saptsagar_admin

ಧರ್ಮಸ್ಥಳ ಚಲೋ ನಿಮಿತ್ತ ಪ್ರತಿಭಟನೆ ಮೆರವಣಿಗೆ: ಸರ್ಕಾರದ ವಿರುದ್ಧ ಪ್ರತಿಭಟನೆಕಾರರ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29:ಧರ್ಮಸ್ಥಳ ಸುಕ್ಷೇತ್ರ ವಿರುದ್ಧ ಷಡ್ಯಂತ್ರ ಖಂಡಿಸಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಯಿತು.ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ನಗರದ ಗಾಂಧಿ ವೃತದಿಂದ ಬಸವೇಶ್ವರ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟಿರುವ ಆರೋಪ ಖಂಡಿಸಿ ಪ್ರತಿಭಟನೆಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಧರ್ಮದ ಉಳಿವಿಗಾಗಿ ಧರ್ಮ ಯುದ್ದ ಹೆಸರಿನಲ್ಲಿ ಹೋರಾಟ, ಸರ್ಕಾರದ ವಿರುದ್ದ ಪ್ರತಿಭಟನೆಕಾರರು ಘೋಷಣೆಗಳನ್ನು ಕೂಗಿದರು.ಇದೇ ಸಂದರ್ಭದಲ್ಲಿ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ…

Read More

ನಿರ್ವಹಣೆ ಕೊರತೆಯಿಃದ ವಿಜಯಪುರದಲ್ಲಿ ರಸ್ತೆಗಳು ಹಾಳು: ಪಟ್ಟಣಶೆಟ್ಟಿ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ವಿಜಯಪುರ ನಗರ ಸೇರಿದಂತೆ ವಿಜಯಪುರ, ನಾಗಠಾಣ ಮತ ಕ್ಷೇತ್ರದಲ್ಲಿ ರಸ್ತೆಗಳು ಹದಗೆಟ್ಟು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆರೋಪಿಸಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಂದು ವರ್ಷದಲ್ಲಿ ರಸ್ತೆಗಳು ಹಾಳಾಗಿವೆ. ನಿರ್ವಹಣೆ ಕೊರತೆಯಿಂದ ರಸ್ತೆಗಳು ಹದಗೆಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಗಮನ ಹರಿಸಿಲ್ಲ. ಇದರಿಂದ ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದರು.ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭೃಷ್ಟಾಚಾರ ನಡೆದಿದೆ. ಇ-ಸ್ವತ್ತು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು.ಹಿಂದೂ ಮಹಿಳೆಯರ ಬಗ್ಗೆ ಅವಮಾನಕರವಾಗಿ…

Read More

ಸೆ. 1ರಿಂದ ಬಸವ ಸಂಸ್ಕೃತಿ ಅಭಿಯಾನ ಆರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ. ಈ ಸಂಸ್ಕೃತಿಯ ಶ್ರೇಷ್ಠತೆಯ ಪ್ರಸಾರಕ್ಕಾಗಿ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟಿಸಲಾಗಿದ್ದು, ಸೆ.೧ ರಿಂದ ಬಸವ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ಈ ಅಭಿಯಾನ ಆರಂಭಗೊಳ್ಳಲಿದ್ದು ಅ.೧ರವರೆಗೆ ಬಸವ ಸಂಸ್ಕೃತಿ ಅಭಿಯಾನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲುಪಲಿದೆ ಎಂದು ಬಸವನ ಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಾದಿ ಶರಣರ ಆಶಯಗಳನ್ನು ಬಿತ್ತುವ ದೃಷ್ಟಿಯಿಂದ ಈ…

Read More

ವಿಡಿಸಿಸಿ ಬ್ಯಾಂಕ್ ಗೆ ೨೫.೧೮ ಕೋಟಿ ರೂ. ನಿವ್ವಳ ಲಾಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಚಿವ ಶಿವಾನಂದ ಪಾಟೀಲ ತಿಳಿಸಿದರು.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಬ್ಯಾಂಕು ಗಳಿಸಿರುವ ನಿವ್ವಳ ಲಾಭದ ಪ್ರಮಾಣ ಬ್ಯಾಂಕಿನ ಇತಿಹಾಸದಲ್ಲಿಯೇ ಗರಿಷ್ಠವಾಗಿದ್ದು, ವಾಸ್ತವವಾಗಿ ಬ್ಯಾಂಕು ೩೩.೭೧ ಕೋಟಿ ರೂ. ಲಾಭ ಗಳಿಸಿದ್ದು, ಅದರಲ್ಲಿ ೮.೫೩…

Read More

ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ವಿರೋಧಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 28:ಜಿಲ್ಲೆಗೆ ಖಾಸಗಿ ಸಹಭಾಗಿತ್ವದಲ್ಲಿ ಆರಂಭಗೊಳ್ಳಲಿರುವ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ಸಾಹಿತಿಗಳು, ಚಿಂತಕರು, ದಲಿತ ಮತ್ತು ಕನ್ನಡಪರ ಹೋರಾಟಗಾರರು, ಕಾರ್ಮಿಕ, ವಿದ್ಯಾರ್ಥಿ ಯುವಜನ ಮಹಿಳಾ ಸಂಘಟನೆಯ ಮುಖಂಡರುಗಳು ಸಭೆ ಸೇರಿ ಖಾಸಗಿ ಸಹಭಾಗಿತ್ವವನ್ನು ವಿರೋಧಿಸಬೇಕು ಇದರ ವಿರುದ್ದ ಹೋರಾಟ ಮಾಡಬೇಕು ಎಂದು ಒಮ್ಮತದಿಂದ ನಿರ್ಧರಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳನ್ನೊಳಗೊಂಡ ‘ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ, ವಿಜಯಪುರ’ ಸಮಿತಿಯನ್ನು ರಚಿಸಲಾಯಿತು….

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಧಾರಾಕಾರ ಮಳೆ: ಮನೆ ಕುಸಿದು ಮೂವರಿಗೆ ಗಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಜಿಲ್ಲೆಯಲ್ಲಿ ಗುರುವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದಲ್ಲಿ ಮನೆ ಕುಸಿದು ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.ಮಲ್ಲವ್ವ ರುದ್ರಪ್ಪ ಗುಂಡುಪಲ್ಲೆ, ರುದ್ರಪ್ಪ ತಮ್ಮಣ್ಣ ಗುಂಡುಪಲ್ಲೆ ಹಾಗೂ ಶಾರದಾ ರುದ್ರಪ್ಪ ಗುಂಡುಪಲ್ಲೆ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಿರೇಮುರಾಳ ಗ್ರಾಮದಲ್ಲಿ ಸುಮಾರು ರಾತ್ರಿ 12-30 ಗಂಟೆ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಜನರ ಮೇಲೆ ಮನೆ ಕುಸಿದಿದೆ. ಮೂವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

Read More

ಚಿತ್ರದುರ್ಗದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಕುರಿತು ವಿಚಾರಸಂಕಿರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 28:ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ…

Read More