
ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಭೀತಿ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 22:ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1.80 ಕ್ಯೂಸೆಕ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.ಇದರಿಂದಾಗಿ ಕರ್ನಾಟಕದ ವಿಜಯಪುರ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾಂದಾರ್ ಕಂ ಬ್ರಿಡ್ಜ್ ಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹೀಗಾಗಿ ಮಹಾರಾಷ್ಟ್ರಕರ್ನಾಟಕ ಸಂಪರ್ಕ ಕಡಿತವಾಗಿದೆ.ಚಡಚಣ ತಾಲೂಕಿನಲ್ಲಿ ಬರುವಉಮರಜ – ಭಂಡಾರಕವಟೆ,ಶಿರನಾಳ – ಔಜ್, ಉಮರಾಣಿ – ಸಹದೇವಪುರ ಬಾಂದಾರ್ ಕಂ ಬ್ರಿಡ್ಜ್ ಮುಳುಗಡೆಯಾಗಿವೆ.ಇಂಡಿ ತಾಲೂಕಿನ…