saptsagar_admin

ನೀಟ್ ಪರೀಕ್ಷೆಯನ್ನು ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲು ವಿದ್ಯಾರ್ಥಿ ಸಂಘಟನೆ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಮೇ. 16 :ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮದಿಂದಾಗಿ ನೀಟ್ ಅವ್ಯವಸ್ಥೆ ಆಗರವಾಗಿದೆ. ಬಡ ವಿದ್ಯಾರ್ಥಿಗಳಿಗೆ ದೊಡ್ಡ ಮೋಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರೂಪದಲ್ಲಿರುವ ನೀಟ್ ಪರೀಕ್ಷೆಯನ್ನು ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ತೇಲಿ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವೈದ್ಯರಾಗ ಬಯಸುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅದರಲ್ಲೂ ಬಡ ಹಾಗೂ ಮಧ್ಯಮ ವರ್ಗದ…

Read More

ವಿಜಯಪುರದಲ್ಲಿ ಮೇ 17 ರಿಂದ ಪ್ರಪ್ರಥಮ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ: ಪಂದ್ಯಾಟದಲ್ಲಿ 756 ಆಟಗಾರರು ಭಾಗಿ- ಕುಮಾರ ಬಂಗಾರಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇ 17 ರಿಂದ ಆಯೋಜಿಸಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬಿಎಲ್‌ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ ರೈಸರ್ ಟೈಟಲ್ ಕಾರ್ಡ್ ನಡಿ ಈ ಪಂದ್ಯಾವಳಿ ನಡೆಯಲಿದೆ ಎಂದರು.ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ 756 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದು, ರಾಜ್ಯ, ರಾಷ್ಟ್ರ…

Read More

ವೃಕ್ಷ ಅಭಿಯಾನ, ಮೆರಾಥಾನ್‌ ಎಫೆಕ್ಟ್‌:ಬಿರು ಬೇಸಿಗೆಯಲ್ಲೂ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗದ ತಾಪಮಾನಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ನಗರದಲ್ಲಿ ಹಲವು ವರ್ಷಗಳಿಂದ ಮೆರಾಥಾನ್‌ ನಡೆಸುತ್ತಿದ್ದೇವೆ. ಇದರಿಂದಾಗಿ ವಿಜಯಪುರದ ವಾತಾವರಣ ಸಂಪೂರ್ಣ ಬದಲಾಗಿದೆ. ಈ ವರ್ಷ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗಿಲ್ಲ. ಇದರಿಂದಾಗಿ ವಿಜಯಪುರಕ್ಕೆ ಗ್ರೇಟರ್‌ ಲುಕ್‌ ಬಂದಿದೆ ಎಂದು ವೃಕ್ಷೋತ್ಥಾನ್‌ ಹಾಗೂ ಮೆರಾಥಾನ್‌ ರೂವಾರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದ ಬಿಎಲ್‌ ಡಿಇ ಸಂಸ್ಥೆಯಲ್ಲಿ ಶನಿವಾರ ಬ್ಯಾಡ್ಮಿಂಟನ್‌ ಅಂಗಳ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಮೆರಾಥಾನ್‌ ಕೂಡಾ ನಡೆಸುತ್ತಿರುವುದರಿಂದ ವಿಜಯಪುರಕ್ಕೆ ಹೊಸ ಲುಕ್‌…

Read More

ಜನ-ಜಾನುವಾರು ಹಾನಿ ತಪ್ಪಿಸಲು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಮಳೆ-ಗಾಳಿ ಹಾಗೂ ಸಿಡಿಲು-ಮಿಂಚಿನಿಂದ ತಪ್ಪಿಸಿಕೊಳ್ಳಲು ಜನ ಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಹವಾಮಾನ ಮಾಹಿತಿ ಹಾಗೂ ಗುಡುಗು-ಮಿಂಚು ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ ಎನ್ ಡಿಎಂಸಿ) ಅಭಿವೃದ್ಧಿಪಡಿಸಿರುವ SIDILU ಆ್ಯಪ್ ನಲ್ಲಿ ಪಡೆಯಬಹುದು ಎಂದವರು ತಿಳಿಸಿದ್ದಾರೆ.ಜೊತೆಗೆ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ (NDMA) ಅಭಿವೃದ್ಧಿಪಡಿಸಿರುವ…

Read More

ಆರೋಗ್ಯಕ್ಕೆ ಅಕ್ಕಡಿ ಕಾಳು ಸೇವನೆ ಅಗತ್ಯ: ತೊಗರಿಯಲ್ಲಿ ಉತ್ಪಾದನಾ ತಾಂತ್ರಿಕತೆಗಳ ಕಾರ್ಯಾಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಆಹಾರ ಪದ್ಧತಿಯಲ್ಲಿ ದ್ವಿದಳ ಧಾನ್ಯಗಳಿಗೆ ಅಗ್ರಸ್ಥಾನವಿದೆ. ಅಕ್ಕಡಿ‌ ಕಾಳಿಲ್ಲದ ಊಟಿಲ್ಲ, ಅಷ್ಟರ ಮಟ್ಟಿಗೆ ತೊಗರಿಯೂ ನಮ್ಮ ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿದೆ. ಅವು ನಮ್ಮ ‌ಜೀವನಕ್ಕೆ ಬೇಕಾದ ಪೋಷಕಾಂಶ ನೀಡುತ್ತವೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪಿ.ಎಲ್‌ ಪಾಟೀಲ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಧಾರವಾಡ ಕೃಷಿ ವಿಶ್ವವಿದ್ಯಾಲಯ, ವಿಜಯಪುರದ ಕೃಷಿ ತಂತ್ರಜ್ಞರ ಸಂಸ್ಥೆ, ಮತ್ತು ಜಿಲ್ಲಾ ಕೃಷಿಕ ಸಮಾಜದ ಸಹಯೋಗದಲ್ಲಿ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ…

Read More

17ರಿಂದ 23ರ ವರೆಗೆ ಗುಮ್ಮಟನಗರಿಯಲ್ಲಿ ಬ್ಯಾಡ್ಮಿಂಟನ್‌ ಪಂದ್ಯ: 7 ದಿನಗಳವರೆಗೆ ಕ್ರೀಡಾ ಪ್ರೇಮಿಗಳಿಗೆ ಬ್ಯಾಡ್ಮಿಂಟನ್ ಆಕ್ಷನ್ ರಸದೌತಣ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಅಧಿಕೃತ ಮಾನ್ಯತೆಯೊಂದಿಗೆ, ಯೋನೆಕ್ಸ್ ಸನ್‌ರೈಸ್ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಯು-15 ಮತ್ತು ಯು-17 ಬ್ಯಾಡ್ಮಿಂಟನ್ ಪಂದ್ಯಾವಳಿ-2026 ಮೇ 17 ರಿಂದ ಮೇ 23 ರವರೆಗೆ ಐತಿಹಾಸಿಕ ನಗರಿ ವಿಜಯಪುರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಅಧ್ಯಕ್ಷ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಇರುವ ಉದಯೋನ್ಮುಖ ಹಾಗೂ ಖ್ಯಾತ ಬ್ಯಾಡ್ಮಿಂಟನ್ ಆಟಗಾರರು ತಮ್ಮ ಕೌಶಲ್ಯ ಪ್ರದರ್ಶಿಸಲು ವಿಜಯಪುರಕ್ಕೆ ಲಗ್ಗೆ…

Read More

ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಜ್ಞಾನಪ್ರಸಾರದಮಾಧ್ಯಮ: ಡಾ. ಕುಶಾಲ ಬರಗೂರು ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಮನೆಗೊಂದು ಗ್ರಂಥಾಲಯ ಅನುಷ್ಠಾನಕಾರ್ಯಕ್ರಮ ರಾಜ್ಯವ್ಯಾಪಿ ಶರವೇಗದಲ್ಲಿ ನಡೆಯುತ್ತಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯ ಸದಸ್ಯ ಡಾ. ಕುಶಾಲ್ ಬರಗೂರು ಹೇಳಿದರು.ವಿಜಯಪುರದ ಗಣೇಶ ನಗರ ಬಡಾವಣೆಯ ಶಿಕ್ಷಕ ಸಾಹಿತಿಸಿದ್ದನಗೌಡ ಪೊಲೀಸಪಾಟೀಲ ಅವರ ನಿವಾಸದಲ್ಲಿ ಮನೆಗೊಂದುಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.ರಾಜ್ಯದ ಒಂದು ಲಕ್ಷಕ್ಕೂ ಅಧಿಕ ಮನೆಯಲ್ಲಿ ಗ್ರಂಥಾಲಯವನ್ನು ಸ್ಥಾಪಿಸುವ ಗುರಿಯನ್ನು ಪ್ರಾಧಿಕಾರ ಹೊಂದಿದೆ. ಇದು ಬೇರೆ ಬೇರೆ ರಾಜ್ಯಗಳಿಗಷ್ಟೇ ಅಲ್ಲ. ಅಂತರಾಷ್ಟ್ರೀಯ…

Read More

ಎಸ್.ವಿ. ಬುರ್ಲಿ ಹಾಗೂ ಜಯಶ್ರೀ ಬುರ್ಲಿ ಇವರಿಗೆ ಜೀವಮಾನದ ಅಂತರಾಷ್ಟ್ರೀಯ ಫೆಲೋಷಿಪ್-26 ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಜಿಲ್ಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷರು ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ್ ಇಂಡಿಯಾದ ನ್ಯಾಷನಲ್ ಡೈರೆಕ್ಟರ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ. ಬುರ್ಲಿ ಇವರಿಗೆ ಹಾಗೂ ಜಯಶ್ರೀ ಬುರ್ಲಿ ಜೀವಶಾಸ್ತ್ರಉಪನ್ಯಾಸಕಿ ಇವರಿಗೆ ಇಂಡೋ–ನಾಮ್ ಸೈಂಟಿಫಿಕ್‌ ಸಮ್ಮಿತ್ -26 ಫೆಲೋ ಶಿಪ್ ಪ್ರಶಸ್ತಿ ಘೋಷಿಸಲಾಗಿದೆ.ಮೇ 17 ರಿಂದ22 ರವರೆಗೆ ವಿಯೆಟ್ನಾಂನ ಡನಾಂಗ್ ದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ…

Read More

ಗಾನಗಂಗೋತ್ರಿ ಗಾಯನ: ವಿದ್ಯಾಶ್ರೀ ನಡುಗಡ್ಡಿ ಆಯ್ಕೆ

ಸಪ್ತಸಾಗರ ವಾರ್ತೆ, ಇಂಡಿ, ಮೇ 15: ಬೆಂಗಳೂರಿನ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 11 ನೇ ರಾಷ್ಟ್ರೀಯ ನೃತ್ಯ ಕಲಾ ಮೇಳ ಹಾಗೂ 75 ನೇ ರಾಜ್ಯ ಮಟ್ಟದ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಇದೇ ಮೇ 23,24 ರಂದು ಬೆಂಗಳೂರಿನ ಸಂಸ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕವನ ವಾಚನ, ನೃತ್ಯಾoಜಲಿ, ಸಮೂಹ ನೃತ್ಯ ಪ್ರದರ್ಶನ ಹಾಗೂ…

Read More

ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಾಳ ಹೊಸ ಪಕ್ಷದ ಬ್ಲಾಕ್ ಮೇಲ್: ಯತ್ನಾಳಗೆ ಸಚಿವ ಎಂಬಿಪಿ ಟಾಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15 :ಶಾಸಕ ಯತ್ನಾಳರಿಗೆ ಬಿಜೆಪಿ ವ್ಯಾಮೋಹ ಹೋಗಿಲ್ಲ. ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ರೀತಿ ಹೊಸ ಪಕ್ಷದ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದೇ ಇಲ್ಲ ಬಿಡಿ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಅವರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ಪ್ರಯತ್ನ ಅಲ್ಲ. ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬೇಕಾದರೆ ಯತ್ನಾಳರು ಪಕ್ಷ ಕಟ್ಟಲಿ ಅದಕ್ಕೆ ಶುಭವಾಗಲಿ. ಅವರು ತಮಿಳುನಾಡಿನ…

Read More