saptsagar_admin

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ

ಸಪ್ತಸಾಗರ, ವಾರ್ತೆ, ವಿಜಯಪುರ, ಆ. 13 :ಪವಿತ್ರ ಪುಣ್ಯ ಕ್ಷೇತ್ರ ಧರ್ಮಸ್ಥಳ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಸಂಘಟನೆ ಮುಖಂಡರು ಹಾಗೂ ಧರ್ಮಸ್ಥಳದ ಭಕ್ತಾದಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು. ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ಮೆರವಣಿಗೆ ನಂತರ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಪ್ರಮುಖರಾದ ಶಿವಾನಂದ ದೇಸಾಯಿ, ಅಪ್ಪುಗೌಡ ಪಾಟೀಲ್(ಮನಗೂಳಿ),…

Read More

ನಾಳೆಯಿಂದ ಸಾರವಾಡದಲ್ಲಿಈಶ್ವರ ಹಾಗೂ ಮಾರುತಿ ದೇವರ ಜಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.13 :ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಶ್ರೀ ಈಶ್ವರ ಹಾಗೂ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವವು ಇದೇ ದಿ.೧೪ ರಿಂದ ಐದು ದಿನಗಳವರೆಗೆ ವಿಜೃಂಭಣೆಯಿಂದ ಜರುಗಲಿದೆ.ಜಾತ್ರೆಯ ಅಂಗವಾಗಿ ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿ.14 ರಂದು ವಿವಿಧ ವಾದ್ಯ ಮೇಳ ಜಾಗೂ ಪಲ್ಲಕ್ಕಿ ಉತ್ಸವದೊಂದಿಗೆ ಕುಲಕರ್ಣಿ ಅವರ ಮನೆಯಿಂದ ಮಾರುತಿ ದೇವರ ಉತ್ಸವ ಮೂರ್ತಿಯನ್ನು ಮಾರುತಿ ದೇವಸ್ಥಾನಕ್ಕೆ ತಂದು ಬಳಿಕ ಓಕಳಿ ಕಂಬ ನಿಲ್ಲಿಸುವುದರೊಂದಿಗೆ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ…

Read More

ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯ, ನೂತನ ಕಟ್ಟಡ ಮಂಜೂರಿಗೆ ಆಗ್ರಹಿಸಿ ಡಿ.ವಿ.ಪಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 13: ನಗರದ ಗಾಂಧಿ ಚೌಕ್ ನಲ್ಲಿರುವ ಶಿಕ್ಷಣ ಇಲಾಖೆಯ ಮಹಿಳಾ ಶಾಲಾ ಕಾಲೇಜು ಕ್ಯಾಂಪಸ್ ನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯ ಮತ್ತು ನೂತನ ಕಟ್ಟಡ ಮಂಜೂರು ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ, ಗಾಂಧಿ ಚೌಕ್ ಕ್ಯಾಂಪಸ್ ನಲ್ಲಿ ಇರುವ ಮಹಿಳಾ ಶಾಲಾ ಕಾಲೇಜು ಐತಿಹಾಸಿಕ ಹಿನ್ನಲೆವುಳ್ಳದ್ದಾಗಿದೆ. ಬ್ರಿಟಿಷರ ಕಾಲದಿಂದಲ್ಲಿ ಪ್ರಾರಂಭವಾದ ಈ ಕಾಲೇಜು ಇದು…

Read More

ಸಾಹಿತಿ ಪ್ರೊ. ದೊಡ್ಡಣ್ಣ ಭಜಂತ್ರಿಯವರಿಗೆಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 13:ಸಾಹಿತಿ ಪ್ರೊ. ದೊಡ್ಡಣ್ಣ ಭಜಂತ್ರಿ ಅವರಿಗೆ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಬಬಲೇಶ್ವರ ತಾಲೂಕಿನ ವಿಜಯಪುರ ಜಿಲ್ಲೆಯ ನಿಡೋಣಿ ಗ್ರಾಮದಲ್ಲಿ ಜರುಗಿದ 918ನೇ ಚಂದಯ್ಯ ಶರಣರ ಜಯಂತಿಯ ಆಚರಣೆಯ ಕಾರ್ಯಕ್ರಮದಲ್ಲಿ ನಿಡೋಣಿಯ ಕಾಯಕಯೋಗಿ ಶರಣ ನುಲಿಯ ಚಂದಯ್ಯ ಭಜಂತ್ರಿ ಅಭಿವೃದ್ಧಿ ಸಂಘದವರು ಖ್ಯಾತ ಬಂಡಾಯ ಸಾಹಿತಿ ಪ್ರೊ.ದೊಡ್ಡಣ್ಣ ಬಜಂತ್ರಿ ಅವರಿಗೆ “ಸಾಹಿತ್ಯ ಭೂಷಣ”ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಪ್ರೊ. ದೊಡ್ಡಣ್ಣ ಭಜಂತ್ರಿಯವರು ಕಾಲ ಕೆಟ್ಟತ ತಂಗಿ, ಲಚ್ಚ, ತುಂತುರು, ತಲ್ಲಣದ ಹಕ್ಕಿಹಾಡು,…

Read More

ರಂಭಾಪುರದಲ್ಲಿ ಜೋಡು ಕುದುರೆ ಓಟದ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 13: ತಾಲೂಕಿನ ರಂಭಾಪುರ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಉತ್ಸವದ ಪೂರ್ವಭಾವಿಯಾಗಿ ರೈತರಿಗಾಗಿ ಜೋಡು ಕುದುರೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು.ಸ್ಪರ್ಧೆಯಲ್ಲಿ ವಿಜೇತರಾದ ರೈತರಿಗೆ ಊರಿನ ಹಿರಿಯರು, ಯುವಕರು ಬಹುಮಾನಗಳನ್ನು ವಿತರಿಸಿದರು.ಸಂಗನಗೌಡ ಪಾಟೀಲ, ಈರನಗೌಡ ಪಾಟೀಲ, ಧರೆಪ್ಪ ಪೂಜಾರಿ, ಶರಣು ಪೂಜಾರಿ, ಶ್ರೀಶೈಲ ಲೋಗಾವಿ, ಕೆಂಚಪ್ಪ ಲೋಗಾವಿ, ಸಂತೋಷ ಮೆಂಡೆಗಾರ, ರಾಮನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Read More

ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯಕ್ಕೆ ಎಬಿವಿಪಿ ನಿಯೋಗ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ,ಎಬಿವಿಪಿ ನಿಯೋಗವು ಭೇಟಿ ನೀಡಿತು.ವಿಶ್ವವಿದ್ಯಾಲಯಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಅವರ ಅಂಕ ಪಟ್ಟಿ ಹಾಗೂ ಅವರ ಶೈಕ್ಷಣಿಕ ಸಮಸ್ಯೆಗಳು ಒಂದೇ ದಿನದಲ್ಲಿ ಪರಿಹರಿಸಿ ಕೊಡಲು ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ವಿಶ್ವವಿದ್ಯಾಲಯಗಳ ಸಂಚಾಲಕ ವಿದ್ಯಾನಂದ ಸ್ಥಾವರಮಠ ಹಾಗೂ ಎಬಿವಿಪಿ ರಾಜ್ಯ ಕಾರ್ಯಕಾರಿಣಿ…

Read More

ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಆ.೧೨:ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮೂರು ದಿನಗಳ ವರೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.ಈ ಹೋರಾಟವನ್ನು ಉದ್ದೇÀಶಿಸಿ ಎಐಕೆಕೆಎಮ್‌ಎಸ್ ರಾಜ್ಯ ಕಾರ್ಯದರ್ಶಿ ಬಿ. ಭಗವಾನ್‌ರೆಡ್ಡಿ ಅವರು ಮಾತನಾಡಿ, ಕಳೆದ ಜನವರಿ ತಿಂಗಳಲ್ಲಿ ರಾಜ್ಯ ಮಟ್ಟದ ಸುಮಾರು ೪೨೦೦೦ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಪ್ರೀಡ್‌ಂ ಪಾರ್ಕ್ನಲ್ಲಿ ಸತತ ೪ ದಿನಗಳ ಹೋರಾಟ ಕೈಗೊಂಡಾಗ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಉನ್ನತ ಅಧಿಕಾರಿಗಳು ಪ್ರತಿಯೊಬ್ಬರಿಗೂ ಕೇಂದ್ರದ ಭಾಗಶಃ ಪ್ರೋತ್ಸಾಹಧನ ಮತ್ತು…

Read More

ಬೇಡಿಕೆ ಈಡೇರದಿದ್ದರೆ ತರಗತಿ ಬಹಿಷ್ಕಾರ: ಶಿಕ್ಷಕರ ಸಂಘದ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ.೧೨:ಪ್ರಾಥಮಿಕ ಶಾಲಾ ಶಿಕ್ಷಕರ “ವೃಂದ ಮತ್ತು ನೇಮಕಾತಿ ನಿಯಮ” ಬದಲಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಮಂಗಳವಾರ ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಶಿಕ್ಷಕ ಸಮೂಹ ಹಾಗೂ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೇರಿ ಹಕ್ಕೋತ್ತಾಯದ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ ಮಾತನಾಡಿ,…

Read More

ಜೋಡಿಮಾರ್ಗಕಾಮಗಾರಿ: ರೈಲುಸೇವೆಗಳಲ್ಲಿಬದಲಾವಣೆಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12:ಹುಬ್ಬಳ್ಳಿ ವಿಭಾಗದ ಅಡಿಯಲ್ಲಿ ಬರುವ ವಿಜಯಪುರ-ಬಾಗಲಕೋಟೆ ಭಾಗದ 35 ಕಿಲೋಮೀಟರ್ ಜೋಡಿ ಮಾರ್ಗ ನಿರ್ಮಾಣದ ಭಾಗವಾಗಿ, ಆಲಮಟ್ಟಿ–ಜಡ್ರಾಮಕುಂಟಿ–ಮುಗಳಳ್ಳಿ–ಬಾಗಲಕೋಟೆ ನಡುವಿನ ಡಬ್ಲಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಅವುಗಳ ವಿವರ ಈ ಕೆಳಗಿನಂತಿವೆ: ರೈಲುಗಳ ಸಂಚಾರ ರದ್ದು:ಆಗಸ್ಟ್ 14 ರಿಂದ 23, 2025 ರವರೆಗೆ ಸೋಲಾಪುರ – ಹೊಸಪೇಟೆ ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 11415), ಮತ್ತು ಆಗಸ್ಟ್ 15 ರಿಂದ 24, 2025 ರವರೆಗೆ ಹೊಸಪೇಟೆ…

Read More

ಉಚಿತ ಮೀನು ಮರಿ ವಿತರಣೆ : ಹೆಸರು ನೋಂದಣಿಗೆ ಅವಕಾಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12:ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡಚಣ, ಇಂಡಿ, ದೇವರಹಿಪ್ಪರಗಿ, ಆಲಮೇಲ ತಾಲೂಕಿನ ರೈತರು ಆಗಸ್ಟ್ 20ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 9845927110 ಸಂಪರ್ಕಿಸಬಹುದಾಗಿದೆ ಎಂದು…

Read More