saptsagar_admin

ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More

ಬ್ರಹ್ಮಕುಮಾರಿ ಈಶ್ವರಿಯ ವಿವಿ ವತಿಯಿಂದ ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ಸಹೋದರಿ ಶೋಭಾ

ಸಪ್ತ ಸಾಗರ ವಾರ್ತೆ, ವಿಜಯಪುರ ಆ. 9: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಶನಿವಾರ ಬೆಳಿಗ್ಗೆ ಸಚಿವರ ಗೃಹ ಕಚೇರಿಗೆ ಆಗಮಿಸಿದ ನಗರದ ಬ್ರಹ್ಮಕುಮಾರಿ‌ ಈಶ್ವರಿಯ ವಿವಿ ಪ್ರಕೃತಿ ಕಾಲನಿ ಸೇವಾ ಕೇಂದ್ರ ಸಂಚಾಲಕಿ ಶೋಭಾ‌ ಅವರು ಸಚಿವರಿಗೆ ರಾಖಿ‌ ಕಟ್ಟಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪ್ರೇಮ, ವಿಶ್ವಾಸ ಮತ್ತು ರಕ್ಷಣೆಯ ಬಾಂಧವ್ಯವನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬ ಸಹೋದರ–ಸಹೋದರಿಯರ ನಡುವಿನ ಆತ್ಮೀಯ…

Read More

ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ವಿಜಯಪುರ ಮಹಾನಗರ ಪಾಲಿಕೆ 22ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಆ.11ರಂದು ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಿಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಆ.11ರ ಬೆಳಿಗ್ಗೆ 6 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿ ಶಸ್ತ್ರ,…

Read More

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ- ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು,…

Read More

ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ಪಿ.ಜಿ. ಪವಾರ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 9:ತಮ್ಮ ಬದುಕಿನ ಮೂಲಕವೇ ಕಾಯಕ ತತ್ವಗಳನ್ನು 12ನೇ ಶತಮಾನದಲ್ಲಿಯೇ ಜಗತ್ತಿಗೆ ಸಾರಿದ ಶರಣರು ಆದರ್ಶ ವಿಚಾರಗಳು ನಮಗೆ ದಾರದೀಪವಾಗಿದೆ ಎಂದು ಚುನಾವಣಾ ತಹಶೀಲ್ದಾರ ಪಿ.ಜಿ.ಪವಾರ ಅವರು ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶರಣರು ತಮ್ಮ ವಚನಗಳ ಮೂಲಕ ಈ ಸಮಾಜಕ್ಕೆ ಬಹು‌ ದೊಡ್ಡ ಕೊಡುಗೆ ನೀಡಿದ್ದಾರೆ.‌ ಶರಣರ…

Read More

ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More

ಜೀವನದ ಮೌಲ್ಯ ಕಲಿಸುವ ಪವಿತ್ರ ಸಂಬಂಧವೇ ವಿವಾಹ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ವಿವಾಹವು ದೈವಿಕ ಮತ್ತು ಪವಿತ್ರ ಸಂಬಂಧವಾಗಿದ್ದು, ಅದು ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣದಲ್ಲಿ ‘ಹೇಮರೆಡ್ಡಿ ಮಲ್ಲಮ್ಮಳ ವಿವಾಹ ಮಹೋತ್ಸವ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಾರಂಭ’ ವನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿವಾಹವು ಸಮಾಜದಲ್ಲಿ ಬಹಳ ಮಹತ್ವದ ಸ್ಥಾನ ಪಡೆದಿದೆ. ಇದು ಇಬ್ಬರು ವ್ಯಕ್ತಿಗಳ ನಡುವಿನ…

Read More

ಡಿಜಿಟಲ್ ಫಾರ್ಮೆಟ್ ನಲ್ಲಿ ಮತದಾರ ಪಟ್ಟಿ ನೀಡುವ ವ್ಯವಸ್ಥೆ ಆಗಬೇಕು: ಸಚಿವ ಎಂ.ಬಿ. ಪಾಟೀಲ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 9:45 ದಿನಗಳಲ್ಲಿಯೇ ಮತದಾರರ ಪಟ್ಟಿ ಡಿಲೀಟ್ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಗೋಲ್ ಮಾಲ್ ಮಾಡಲಾಗಿದೆ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.ಈಗಾಗಲೇ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತದಾರರ ಪಟ್ಟಿಯ ಗೋಲ್ ಮಾಲ್ ಕುರಿತು ಹೇಳಿದ್ದಾರೆ.ರಾಜ್ಯದಲ್ಲಿ ನಿನ್ನೆ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. ಮಹದೇವಪುರದಲ್ಲಿ…

Read More

ವಿಜಯಪುರದಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರು ತೀವ್ರ ತೊಂದರೆ ಅನುಭವಿಸಿದ್ದರು. ಈ ಮಧ್ಯೆ ಒಂದು ದಿನ ಮಾತ್ರ ಮಳೆ ನಿಂತು ಜನರು ಸೂರ್ಯನ ಮುಖ ಕಂಡಿದ್ದರು.ಶುಕ್ರವಾರ ಸಂಜೆ ನಗರ ಸೇರಿದಂತೆ ಮತ್ತೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲ ನಗರದಲ್ಲಿ ಧಾರಾಕಾರ ಮಳೆ ಸುರಿದು…

Read More

ಕಾನೂನ ಪದವಿ ಪಡೆದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಕ್ಕೆ ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 30 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.ಅರ್ಜಿ ಸಲ್ಲಿಸಲು…

Read More