saptsagar_admin

ನೆಮ್ಮದಿಯ ಬದುಕಿಗೆ ದೇವರ ಸ್ಮರಣೆ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 17:ಗುರುವಿನಲ್ಲಿ ದೇವರನ್ನು ಕಾಣುವ ಪರಂಪರೆ ನಮ್ಮದು. ತಂದೆ, ತಾಯಿ, ಗುರುವನ್ನು ಗೌರವಿಸುವಂಥ ಸಂಸ್ಕೃತಿ ನಮ್ಮದು. ಹರ ಪೂಜೆ, ಗುರು ಸೇವೆ ಬದುಕಿನಲ್ಲಿ ಮುಖ್ಯ ಎಂದು ನಾಗಠಾಣ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ಉದಯಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ದೇವರ ಸ್ಮರಣೆಯಿಂದ ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಮೂಡಿ, ಧನಾತ್ಮಕ ಶಕ್ತಿಯ ಅನುಭವವಾಗುತ್ತದೆ. ದೇವರ ನಾಮ…

Read More

ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ:ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.16: ಪ್ರಸ್ತುತ ಲಭ್ಯವಿರುವ ಇಲಾಖಾವಾರು ನಿಗದಿಪಡಿಸಿದ ಅನುದಾನವನ್ನು ಮುಂಬರುವ ಸಭೆಯೊಳಗಾಗಿ ನೂರರಷ್ಟು ಪ್ರಗತಿ ಸಾಧಿಸಿ ವರದಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಜನವರಿ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ವರ್ಷದಲ್ಲಿ ನಿಗದಿಪಡಿಸಿದ ಭೌತಿಕ ಹಾಗೂ…

Read More

ಲಾರಿ- ಬೈಕ್ ಡಿಕ್ಕಿ: ಮಹಿಳೆ ಸಾವು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16:ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸಂಗಾಪುರ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಅಡವಿ ಸಂಗಾಪುರ ಗ್ರಾಮದ ನಿವಾಸಿ ಬಾಳವ್ವ ದಳವಾಯಿ (50) ಮೃತಪಟ್ಟಿದ್ದಾಳೆ.ಬಾಳವ್ವ ಅವರು ತಮ್ಮ ಸಂಬಂಧಿಕರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಆಗ ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬೈಕ್ ಸವಾರನಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು ತಕ್ಷಣವೇ ಅವರನ್ನು…

Read More

ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಿ-ಸಚಿವ ಡಾ. ಎಂ.ಬಿ. ಪಾಟೀಲ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.16: ಶಾಲೆಗಳಿಗೆ ಶಿಕ್ಷಕರು ಹೃದಯವಿದ್ದ ಹಾಗೆ. ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರು ಯೋಜನಾ ಬದ್ಧವಾಗಿ ಪಾಠ ಬೋಧನೆಗೆ ಆದ್ಯತೆ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ…

Read More

ವಿಚ್ಛೇದನದ ವಾಸ್ತವಕ್ಕೆ ಹಿಡಿದ ಕನ್ನಡಿ ‘ಪ್ರೇಮ್ ಲವ್ಸ್ ನಂದಿನಿ’ ಚಿತ್ರದಲ್ಲಿವಿಜಯಪುರದ ವಿಶ್ವಪ್ರಕಾಶ ಮಲಗೊಂಡ ಅಭಿನಯ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16 :ಇಂದಿನ ಯುವ ಪೀಳಿಗೆಯ ಪ್ರೇಮ ಮತ್ತು ವಿಚ್ಛೇದನದಂತಹ ಸಂಕೀರ್ಣ ಸಂಬಂಧಗಳ ಮೇಲೆ ಬೆಳಕು ಚೆಲ್ಲುವ ‘ಪ್ರೇಮ್ ಲವ್ಸ್ ನಂದಿನಿ’ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಬಿ ಆರ್ ಫಿಲಂ ಐಕಾನ್ ವಾಹಿನಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಸವರಾಜ ನಂದಿ ನಿರ್ಮಾಣದ ಈ ಚಿತ್ರಕ್ಕೆ ಮಹಿಳಾ ನಿರ್ದೇಶಕಿ ಸುಧಾ ಅಣ್ಣಾಶೇಠ ಆ್ಯಕ್ಷನ್ ಕಟ್ ಹೇಳಿದ್ದಾರೆ.ವಿಜಯಪುರದ ನಟ ವಿಶ್ವಪ್ರಕಾಶ ಟಿ ಮಲಗೊಂಡ ನಾಯಕನಾಗಿ ನಟಿಸಿದ 20ನೇ…

Read More

ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಸಾಧ್ಯವಿಲ್ಲ: ನಿಖಿಲ್

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16: ನಮ್ಮ ಶಕ್ತಿ ಬಿಜೆಪಿಗೆ ಧಾರೆ ಎರೆದಿದ್ದೇವೆ. ಬಿಜೆಪಿ ಶಕ್ತಿ ನಮಗೆ ಧಾರೆ ಎರೆದಿದ್ದಾರೆ. ಭ್ರಷ್ಟ ಕಾಂಗ್ರೆಸ್ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ. ಹೀಗಾಗಿ ಎರಡು ಪಕ್ಷ ವಿಲೀನ ಆಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.ಮೈತ್ರಿಯ ವಿಮಾನ ಹತ್ತಿದ್ದೇವೆ. ಅದು ಟರ್ಬ್ಯೂಲೆನ್ಸ್ ಆಗುವುದು ಸಹಜ. ಮಧ್ಯದಲ್ಲಿ ಕೆಲವು ಪ್ರಯಾಣಿಕರು ಇಳಿಯುವಂತೆ ಹೇಳಿದರೆ ಅದು ಸಾಧ್ಯವಾಗದು. ಇನ್ನೂ ಜೆಡಿಎಸ್ ಸೈದ್ಧಾಂತಿಕವಾಗಿ…

Read More

ಮನುಷ್ಯನಿಗೆ ಮುಪ್ಪು ಎಂಬುದು ಮರುಬಾಲ್ಯ ಇದ್ದಂತೆ: ಡಾ. ಎಚ್.ಕೆ. ಯಡಹಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16:ಮನುಷ್ಯನ ಜೀವನದಲ್ಲಿ ಬಾಲ್ಯ, ಯೌವ್ವನ, ಮಧ್ಯ ವಯಸ್ಸು ಹಾಗೂ ಮುಪ್ಪು ಸಹಜವಾಗಿ ಬರುವಂತಹವುಗಳು.ಬಾಲ್ಯವನ್ನು ಹಿರಿಯರ ಪ್ರೀತಿಯೊಂದಿಗೆ, ಯೌವನವನ್ನು ಹುಮ್ಮಸ್ಸಿನೊಂದಿಗೆ ,ಮಧ್ಯ ವಯಸ್ಸನ್ನು ಮಕ್ಕಳು ಹಾಗೂ ಬಂಧು ಬಾಂಧವರ ಜೊತೆಗೆ ಕಳೆಯುತ್ತೇವೆ. ಆದರೆ ಮುಪ್ಪಾವಸ್ಥೆಯಲ್ಲಿ ಮರೆವು, ದೈಹಿಕವಾದ ನ್ಯೂನ್ಯತೆಗಳ ಮಧ್ಯದಲ್ಲಿ ಬದುಕುತ್ತಾ ನಿರ್ಲಕ್ಷಕ್ಕೆ ಒಳಗಾಗುವುದನ್ನು ಕಾಣುತ್ತೇವೆ. ಇದರತ್ತ ನಮ್ಮ ಯುವ ಜನತೆ ಗಮನಿಸಿ, ತಮ್ಮ ಹಿರಿಯರನ್ನು ಪ್ರೀತಿಯ ಆರೈಕೆಯೊಂದಿಗೆ ನೋಡಿಕೊಳ್ಳಬೇಕು. ಏಕೆಂದರೆ ಮನುಷ್ಯನಿಗೆ ಮುಪ್ಪು ಎಂಬುದು ಮರು ಬಾಲ್ಯ ಇದ್ದಂತೆ ಎಂದು ಸಿಕ್ಯಾಬ್…

Read More

ಗುರುಹಿರಿಯರುಹಾಕಿಕೊಟ್ಟಮಾರ್ಗದಲ್ಲಿನಡೆದರೆಯಶಸ್ಸುಖಂಡಿತ: ಡಿಸಿಎಂ‌ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ‌ಫೆ.15:“ಬೇರನ್ನು ಮರೆತರೆ ಮರ ಬಾಳುವುದಿಲ್ಲ. ಅದೇ ರೀತಿ ನಿಮ್ಮ ಮೂಲವನ್ನು ಮರೆತರೆ ಫಲ ದೊರೆಯುವುದಿಲ್ಲ. ಅದೇ ರೀತಿ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ಯಶಸ್ಸು ಖಂಡಿತ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು.ನಗರದ ಪುರಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಕೆ.ಜೆ. ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.“ವಿದ್ಯೆಯಿಂದ ವಿನಯ, ವಿನಯದಿಂದ ಯೋಗ್ಯತೆ, ಯೋಗ್ಯತೆಯಿಂದ ಹಣ, ಹಣದಿಂದ ಧರ್ಮ, ಧರ್ಮದಿಂದ‌ ಸುಖ ದೊರೆಯುತ್ತದೆ….

Read More

ಪ್ರತಿಯೊಬ್ಬರಿಗೂ ಧರ್ಮ ಪ್ರಜ್ಞೆ ಮುಖ್ಯ-ಉಜ್ಜಯಿನಿ ಜಗದ್ಗುರು ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 15:ಬದುಕಿನಲ್ಲಿ ಭಗವಂತನನ್ನು ಮರೆಯದಿರಿ. ಪ್ರೀತಿ-ಕರುಣೆಯೇ ನಿಜವಾದ ಧರ್ಮ. ಬದುಕಿನಲ್ಲಿ ಗಳಿಸುವುದನ್ನು ಕಲಿತಂತೆ ಬದುಕುವುದನ್ನು ಕಲಿಯಬೇಕಾದರೆ ಪ್ರತಿಯೊಬ್ಬರಿಗೂ ಧರ್ಮ ಪ್ರಜ್ಞೆ ಮುಖ್ಯ ಎಂದು ಉಜ್ಜಯಿನಿ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಹಿರೇಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ಉದಯಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜನಮನವನ್ನು ನಿತ್ಯವೂ ಹಸನುಗೊಳಿಸುತ್ತಾ ನಿತ್ಯ ನೂತನ ಬದುಕಿಗೆ ಕಾರಣವಾಗಿ ನೀತಿ-ನಿಯಮ ಪಾಲನೆಗೆ ಉನ್ನತ ಜೀವನ ಮೌಲ್ಯಗಳಿಗೆ ಸದಾ…

Read More

ನಾಡಿನ ಅಭಿವೃದ್ಧಿಗೆ ಮಠ ಮಾನ್ಯಗಳ ಪಾತ್ರ ಅನನ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 15:ನಾಡಿನ ಅಭಿವೃದ್ಧಿಗೆ ಮಠಮಾನ್ಯಗಳೂ ಅಪಾರ ಕೊಡುಗೆ ನೀಡುತ್ತಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಶ್ರೀ ಮುಕ್ತಂಕಾರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಪವಾಡಗಳ ಮೂಲಕ ಹೆಸರಾಗಿದ್ದ ಮುಕ್ತಂಕಾರರ ಆಶೀರ್ವಾದದಿಂದ ಇಲ್ಲಿ ಸಮೃದ್ಧಿ ನೆಲೆಸಿದೆ. ಶ್ರದ್ಧೆ ಭಕ್ತಿಯಿಂದ ಕಾರ್ಯಕ್ರಮದಲ್ಲಿ ಸಮಸ್ತ ಗ್ರಾಮಸ್ಥರು ಪಾಲ್ಗೊಂಡಿದ್ದಾರೆ. ನಾನೂ ಭಾಗಿಯಾಗಿದ್ದು ಸಂತಸ ತಂದಿದೆ. ದೇಶದ ಪರಂಪರೆ, ಸಂಸ್ಕೃತಿಗೆ…

Read More