saptsagar_admin

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17:ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ ಪಾಟೀಲ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ʻವಿಜಯಪುರ ಜಿಲ್ಲೆಯಲ್ಲಿ ಮೊದಲಿನಿಂದಲೂ ಲಂಬಾಣಿ ಕಲೆ, ಕಸೂತಿ ಇತ್ಯಾದಿಗಳು ಬೇರೂರಿಕೊಂಡು ಬಂದಿದ್ದವು. ಈ…

Read More

ಸುಶೀಲ್ ಕಾಳೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿತರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಸುಶೀಲ್ ಕಾಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿತರನ್ನು ಬಂಧಿಸಲಾಗಿದೆ.ವಿಜಯಪುರದ ಭರತ್ ನಗರದ ಗೌತಮ ಹನಮಂತ ಆಲಮೇಲ್‌ಕರ (25),ದೇಗಿನಾಳ ಗ್ರಾಮದ ನಾರಾಯಣ ಗಣಪತಿ ಜಾಧವ (20), ಕೊಲ್ಹಾರ ತಾಲೂಕಿನ ಹನುಮಾಪುರ ಗ್ರಾಮದ ಬಸವರಾಜ ಮುನ್ನಾಳ( 20) ಹಾಗೂ ಬಾಗಲಕೋಟೆ ನವನಗರದ ಪ್ರಜ್ವಲ ಶರಣಪ್ಪ ಹಳಿಮನಿ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ) ಬಂಧಿತ ಆರೋಪಿತರು.ನಿನ್ನೆಯಷ್ಟೇ ಹಿಟ್ನಳ್ಳಿಯ ಹಾಲಿವಸ್ತಿ ಸಾಯಿ ಪಾರ್ಕ್ ನಿವಾಸಿ ವಿಠೋಬಾ ಕಲ್ಲವ್ವಗೋಳ (29), ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ…

Read More

ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಸುಳಿಗೆ ನೂಕಿದ್ದಾರೆ- ಯತ್ನಾಳ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ವೀರೇಂದ್ರ ಹೆಗಡೆಯವರ ಕಾರ್ಯ ಸಮಾಜಕ್ಕೆ ಮಾದರಿ:ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ಡಾ. ಪರಮ ಪೂಜ್ಯ ಡಿ. ವೀರೇಂದ್ರ ಹೆಗಡೆಯವರು ಮದ್ಯ ವ್ಯಸನಿಗಳ ಮುಕ್ತ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜನೆ ಮಾಡಿ ಸಾಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಬುಧವಾರ ಓಂ ಶ್ರೀ ಮಂಜುನಾಥಯ ನಮಃ ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ…

Read More

ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More

ಜು. 18ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು..18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಗ್ಗೆ 9ಗಂಟೆಗೆ ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್ ಟೈಮ್ಸ್ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ.ಮಧ್ಯಾಹ್ನ 12ಗಂಟೆಗೆ ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3ಗಂಟೆಗೆ ತಿಕೋಟಾ…

Read More

ಆಗಸ್ಟ್ 2,3 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಅಸ್ಮಿತಾ ವುಶು ಲೀಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಆಗಸ್ಟ್ 2 ಹಾಗೂ 3ರಂದು ಕರ್ನಾಟಕ ರಾಜ್ಯ ವುಶು ಸಂಸ್ಥೆಯ ವತಿಯಿಂದ, ದಾವಣಗೆರೆಯಲ್ಲಿ ಸಬ್ ಜ್ಯೂನಿಯರ್, ಜೂನಿಯರ್, ಬಾಲಕಿಯರ ಮತ್ತು ಮಹಿಳೆಯರ ವುಶು ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ರಾಜ್ಯ ವುಶು ಸಂಸ್ಥೆಯು ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ವುಶು ಒಕ್ಕೂಟದಿಂದ ಮಾನ್ಯತೆ ಪಡೆದ ವುಶು ಕ್ರೀಡೆಯಾಗಿದೆ. ವುಶು ಕ್ರೀಡೆಯು ದಸರಾ ಕ್ರೀಡಾಕೂಟದಲ್ಲಿ, ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ, ವಿಶ್ವ ವಿದ್ಯಾಲಯ ಕ್ರೀಡಾಕೂಟದಲ್ಲಿ,…

Read More

ನಂಜನಗೂಡು ಮಠದಲ್ಲಿ ಜಯತೀರ್ಥರ ಆರಾಧನೆ: ರಥೋತ್ಸವ, ವಿಶೇಷ ಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 16:ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಶ್ರೀ ಜಯತೀರ್ಥರ ಆರಾ ಧನೆಯನ್ನು ಅತ್ಯಂತ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.ತನ್ನಿಮಿತ್ತ ಬೆಳಿಗ್ಗೆ ಗುರುಸಾರ್ವಭೌಮರ ಅಷ್ಟೋತ್ತರ, ಸುಧಾ ಪಾರಾಯಣ, ಬಳಿಕ ವೃಂದಾವನಕ್ಕೆ ಫಲ ಪಂಚಾ ಮೃತ, ಅಲಂಕಾರ, ಮಹಾಪೂಜೆ ಜರುಗಿದವು. ಶ್ರೀ ಜಯತೀರ್ಥರ ಭಾವಚಿತ್ರಕ್ಕೆ ಹೂಮಾಲೆಗಳಿಂದ ಅಲಂಕರಿಸಿ ಶ್ರದ್ಧಾಭಕ್ತಿಯಿಂದ ನಮಿಸಲಾಯಿತು. ಆನಂತರ ಶ್ರೀ ಮಠದ ಒಳಾವರಣದಲ್ಲಿ ಟೀಕಾರಾಯರ ರಚಿಸಿದ ಗ್ರಂಥಗಳನ್ನು ಹಾಗೂ ಭಾವಚಿತ್ರ ಪುಷ್ಪಗಳನ್ನಿಟ್ಟ ಅಲಂಕೃತ ರಥೋತ್ಸವ ಜರುಗಿತು. ರಥೋತ್ಸವ ಸಮಯದಲ್ಲಿ ದೇವರ ನಾಮಗಳ ಸುಮಧುರ…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ ಸಲ್ಲಿಕೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…

Read More