ನೆಮ್ಮದಿಯ ಬದುಕಿಗೆ ದೇವರ ಸ್ಮರಣೆ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 17:ಗುರುವಿನಲ್ಲಿ ದೇವರನ್ನು ಕಾಣುವ ಪರಂಪರೆ ನಮ್ಮದು. ತಂದೆ, ತಾಯಿ, ಗುರುವನ್ನು ಗೌರವಿಸುವಂಥ ಸಂಸ್ಕೃತಿ ನಮ್ಮದು. ಹರ ಪೂಜೆ, ಗುರು ಸೇವೆ ಬದುಕಿನಲ್ಲಿ ಮುಖ್ಯ ಎಂದು ನಾಗಠಾಣ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ಉದಯಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ದೇವರ ಸ್ಮರಣೆಯಿಂದ ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಮೂಡಿ, ಧನಾತ್ಮಕ ಶಕ್ತಿಯ ಅನುಭವವಾಗುತ್ತದೆ. ದೇವರ ನಾಮ…


