ಸ್ವಾತಂತ್ರೋತ್ಸವ ಆಚರಣೆ: ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಸಪ್ತಸಾಗರ ವಾರ್ತೆ ವಿಜಯಪುರ, ಆ. 15:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನ ಸೂರೆಗೊಂಡವು.ಪ್ರತಿ ತಂಡವು ತಮ್ಮ ಮನೋಜ್ಞ ಅಭಿನಯ ಪ್ರೇಕ್ಷಕರ ರೋಮಾಂಚನಗೊಳಿಸುವ ಮೂಲಕ ಮಂತ್ರಮುಗ್ಧಗೊಳಿಸಿತು. ಪ್ರೇಕ್ಷಕರು ಮಕ್ಕಳ ಅಭಿನಯಕ್ಕೆ ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಹುರಿ ದುಂಬಿಸುತ್ತಿದ್ದರು.ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ, ಸಮೂಹ ನೃತ್ಯ,ಗಾಯನ ಪ್ರೇಕ್ಷಕರ…


