saptsagar_admin

ತೋಟಗಾರಿಕೆ ಇಲಾಖೆಯಿಂದ ಶೇ.25ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಹೊಸದಾಗಿ ನಿರ್ಮಿಸಿದ ತೋಟಗಾರಿಕೆ ಉತ್ಪನ್ನಗಳ ಪೂರ್ಣ ಪ್ರಮಾಣದ ಮೌಲ್ಯವರ್ಧಿತ ಸಂಸ್ಕರಣೆ ಘಟಕಗಳು, ಔಷಧಿ ಮತ್ತು ಸುಗಂಧ ದ್ರವ್ಯಗಳ ಘಟಕಗಳನ್ನೊಳಗೊಂಡಂತೆ, ಪ್ರಾಯೋಗಿಕ ಉತ್ಪಾದನೆ ಮತ್ತು ವಾಣಿಜ್ಯ ಉತ್ಪಾದನೆ ಕೈಗೊಳ್ಳುವ ಘಟಕಗಳಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಒದಗಿಸಲಾಗುವ ಶೇ.25ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ದ್ರಾಕ್ಷಾರಸ ಉತ್ಪಾದನಾ ಘಟಕ, ಹಣ್ಣು ಮತ್ತು ತರಕಾರಿ ಸಂಸ್ಕರಣೆ-ಕ್ಯಾನಿಂಗ್ ಘಟಕ, ಉಪ್ಪಿನಕಾಯಿ ಘಟಕ, ಸುಗಂಧದ್ರವ್ಯ-ಔಷಧಿ ಸಸ್ಯಗಳ ಸಂಸ್ಕರಣಾ ಘಟಕಗಳು, ಗರ್ಕಿನ್ ಘಟಕಗಳು ಇತ್ಯಾದಿ ಘಟಕಗಳನ್ನು ಸಹಾಯಧನಕ್ಕೆ ಪರಿಗಣಿಸಲಾಗುವುದು. ಈ ಕುರಿತಂತೆ…

Read More

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಕಾರ್ಯಗಾರ, ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18: ಜಿಲ್ಲೆಯಲ್ಲಿ ಸರಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ? ಎಂಬ ಒಂದು ದಿನದ ಕಾರ್ಯಾಗಾರವನ್ನು ಆ. 24ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಗಾರದ ಪೋಸ್ಟರ್ ಬಿಡುಗಡೆ ಮಾಡಿದರು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ,…

Read More

ಭುಗಿಲು ಪುಸ್ತಕ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರದಲ್ಲಿ ಮರುಮುದ್ರಿತ “ಭುಗಿಲು” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಮತ್ತು ಮುಖ್ಯ ವಕ್ತಾರರಾಗಿ ಭುಗಿಲು ಪುಸ್ತಕದ ಸಂಪಾದಕೀಯ ಮಂಡಳಿಯ ಸದಸ್ಯರಾದ ದು.ಗು.ಲಕ್ಷ್ಮಣ ಅವರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಷಿ ಅವರು ಉಪಸ್ಥಿತರಿದ್ದರು.ಇಂದಿರಾಗಾಂಧಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯವನ್ನೆ ಧೂಳೀಪಟ ಮಾಡಿ ದೇಶಾದ್ಯಂತ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದರೆಂದು ತಿಳಿಸಿದರು.ಮುಖ್ಯ ಅತಿಥಿಗಳಾದ…

Read More

ನೀರಾವರಿಯಿಂದ ಕೃಷಿ ಉಪಕರಣಗಳ ಮಾರಾಟಕ್ಕೂ ವರದಾನ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಆ. 17: ನೀರಾವರಿಯಿಂದಾಗಿ ಕೃಷಿಯಷ್ಟೇ ಅಲ್ಲ, ಟ್ರ್ಯಾಕ್ಟರ್ ಮತ್ತು ಕೃಷಿ ಉಪಕರಣಗಳನ್ನು ಮಾರಾಟ ಮಾಡುವವರಿಗೂ ವರದಾನವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಸಿಂದಗಿ ಪಟ್ಟಣದಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಉದ್ಘಾಟಿಸಿ ಅವರು ಮಾತನಾಡಿದರು.ಜಗತ್ತು ಆಧುನೀಕರಣದತ್ತ ಸಾಗಿರುವುದರಿಂದ ಅದಕ್ಕೆ ತಕ್ಕಂತೆ ಕೃಷಿ ಸಲಕರಣೆಗಳನ್ನು ಬಳಸಬೇಕಾಗುತ್ತಿದೆ. ಟ್ರ್ಯಾಕ್ಟರ್ ರೈತರ ಬೆನ್ನೆಲುಬಾಗಿದ್ದು, ರೈತರ ಶ್ರಮವನ್ನು ಕಡಿಮೆ ಮಾಡಿ ಹೊಲದ ಕೆಲಸವನ್ನು ಬೇಗ ಮತ್ತು ಸುಲಭವಾಗಿ…

Read More

ಯತ್ನಾಳ್ ಕಾರ್ ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶನ: ಯುವಕರನ್ನು ವಶಕ್ಕೆ ಪಡೆದ ಪೊಲೀಸರು

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿದ ಪ್ರಚೋದನೆಕಾರಿ ಹೇಳಿಕೆ ವಿರೋಧಿಸಿ ಒಂದು ಕೋಮಿನ ಯುವಕರು ಯತ್ನಾಳ್ ಕಾರಿಗೆ ಅಡ್ಡಗಟ್ಟಿ ಕಪ್ಪು ಬಟ್ಟೆ ಪ್ರದರ್ಶನ ನಡೆಸಿದ ಘಟನೆ ಭಾನುವಾರ ಆಲಮೇಲದಲ್ಲಿ ನಡೆದಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ಯತ್ನಾಳ್ ಅವರು ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಕೊಡುತ್ತೇವೆ ಎಂದು ಘೋಷಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದರು.ಈ ಹೇಳಿಕೆ ವಿರೋಧಿಸಿ ಮುಸ್ಲಿಂ ಯುವಕರು ಯತ್ನಾಳ್ ಕಾರಿಗೆ ಅಡಗಟ್ಟಿ…

Read More

ತ್ಯಾಗ, ಬಲಿದಾನದ ಸ್ಮರಣೆಯೇ ಸ್ವಾತಂತ್ರೋತ್ಸವ- ಅಮರೇಶ ಸಾಲಕ್ಕಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17 :ನಾವು ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ದೇಶಕ್ಕಾಗಿ ನಿಸ್ವಾರ್ಥವಾಗಿ ಹೋರಾಟ ಮಾಡಿದ ಹೋರಾಟಗಾರರ ತ್ಯಾಗ, ಬಲಿದಾನದ ಸ್ಮರಣೆಯಾಗಿದೆ ಎಂದು ಇತಿಹಾಸ ಉಪನ್ಯಾಸಕ ಅಮರೇಶ ಸಾಲಕ್ಕಿ ಹೇಳಿದರು.ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಎಸ್.ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅಷ್ಟು ಸುಲಭವಾಗಿ ಸಿಕ್ಕಿರುವುದಿಲ್ಲ. ಅದಕ್ಕಾಗಿ…

Read More

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಿಎಲ್ ಡಿಇ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿಯಲ್ಲಿರುವ ಬಿ.ಎಲ್.ಡಿ.ಇ ಸ್ಪೋರ್ಟ್ ಅಕಾಡೆಮಿಯ ವಿದ್ಯಾರ್ಥಿಗಳು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ 79 ನಿಮಿಷಗಳ ಸತತ ಸ್ಕೇಟಿಂಗ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಯುನೈಟೆಟ್ ಸ್ಟೇಟ್ ಆಫ್ ಅಮೇರಿಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಜೀನಿಯಸ್ ಇಂಡಿಯನ್ ಬುಕ್ ಆಫ್ ವರ್ಡ್ಲ್ ರೆಕಾರ್ಡ್ಸ್ ಮತ್ತು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಜಂಟಿಯಾಗಿ ಶುಕ್ರವಾರ ದೇಶಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಸ್ಕೇಟಿಂಗ್ ಆಯೋಜಿಸಿತ್ತು….

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ…

Read More

ಪ್ರತಿ ಗಣೇಶ ಮಹಾಮಂಡಳಿಗೆ ರೂ.5001 ನೆರವು: ಶಾಸಕ ಯತ್ನಾಳ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ನಗರದ ಪ್ರತಿ ಗಣೇಶ ಮಹಾಮಂಡಳಿಗಳಿಗೆ ವೈಯುಕ್ತಿಕವಾಗಿ ರೂ.5001 ನೀಡಲಾಗುವುದು. ತಮ್ಮ ತಮ್ಮ ಮಹಾಮಂಡಳಿಗಳ ವೇದಿಕೆಗೆ ಆಗಮಿಸಿ ಹಣ ನೀಡಲಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಘೋಷಣೆ ಮಾಡಿದರು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಶಿವಾನುಭವ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಹಮ್ಮಿಕೊಂಡಿದ್ದ ವಿಜಯಪುರ ನಗರದ ಎಲ್ಲ ಗಜಾನನ ಮಹಾಮಂಡಳಿಗಳ ಸಭೆಯಲ್ಲಿ ಅವರು ಮಾತನಾಡಿದರು.ಪರಿಸರ ಸಂರಕ್ಷಣೆ…

Read More