ಬಿಎಲ್ ಡಿಇ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಯಶಸ್ವಿ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 13:ಬಸವ ನಾಡಿನ ಪ್ರತಿಷ್ಠಿತ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಇದೇ ಪ್ರಪ್ರಥಮ ಬಾರಿಗೆ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.ವಿಜಯಪುರ ನಗರದ ಶಹಾಪುರ ಅಗಸಿಯ ನಿವಾಸಿ ಬಲರಾಮ ಕೃಷ್ಣ ಬಾಗಲಕೋಟ(30) ಫೆಬ್ರುವರಿ 9 ರಂದು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬಿ.ಎಲ್.ಡಿ.ಇ ಆಸ್ಪತ್ರೆಯ ತುರ್ತು ಚಿಕಿತ್ಸೆ ಘಟಕದಲ್ಲಿ ದಾಖಲಾಗಿದ್ದರು. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಯುವಕನ ಸಂಬಂಧಿಕರಿಗೆ ತಿಳಿಸಿದರು.ಅಲ್ಲದೇ, ಅವರ ಸಹೋದರಿಯರಾದ ಶೃತಿ ಹಳ್ಳದಮನಿ,…


