saptsagar_admin

ಆ. 18ರಿಂದ ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…

Read More

ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಜಿಲ್ಲೆಯ ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಶನಿವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇ ಪೌತಿ ಖಾತೆ ಪ್ರಗತಿ,…

Read More

ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸ ದಿನಾಚರಣೆ ಆಚರಿಸಲಾಯಿತು.ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಪದವಿ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ತುಕಾರಾಮ ಚಂಚಲಕರ ಅವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿ, ಎಲ್ಲರೂ ದೇಶಪ್ರೇಮವನ್ನು ಮೈಗೂಢಿಸಿಕೊಳ್ಳಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಮಾರ್ಮಿಕವಾಗಿ ಹೇಳಿದರು.ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಗುರುಗಳಾದ ಎಸ್.ಎಸ್. ಗುಡ್ಲೇನವರ,…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More

ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ‌ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಈ‌ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ….

Read More

ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16:ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,ಕರ್ನಾಟಕ ಅದಿಜಾಂಬವ ಅಭಿವೃದ್ಧಿ ನಿಗಮ,ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಮೂಲಕ 2025-26 ನೇ ಸಾಲಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ, ಪುಡ್ ಕಾರ್ಟ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಇತರೆ ಉದ್ದೇಶ) ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ…

Read More

ಆ. 19ರೊಳಗಾಗಿ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಉಗ್ರ ಹೋರಾಟ: ಗೋವಿಂದ ಕಾರಜೋಳ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16:ನಾಗಮೋಹನ್ ದಾಸ್ ವರದಿ ಶಿಫಾರಸ್ಸು ಆಧರಿಸಿ ರಾಜ್ಯದಲ್ಲೂ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಜಗಳ ಹಚ್ಚುವ ಕೆಲಸದಲ್ಲಿ ತೊಡಗಿದೆ. ಇದು ಸರಿಯಲ್ಲ ಎಂದು ಕಾರಜೋಳ ಹೇಳಿದರು.ಮೀಸಲಾತಿಯಲ್ಲಿ ಎಸ್ ಸಿ 101 ಹಾಗೂ ಎಸ್ ಟಿ 56 ಜಾತಿಗಳಿವೆ. ಒಳ ಮೀಸಲಾತಿ ವಿಚಾರವಾಗಿ 2004 ರಲ್ಲಿ ಸದಾಶಿವ…

Read More

ಕನಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ನಗರದ ಕನಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಇದರ ಅಂಗವಾಗಿ ವಿದ್ಯಾರ್ಥಿಗಳು ಭಾರತ ಮಾತೆ, ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಒನಕೆ ಓಬವ್ವ ಮುಂತಾದ ಮಹನೀಯರ ವೇಷ ಧರಿಸಿ ಕಾರ್ಯಕ್ರಮಕ್ಕೆ ಅತ್ಯಂತ ಮೆರಗನ್ನು ತಂದ ಕೊಟ್ಟರು.

Read More

ರಾಷ್ಟ್ರಧ್ವಜವು ದೇಶದ ವೈವಿಧ್ಯಮಯ ಸಂಸ್ಕೃತಿಯ ಪ್ರತೀಕ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ರಾಷ್ಟ್ರಧ್ವಜವು ನಮ್ಮ ದೇಶದ ಗೌರವದ ಸಂಕೇತವಾಗಿದೆ. ಇದು ನಮ್ಮ ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ,ದೇಶದ ಪ್ರಗತಿ ಮತ್ತು ಏಕತೆಯನ್ನು ಪ್ರತಿನಿಧಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ‘ರಾಷ್ಟ್ರಧ್ವಜದ ಮಹತ್ವ’ ಕುರಿತ ಚಿಂತನಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ ಹೋರಾಟದ ಮೌಲ್ಯ-ತ್ಯಾಗಗಳನ್ನು ಎತ್ತಿಹಿಡಿಯುತ್ತದೆ. ಅದು ದೇಶದ ಇತಿಹಾಸ, ಸಂಸ್ಕೃತಿ, ಮತ್ತು ಜನರ ಭಾವನೆಗಳನ್ನು ಪ್ರತಿನಿಧಿಸುತ್ತದೆ…

Read More

ಗಜಾನನ ಮಹಾಮಂಡಳಿಗಳ ಸಭೆ ಇಂದು

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 16:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಹತ್ತಿರದ ಶಿವಾನುಭವ ಮಂಟಪದಲ್ಲಿ ಅ.16 ರಂದು ಸಂಜೆ 5 ಗಂಟೆಗೆ ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ ವತಿಯಿಂದ ವಿಜಯಪುರ ನಗರದ ಶ್ರೀ ಗಜಾನನ ಮಹಾಮಂಡಳಿಗಳ ಸಭೆ ಹಮ್ಮಿಕೊಳ್ಳಲಾಗಿದೆ.ಕಾರಣ ಎಲ್ಲಾ ಗಜಾನನ ಮಹಾಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಗಣ್ಯರು,…

Read More