saptsagar_admin

ಕಳುವಾದ ಅಡಿವಿಟ್ಟ ಚಿನ್ನಕ್ಕೆ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರಿಂದ ಬ್ಯಾಂಕ್ ಎದುರು ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಬ್ಯಾಂಕಿನಲ್ಲಿ ಕಳುವಾದ ಚಿನ್ನಕ್ಕೆ ಪರಿಹಾರ ರೂಪದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಕೆನೆರಾ ಬ್ಯಾಂಕ್ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೇ 25ರಂದು ಮನಗೂಳಿ ಕೆನರಾ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಕಳ್ಳರು ಈ ಬ್ಯಾಂಕಿನಿಂದ 58 ಕೆಜಿಗೂ ಅಧಿಕ ಚಿನ್ನ, 5 ಲಕ್ಷ ನಗದು ಹಣ ಕದ್ದು ಪರಾರಿಯಾಗಿದ್ದ‌ರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿ 15…

Read More

ಅಸ್ಮಿತ ಖೇಲೋ ಇಂಡಿಯಾ ಯೋಗಸನ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಬಂಗಾರ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಆ.22 ಮತ್ತು 23 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ಯೋಗಾಸನ ಕ್ರೀಡಾಕೂಟದಲ್ಲಿ ಜಿಲ್ಲೆಯ ಬಾಲಿಕೆಯರು ಚಿನ್ನದ ಪದಕ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.18 ವರ್ಷದ ಒಳಗಿನ ಬಾಲಕಿಯರ ಆಟಿಸ್ಟಿಕ್ಕ ವಿಭಾದಲ್ಲಿ ಬಂಗಾರ ಪದಕ ಪಡೆದಿದ್ದು, ಕುಮಾರಿಯರಾದ ಶ್ರೀ ಲಕ್ಷ್ಮಿ ಮ್ಯಾಗೇರಿ, ಮರಿಯಮ್ಮ ಹರಿಜನ, ಪ್ರಿಯಾ ಚವ್ಹಾಣ, ಸುಮನ ಪೋಹಿಟೆ, ಹರ್ಷಿತಾ ಹರಿಜನ ತಂಡದೊಂದಿಗೆ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ….

Read More

ವಿಜಯಪುರ ಜಿಲ್ಲೆಯಲ್ಲಿ ಸಂಭ್ರಮದ ಗಣೇಶೋತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ದೇಶದ ಎಲ್ಲೆಡೆಯಂತೆ ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಗಣೇಶ್ ಉತ್ಸವವನ್ನು ಸಂಭ್ರಮ ಸಡಗರದಿಂದ ಬುಧವಾರ ಆಚರಿಸಲಾಯಿತು.ಚಿಕ್ಕ ಗಣಪತಿ ಮೂರ್ತಿ ಸೇರಿದಂತೆ ಬೃಹತ್ ಗಾತ್ರದ ಗಣಪತಿ ಮೂರ್ತಿಗಳನ್ನು ವಿವಿಧ ಗಣೇಶೋತ್ಸವ ಮಂಡಳಿಯವರು ಮುಂಚಿತವಾಗಿ ಗಣಪತಿ ಮೂರ್ತಿಗಳನ್ನು ಬುಕಿಂಗ್ ಮಾಡಿದ್ದರು. ಗುರುವಾರ ಗಣೇಶ್ ಚತುರ್ಥಿ ನಿಮಿತ್ತ ಬೆಳ್ಳಂ ಬೆಳಿಗ್ಗೆ ವಿವಿಧ ಗಜಾನನ ಮಂಡಳಿಗಳ ಮುಖಂಡರು ಮಾರುಕಟ್ಟೆಗೆ ಆಗಮಿಸಿ ತಾವು ಮುಂಚಿತವಾಗಿ ಆರ್ಡರ್ ಮಾಡಿದ್ದ ಗಣಪತಿ ಮೂರ್ತಿಗಳನ್ನು ಕಾರು ಟ್ರ್ಯಾಕ್ಟರ್ ಜೀಪಿನಲ್ಲಿ ಅದ್ದೂರಿ ಮೆರವಣಿಗೆ ಮೂಲಕ…

Read More

ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ ವಿರೋಧಿಸಿ ನಾಳೆ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬೇಡ ಎಂದು ಒತ್ತಾಯಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಮಧ್ಯಾಹ್ನ 12 ಗಂಟೆ ಸುಮಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ಸರ್ಕಾರಿ ವೈದ್ಯಕೀಯ ಕಾಲೇಜು ಪಿಪಿಪಿ ಆಧಾರ ಸ್ಥಾಪನೆ ಮಾಡುವುದು ಬೇಡ. ಸಂಪೂರ್ಣವಾಗಿ ಸರ್ಕಾರಿ ವೇದಿಕೆಯ ಕಾಲೇಜ್ ಸ್ಥಾಪನೆ ಆಗಬೇಕು ಎಂದು ಘೋಷಣೆ ಕೂಗಿ ಪ್ರತಿಭಟನೆ…

Read More

ಅಕ್ರಮ ಸಿಲಿಂಡರ್ ಅಡ್ಡೆ ಮೇಲೆ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ನಗರದ ಅತಾವುಲ್ಲಾ ಚೌಕ್ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗಳಿಂದ ಆಟೋಗಳಿಗೆ ರೀಪಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಅಕ್ರಮ ಸಿಲಿಂಡರ್ ಗಳನ್ನು ವಶಪಡಿಸಿಕೊಂಡರು.1 ತುಂಬಿದ ಅಡುಗೆ ಅನಿಲ ಸಿಲಿಂಡರ್ ಹಾಗೂ 3 ಖಾಲಿ ಸಿಲಿಂಡರ್ ಗಳನ್ನು, ಮತ್ತು ರಿಪಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಸಾರವಾಡ ಗ್ರಾಮಕ್ಕೆ ನೂತನ ಎರಡು ಬಸ್ಸುಗಳ ಕಾರ್ಯಾರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಮಂಗಳವಾರದಿಂದ ಪ್ರಾರಂಭವಾಗಿದೆ.ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೀ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ‌ ಈ ಬಸ್ ಸೇವೆ ಪ್ರಾರಂಭಿಸಿದೆ.ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ…

Read More

ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಐಡಿಎಸ್ಒ ವಿರೋಧ

ಸಪ್ತಸಾಗರ ವಾರ್ತೆ ವಿಜಯಪುರ,ಆ. 26:ನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಪಾಪನಿಗೆ ಸರ್ಕಾರ ನಿರ್ಧರಿಸಿರುವುದನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ.ಕಳೆದ 15 ವರ್ಷಗಳಿಂದ AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ಹೋರಾಟ ನಡೆಸಿಕೊಂಡು ಬಂದಿದೆ., ಜನರ ಹೋರಾಟದ ಫಲವಾಗಿ ಇಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ. ಆದರೆ ಇದರಲ್ಲಿ ಖಾಸಗಿ ಸಹಭಾಗಿತ್ವ AIDSO ಸಂಘಟನೆಯು ಒಪ್ಪುವುದಿಲ್ಲ. ಈಗಾಗಲೇ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು,…

Read More

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 26:ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ…

Read More

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕಾಲಕ್ಕೆ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ಗಣೇಶ ಮೂರ್ತಿ ಪ್ರತಿಷ್ಠಾಪನೆ ದಿನವಾದ ಆಗಸ್ಟ್ 27ರ ಬೆಳಿಗ್ಗೆ 6 ರಿಂದ ಆಗಸ್ಟ್ 28ರ ಬೆಳಿಗ್ಗೆ 6 ಗಂಟೆವರೆಗೆ ಹಾಗೂ 5ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಪ್ರಯುಕ್ತ ಆಗಸ್ಟ್ 31ರ ಬೆಳಿಗ್ಗೆ…

Read More

ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ-ಉಪಮನ್ಯು ಶಿವಾಚಾರ್ಯ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಅನಾದಿ ಕಾಲದಿಂದಲೂ ಗುರುವನ್ನು ಗೌರವಿಸುವ ಶ್ರೇಷ್ಠ ಸಂಸ್ಕೃತಿ, ಪರಂಪರೆ ಭಾರತದಲ್ಲಿದೆ.ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ ಎಂದು ಬೀದರ ಜಿಲ್ಲೆಯ ಐನಾಪುರ ಹಿರೇಮಠದ ಷ ಬ್ರ ಉಪಮನ್ಯು ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ಸೋಮವಾರದಂದು ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣ ಮಹಾಮಂಗಲ ಹಾಗೂ ಧರ್ಮಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಗುರು ಪರಂಪರೆಗೆ ನಮ್ಮ ನಾಡಿನಲ್ಲಿ ದೊಡ್ಡ ಇತಿಹಾಸವೇ ಇದೆ. ಗುರು ಎಂದರೆ ಜನರನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯುವ ರಾಜಮಾರ್ಗ ಎಂದು ಹೇಳಿದರು.ಅಗರಖೇಡ…

Read More