ಬುದ್ಧ, ಬಸವ, ಅಂಬೇಡ್ಕರ್ ಸಮಾಜಕ್ಕೆ ನೀಡಿದ ಕೊಡುಗೆ ದೊಡ್ಡದು -ಫ.ಗು. ಸಿದ್ದಾಪುರ
ಸಪ್ತಸಾಗರ ವಾರ್ತೆ, ವಿಜಯಪುರ, ಏ. 11 (ಫಾತಿಮಾ ಶೇಖ, ಶಂ.ಗು. ಬಿರಾದಾರ, ಸಿಸು ಸಂಗಮೇಶ ವೇದಿಕೆ):ಯಾವುದೋ ಶತಮಾನದಲ್ಲಿ ಆಗಿ ಹೋದ ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ನಾವು ಇವತ್ತಿಗೂ ನೆನೆಯುತ್ತೇವೆ. ಅಂದರೆ ಅವರು ಸಮಾಜಕ್ಕೆ ನೀಡಿದ ಕೊಡುಗೆ ದೊಡ್ಡದು ಎಂದು ಹಿರಿಯ ಸಾಹಿತಿ ಫ.ಗು. ಸಿದ್ದಾಪುರ ಅವರು ಹೇಳಿದರು.ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ…


