಸಪ್ತಸಾಗರ ವಾರ್ತೆ, ಆ. 20:ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಕೈಗೊಂಡ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೋಗೇಶ ಸೋಲಾಪುರ ಸ್ವಾಗತಿಸಿದ್ದಾರೆ.ಈ ನಿರ್ಧಾರವು ಎಡಗೈ-ಬಲಗೈ ಸಮುದಾಯಗಳಿಗೆ ಶೇ. 6 ರಷ್ಟು ಹಾಗೂ ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನು ಒಳಗೊಂಡ ಸ್ಪ್ರಶ್ಯ ಗುಂಪುಗಳಿಗೆ ಶೇ. 5 ರಷ್ಟು ಮೀಸಲಾತಿಯನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಚಿವ ಸಂಪುಟದ…

Read More

ಮಳೆ ಸಂತ್ರಸ್ತರಿಗೆ ಸಚಿವ ಎಂ.ಬಿ. ಪಾಟೀಲ್ ವೈಯಕ್ತಿಕ ನೆರವು

ಸಪ್ತಸಾಗರ ವಾರ್ತೆ ವಿಜಯಪುರ, ಆ. 20: ಮಳೆಯಿಂದ ನಷ್ಟ ಅನುಭವಿಸಿದ ನಗರದ ಎರಡು ಕುಟುಂಬಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ಸಾರೆ.ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವರು ಆಗಷ್ಟ 15ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂದು ರಾಮನಗರ ಬಳಿಯ ನೆಹರು‌ ನಗರ ನಿವಾಸಿ‌ ಅಚ್ಯುತ್ ಆಚಾರ ಪುರೋಹಿತ ಮತ್ತು ರಾಜಾಜಿನಗರದ ನಿವಾಸಿ ಜಾಫರ್ ಅಹ್ಮದ್ ಇನಾಮದಾರ ಅವರ ಕುಟುಂಬಕ್ಕೆ ತಲಾ…

Read More