saptsagar_admin

ಶುಲ್ಕ ಮರುಪಾವತಿ ಯೋಜನೆ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 30:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ನಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಹಾಗೂ 8050770005 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು…

Read More

ಮಕ್ಕಳಿಗೆ ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 30: ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕಿವಿಮಾತು ಹೇಳಿದರು.ಕೊಲ್ಹಾರ ಪಟ್ಟಣದ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಕಲ್ಪಿಸಲಾಗಿರುವ ಅಗತ್ಯ ಮೂಲಭೂತ ಸೌಲಭ್ಯಗಳು ಸೇರಿದಂತೆ ವಸತಿ ಶಾಲೆಯಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಸ್ವತ: ತಾವೇ ಊಟ ಬಡಿಸಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ನಂತರ, ಮಕ್ಕಳೊಂದಿಗೆ…

Read More

ಮಕ್ಕಳ ಉಜ್ವಲ ಭವಿಷ್ಯ ಸಾಕಾರಕ್ಕೆ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ವಾರಕ್ಕೊಂದು ಸಲ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ- ಅಧಿಕಾರಿಗಳಿಗೆ ಡಿಸಿ ಸಲಹೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಜಿಲ್ಲೆಯಲ್ಲಿರುವ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಅವರ ಜೀವನ ಸುಂದರಗೊಳಿಸಿಕೊಳ್ಳಲು ಸರ್ಕಾರ ಒದಗಿಸಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ.ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ…

Read More

ಹಾಲು ಹಣ್ಣು ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ

ಸಪ್ತ ಸಾಗರ ವಾರ್ತೆ,ವಿಜಯಪುರ, ಜು. 30:ಮನುಷ್ಯನಿಗೆ ಪೂರಕವಾಗಿರುವ ಹಬ್ಬಗಳಲ್ಲಿನ ಕೆಲ ಆಚರಣೆಗಳು ಮೂಢನಂಬಿಕೆಗೆ ಪ್ರಚೋದಿಸುತ್ತವೆ. ಇದನ್ನು ತಡೆಗಟ್ಟಲು ನಾಗರ ಪಂಚಮಿಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಮಾನವ ಬಂದುತ್ವ ವೇದಿಕೆಯಿಂದ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ಮತ್ತು ಬಿಸ್ಕಟ್ ನೀಡುವುದರ ಮೂಲಕ ಬಸವ ಪಂಚಮಿಯನ್ನು ಆಚರಿಸಲಾಯಿತು.ಜಿಲ್ಲಾ ಘಟಕ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಬಸನಗೌಡ ಹರನಾಳ ರೋಗಿಗಳಿಗೆ ಹಾಲು, ಹಣ್ಣು ವಿತರಿಸಿ ಮಾತನಾಡಿದ ಅವರು, ಇಂದು ಬುಧವಾರ ಬಸವಣ್ಣನವರು ಲಿಂಗೈಕ್ಯವಾದ ದಿನವಾಗಿದೆ. ಅವರ “ಕಲ್ಲ ನಾಗರ…

Read More

ಮುಳವಾಡ ಪಂಚಾಯತಿ ಕ್ಲರ್ಕ್ ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಲಂಚ ಸ್ವೀಕರಿಸುತ್ತಿದ್ದಾಗ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮಲ್ಲಪ್ಪ ಸಾಬು ಹೊಸಕೇರಿ ಲೋಕಾಯುಕ್ತ ಬಲೆಗೆ ಬಿದ್ದ ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ.ಮುಳವಾಡ ಗ್ರಾಮದ ಕೆಐಎಡಿಬಿ ನಿವೇಶನದ ಇ- ಸ್ವತ್ತು ಉತಾರೆ ಮಾಡಿಕೊಡಲು ನಿವೇಶನದ ಮಾಲೀಕರಿಗೆ 10 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ.ಈ ಬಗ್ಗೆ ನಿವೇಶನ ಮಾಲೀಕ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ…

Read More

ಜಾರ್ಜೀಯಾ ದೇಶದಲ್ಲಿ ಎಂಬಿಬಿಎಸ್ ಪೂರೈಸಿದ ವಿವಿಧಾ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಜಾರ್ಜೀಯಾ ದೇಶದ ರಾಜದಾನಿ ಟೀಬ್ಲೀಸಿಯ ಜಾರ್ಜೀಯನ್ ನ್ಯಾಶನಲ್ ವೈದ್ಯಕೀಯ ವಿಶ್ವವಿದ್ಯಾಲಯದಿಂದ ವಿಜಯಪುರದ ವಿವಿಧಾ ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಎಂಬಿಬಿಎಸ್ ಪದವಿಯನ್ನು ಪಡೆದುಕೊಂಡಿದ್ದಾರೆ.ವಿಶ್ವ ವಿದ್ಯಾಲಯದ ಘಟಕೋತ್ಸವದಲ್ಲಿ ವಿಜಯಪುರದ ವಿವಿಧಾ ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಅವರಿಗೆ ಎಂಬಿಬಿಎಸ್ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು. ಯೂನಿರ್ವಸಿಟಿ ಪೌಂಡರ್ GIA KAVTELISHVILLI, ಲೇಡಿ ಡೀನ್ MAIA ADVADGE ಹಾಗೂ ಡೈರೆಕ್ಟರ್ MARTVILI CANYON ಉಪಸ್ಥಿತರಿದ್ದರು.ಕಳೆದ ಎರಡು ವರ್ಷಗಳ ಹಿಂದೆ ಉಕ್ರೇನ್ ಯುದ್ದದಲ್ಲಿ ಸಿಲುಕಿ ತೊಂದರೆ ಅನುಭವಿಸಿದ ವಿವಿಧಾ ನಂತರ…

Read More

ಬಸವರಾಜಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29 :ಇಲ್ಲಿನ ಸಂಗನಬಸವ ಶಿಶುನಿಕೇತನ (ಸಿ.ಬಿ.ಎಸ್.ಇ) ಶಾಲೆಯ ಚಿತ್ರಕಲಾ ಶಿಕ್ಷಕ ಬಸವರಾಜ ಹನಮಪ್ಪ ಹಡಪದ ಅವರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ.ಚಿತ್ರಕಲಾ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಪರಿಗಣಿಸಿ ಬಸವರಾಜ ಅವರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಚಿತ್ರಕಲಾ ಕ್ಷೇತ್ರದಲ್ಲಿ ಹಲವಾರು ಗುಂಪು ಚಿತ್ರಕಲಾ ಪ್ರದರ್ಶನ, ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ, ಹಲವಾರು ಕಲಾಕೃತಿಗಳಿಗೆ ನಗದು ಬಹುಮಾನ, ಹಲವಾರು ಕಲಾಕೃತಿಗಳಿಗೆ ಅತ್ಯುತ್ತಮ ಕಲಾಕೃತಿ ಪ್ರಶಸ್ತಿಗಳು ಮತ್ತು ಹಲವಾರು ಕಲಾ ಶಿಬಿರಗಳು ಹಾಗೂ 2023-24…

Read More

ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ.5ರ ಉಪ ಚುನಾವಣೆ:ಚುನಾವಣಾ ವೇಳಾ ಪಟ್ಟಿ ನಿಗದಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. 05ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ 6 ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 8 ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ 17ರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ…

Read More

ಮಾನವ ಜನ್ಮ ಸಾರ್ಥಕತೆಗೆ ಶರಣರ ತತ್ವ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಮನುಷ್ಯ ಆಧ್ಯಾತ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಹಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮ ಸಾರ್ಥಕತೆಗೆ ಬಸವಾದಿ ಶರಣರ ತತ್ವ, ಸದ್ವಿಚಾರ, ಧ್ಯಾನ, ತಪಸ್ಸು, ಉಪಾಸನೆ, ಭಜನೆ, ಸಂಕೀರ್ತನೆ ಮಾಡುವುದರಿಂದ ಪ್ರಾಪಂಚಿಕ ಜಂಜಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.ಪುರಾಣಿಕರಾದ ಉಮರಾಣಿಯ…

Read More

ರಫ್ತು ಗುಣಮಟ್ಟದ ಒಣದ್ರಾಕ್ಷಿ ಉತ್ಪಾದನೆಗೆ ಮಾರ್ಗಸೂಚಿ:ಅಪಘಾನಿಸ್ತಾನದ ತಳಿ ಆಮದಿಗೆ ಚಿಂತನೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28 : ರಾಸಾಯನಿಕ ಬಳಕೆಗೆ ಬದಲಾಗಿ ವಿಷಮುಕ್ತವಾಗಿ ಹಾಗೂ ಯುರೋಪಿಯನ್ ರಾಷ್ಟ್ರಗಳಿಗೆ ಸಾಗಿಸಲು ರಫ್ತು ಗುಣಮಟ್ಟದ ಒಣ ದ್ರಾಕ್ಷಿ ಬೆಳೆಯಲು ಮಾರ್ಗಸೂಚಿ ರೂಪಿಸುವ ಅಗತ್ಯವಿದೆ. ಜೊತೆಗೆ ಅಧಿಕ ಇಳುವರಿ, ವಿಶಿಷ್ಟ ಸ್ವಾದ ಹೊಂದಿರುವ ಅಪಘಾನಿಸ್ತಾನ ರಾಷ್ಟ್ರದ 5-6 ದ್ರಾಕ್ಷಿ ತಳಿಗಳನ್ನು ಪರಿಚಯಿಸಲು ಯೋಜಿಸುವ ಕುರಿತು ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ನಡೆದ ದಕ್ಷಿಣ ಭಾರತದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ನಿರ್ಧರಿಸಲಾಯಿತು.ಭಾನುವಾರ ಸಂಜೆ…

Read More