saptsagar_admin

ಖರ್ಗೆ ಪ್ರಧಾನಿಗೆ ಕ್ಷಮೆ ಯಾಚಿಸಬೇಕು: ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ಜು. 21:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕವಚನ ಪದ ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೆ ಖರ್ಗೆಯವರು ಪ್ರಧಾನಿ ಕ್ಷಮೆ ಕೇಳಬೇಕೆಂದು ಸಂಸದ ರಮೇಶ ಜಿಗಜಿಣಗಿ ಅವರು ಒತ್ತಾಯಿಸಿದ್ದಾರೆ.ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆಯಲ್ಲಿ…

Read More

ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.21:ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಏರೋಸ್ಪೇಸ್ ಪಾರ್ಕ್ ಉತ್ತರ ಕರ್ನಾಟಕದಲ್ಲಿ ಸ್ಥಾಪಿಸಿ: ಶಂಕರಗೌಡ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 21 :ರಾಜ್ಯ ಸರ್ಕಾರ ದೇವನಹಳ್ಳಿ ಬಳಿ ಭೂಸ್ವಾಧೀನ ರದ್ದುಪಡಿಸಿದ ಹಿನ್ನಲೆಯಲ್ಲಿ ಉದ್ದೇಶಿತ ಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕೆಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸರ್ಕಾರವನ್ನು ಆಗ್ರಹಿಸಿದ್ದಾರೆಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕದ ಯಾವುದಾದರೂ ಜಿಲ್ಲೆಯಲ್ಲಿ ಸ್ಥಾಪನೆ ಮಾಡಿದರೆ ಪ್ರಾದೇಶಿಕ ಅಸಮತೋಲನ ಕಡಿಮೆಯಾಗಲಿದೆ. ವೈಮಾನಿಕ ಸಂಶೋಧನೆ ಉತ್ಪಾದನೆ ರಿಪೇರಿ ರಕ್ಷಣೆ ವಿಭಾಗ ವಿಶೇಷವಾಗಿ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳ ಬಾಗಿಲನ್ನೇ ತೆರೆವುಯುವ ಏರೊಸ್ಪೇಸ್ ಪಾರ್ಕನ್ನು ಯಾವುದೇ…

Read More

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಮೈಸೂರು, ಜು. 20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಭಾನುವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು…

Read More

ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯ ವಾಹಿನಿಗೆ ಬನ್ನಿ: ದಾನೇಶ ಅವಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 20:ಕುಡಿತದ ವ್ಯಸನದಿಂದ ಹೊರಬಂದು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ನ್ಯಾಯವಾದಿ ದಾನೇಶ ಅವಟಿ ಜನತೆಗೆ ಕರೆ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಆಶ್ರಮ ಹತ್ತಿರ. ಕಾಳಿಕಾ ನಗರದ ಶ್ರೀ ಮೌನೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಏರ್ಪಡಿಸಿದ. 1953 ನೇ ಮದ್ಯವರ್ಜನ ಶಿಬಿರದ ಪ್ರಮುಖ ಉಪನ್ಯಾಸಕರಾಗಿ ಮಾತನಾಡಿದರು.ಸಪ್ತವ್ಯಸನಗಳಲ್ಲಿ ಒಂದಾದ ಮದ್ಯಪಾನವು ಮಾನವ ಕುಲಕ್ಕೆ ಅಂಟಿದ ಬಹುದೊಡ್ಡ ಮಹಾಶಾಪ. ಮದ್ಯಪಾನ ವ್ಯಸನಕ್ಕೀಡಾದ ವ್ಯಕ್ತಿಯ ಆರೋಗ್ಯ, ಕುಟುಂಬ, ಆರ್ಥಿಕ, ಸಾಮಾಜಿಕ…

Read More

ಬೂದಿಹಾಳ- ಪೀರಾಪುರ ಯೋಜನೆ ಕಾಮಗಾರಿಗೆ ಆಗ್ರಹಿಸಿ ಕೈಗೊಂಡ ರೈತರ ಧರಣಿ ಅಂತ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ.‌ ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…

Read More

ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 20:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ ಜು. 23 ಹಾಗೂ ಎರಡು ದಿನಗಳವರೆಗೆ ಜರುಗುವದು.ಜು.23 ರ ರಾತ್ರಿ 8 ಗಂಟೆಗೆ ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ ದೇವರ ಫಲ್ಲಕ್ಕಿ ಆಗಮನವಾಗುವದು. ಚಿತ್ರ ವಿಚಿತ್ರ ಮದ್ದು ಸುಡುವದು. ಡೊಳ್ಳಿನ ಹಾಡಿಕೆ ಇರುವದು.ಜು.24 ರಂದು ಬೆಳಗಿನ ಜಾವ 4 ಗಂಟೆಗೆ ನಾಗಠಾಣ ಭೀರದೇವರ, ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ…

Read More

ಪತ್ರಕರ್ತರ ಆರೋಗ್ಯ ಹಿತರಕ್ಷಣೆಗೆ ಠೇವಣಿ: ಸಚಿವ ಎಂ.ಬಿ. ಪಾಟೀಲ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19 : ಪತ್ರಕರ್ತರ ಸಕಲ ಸಮಸ್ಯೆ ನಿವಾರಣೆಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಘೋಷಿಸಿದರು.ಶನಿವಾರ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ…

Read More

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ‌ ರಂಗಮಂದಿರದಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು‌ ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ…

Read More

ಮುಂಗಡ ಹಣ ಕೊಡದ್ದಕ್ಕೆ ಒಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ : ಇಬ್ಬರ ಸೆರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 19:ಕೆಲಸಕ್ಕೆ ಬರುವುದಾಗಿ ಮುಂಗಡ ಹಣ ಪಡೆದಿದ್ದನ್ನು ವಾಪಸ್ ಕೊಡದೇ ಇರುವುದಕ್ಕೆ ಹಣ ಪಡೆದ ವ್ಯಕ್ತಿಯನ್ನು ಇಬ್ಬರು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಚಡಚಣದ ಕುಮಾರ ಉರ್ಪ್ ಅರ್ಜುನ ಬಿರಾದಾರ, ಉಮರಾಣಿ ಗ್ರಾಮದ ಶ್ರೀಶೈಲ ಗಿರಿಯಪ್ಪ ಪೀರಗೊಂಡ ಅವರು ಬಂಧಿತ ಆರೋಪಿಗಳು.ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಬಾಶಾಸಾಬ ಅಲ್ಲಾವುದ್ದೀನ್ ಮುಲ್ಲಾ ಎಂಬಾತ ಡ್ರೈವಿಂಗ್ ಕೆಲಸಕ್ಕೆ ಬರುವುದಾಗಿ 20,000 ರೂ. ಮುಂಗಡವಾಗಿ ಪಡೆದುಕೊಂಡಿದ್ದರು. ಕೆಲಸಕ್ಕೂ…

Read More