ಅಗ್ನಿವೀರರ ನೇಮಕಾತಿ ರ್ಯಾಲಿ: ಸಿದ್ಧತೆಗಾಗಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ,ಏ.7: ಐತಿಹಾಸಿಕ ವಿಜಯಪುರದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿ ವತಿಯಿಂದ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿ ಬೃಹತ್ ರ್ಯಾಲಿ ನಗರದಲ್ಲಿ ಸೆಪ್ಟೆಂಬರ್ 10 ರಿಂದ 30ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಅಗ್ನಿಪಥ ನೇಮಕಾತಿ ರ್ಯಾಲಿಯ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ವಿಜಯಪುರ ಜಿಲ್ಲೆಯು ಒಳಗೊಂಡಂತೆ…


