saptsagar_admin

ಬಸವಜ್ಯೋತಿ ಪಾದಯಾತ್ರೆಗೆ ಭವ್ಯ ಸ್ವಾಗತ

ಸಪ್ತಸಾಗರ ವಾರ್ತೆ ವಿಜಯಪುರ, ಏ. 20:ಜಗಜ್ಯೋತಿ ಬಸವೇಶ್ವರರ ಜಯಂತಿಯ ಶುಭ ಸಂದರ್ಭದಲ್ಲಿ, ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಹಮ್ಮಿಕೊಳ್ಳಲಾಗಿದ್ದ ಭವ್ಯ ಬಸವಜ್ಯೋತಿ ಪಾದಯಾತ್ರೆಯನ್ನು ನಗರದ ಬಸವ ಸಮಿತಿ ಹಾಗೂ ಸಿದ್ದೇಶ್ವರ ಬ್ಯಾಂಕ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಮತ್ತು ಗಣ್ಯರು ಸ್ವಾಗತಿಸಿದರು.ಬೆಂಗಳೂರಿನಲ್ಲಿ ನೆಲೆಸಿರುವ ವಿಜಯಪುರ ಜಿಲ್ಲೆಯ ಹಂದಿಗನೂರ ಗ್ರಾಮದ ಬಿ. ಬಿ. ಪಾಟೀಲ ಅವರ ನೇತೃತ್ವದಲ್ಲಿ ಹಾಗೂ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸಹಯೋಗದಲ್ಲಿ ಈ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ನಿನ್ನೆ ರಾತ್ರಿ ಬಸವನ ಬಾಗೇವಾಡಿಯಿಂದ ಆರಂಭಗೊಂಡ ಈ ಪಾದಯಾತ್ರೆಯು…

Read More

ಮೀನುಗಾರಿಕೆ ಉಚಿತ ಕಿಟ್ ಮತ್ತು ಲೈಫ್ ಜಾಕೇಟುಗಳ ವಿತರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 20:ಬಬಲೇಶ್ವರ ಮತಕ್ಷೇತ್ರದ ನಾನಾ ಫಲಾನುಭವಿಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸೋಮವಾರ ಮೀನುಗಾರಿಕೆ ಉಚಿತ ಕಿಟ್ ಮತ್ತು ಲೈಫ್ ಜಾಕೇಟುಗಳನ್ನು ವಿತರಿಸಿದರು.ರಾಜ್ಯ ವಲಯ ಮತ್ತು ಜಿಲ್ಲಾ ಪಂಚಾಯಿತಿ ಯೋಜನೆಯಡಿ ಒಟ್ಟು 61 ಜನ ಫಲಾನುಭವಿಗಳು ಆಯ್ಕೆಯಾಗಿದ್ದು, ಅವರಲ್ಲಿ 11 ಫಲಾನುಭವಿಗಳಿಗೆ ಸಚಿವರು ಸಾಂಕೇತಿಕವಾಗಿ ಕಿಟ್ ಮತ್ತು ಲೈಫ್ ಜಾಕೇಟ್ ವಿತರಿಸಿದರು. ಈ ಯೋಜನೆಯಡಿ ಬಬಲೇಶ್ವರ ತಾಲೂಕಿನ ಕೃಷ್ಣಾ ನದಿಯಲ್ಲಿ ಮೀನುಗಾರಿಕೆ ನಡೆಸುವ ಜೈನಾಪುರ,…

Read More

ಕಾಯಕ, ದಾಸೋಹ ಬಸವಣ್ಣನವರ ಶ್ರೇಷ್ಠ ಕೊಡುಗೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಏ. 20: ಬಸವಣ್ಣನವರು ವಚನಗಳ ಮೂಲಕ ಸ್ವಾಸ್ಥ್ಯ ಸಮಾಜಕ್ಕೆ ಬೇಕಾದ ನೀತಿಸೂತ್ರಗಳ ಸಂದೇಶ ನೀಡಿದ್ದು, ಅವು ಇಡೀ ಜಗತ್ತಿನ ಮನುಕುಲಕ್ಕೆ ನೀಡಿದಂತಹ ಜೀವನ ಸಂವಿಧಾನ, ಸಾಮಾಜಿಕ ನೀತಿ ಸಂಹಿತೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಸೋಮವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಬಸವ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಕಾಯಕ, ದಾಸೋಹ ತತ್ವಗಳು ಬಸವಣ್ಣನವರ ಶ್ರೇಷ್ಠ ಕೊಡುಗೆಗಳು. ಅವರ ಶರಣ ಸಂಸ್ಕೃತಿ ಇಡೀ ವಿಶ್ವಕ್ಕೆ ಆದರ್ಶ ಮಾನವ ಸಂಸ್ಕೃತಿಯಾಗಿದೆ. ನುಡಿದಂತೆ…

Read More

ಯತ್ನಾಳ ಹೊಸ ಪಕ್ಷ ಸ್ಥಾಪನೆ ಇಂಗಿತ: ಬಿಜೆಪಿಯಲ್ಲಿ ಬೇಗುದಿ

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಏ. 20:ಬಿಜೆಪಿ ಉಚ್ಚಾಟಿತ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ರಾಜಕೀಯ ಪಕ್ಷ ಹುಟ್ಟು ಹಾಕುವುದಾಗಿ ಇಂಗಿತ ವ್ಯಕ್ತ ಪಡಿಸಿದ್ದಾರೆ.ಈ ಹಿಂದೆಯೂ ಹೊಸ ಪಕ್ಷ ಕಟ್ಟುವುದಾಗಿಯೂ ಹೇಳಿದ್ದರು. ಇದೀಗ ಮತ್ತೆ ಹೊಸ ಪಕ್ಷ ಹುಟ್ಟು ಹಾಕುವ ಮನದ ಇಂಗಿತನ್ನು ಬಿಚ್ಚಿಟ್ಟಿದ್ದಾರೆ.ಬಸವ ಜಯಂತಿ ಆಚರಣೆ ಶುಭ ಸಂದರ್ಭದಲ್ಲಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಯತ್ನಾಳ ಅವರು ಹೊಸ ಪಕ್ಷ ಕಟ್ಟುವ ವಿಚಾರ ಬಹಿರಂಗ ಪಡಿಸಿದ್ದಾರೆ.ಯತ್ನಾಳ ಈ ಬಾರಿ ನೂತನ ಪಕ್ಷ ಕಟ್ಟುವ…

Read More

ಏ. 21ರಂದು ಅಕ್ಕಮಹಾದೇವಿ ವಿವಿಯ 17 ನೇ ಘಟಿಕೋತ್ಸವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ

ಸಪ್ತಸಾಗರ ವಾರ್ತೆ,ವಿಜಯಪುರ ಏ, 20: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ಘಟಿಕೋತ್ಸವ ಏ. 21ರಂದು ಮಂಗಳವಾರ ಬೆಳಿಗ್ಗೆ 11.30ಕ್ಕೆ ವಿವಿಯ ಜ್ಞಾನಶಕ್ತಿ ಆವರಣದ ಕ್ರೀಡಾಂಗಣದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸಭಾಂಗಣದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಾಲ್ಗೊಳ್ಳಲಿದ್ದಾರೆ ಎಂದು ಕುಲಪತಿ ಡಾ. ವಿಜಯಾ ಕೋರಿಶೆಟ್ಟಿ ಹೇಳಿದರು.‌ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಅತಿಥಿಗಳಾಗಿ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಉಜ್ವಲಾ ಚಕ್ರದೇವ್ ಅವರು ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ…

Read More

ಬಸವಣ್ಣನವರ ತತ್ವ ಆದರ್ಶಗಳು ಎಂದೆಂದಿಗೂ ಪ್ರಸ್ತುತ-ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 20:ವಚನಗಳ ಮೂಲಕ ಅನಿಷ್ಟ ಪದ್ದತಿಗಳನ್ನು ತೊಲಗಿಸಿ ಮಹಾ ಕ್ರಾಂತಿ ಮಾಡಿದವರು ಕ್ರಾಂತಿಯೋಗಿ ಬಸವಣ್ಣನವರು ಎಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳರು ಹೇಳಿದರು.ನಗರದ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದ ಅವರು, ಸಮಾಜ ಸುಧಾಕರಾದ ಬಸವಣ್ಣನವರ ತತ್ವ ಆದರ್ಶಗಳು ಎಂದೆಂದಿಗೂ ಪ್ರಸ್ತುತ ಎಂದರು.ಮೇಯರ್ ಎಂ.ಎಸ್.ಕರಡಿ, ಸಿದ್ದೇಶ್ವರ ಸಂಸ್ಥೆ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ಚೇರಮನ್ ಬಸಯ್ಯ ಹಿರೇಮಠ, ನಿರ್ದೇಶಕರಾದ ಎಸ್.ಎಚ್.ನಾಡಗೌಡ,…

Read More

ಹಿರಿಯ ನ್ಯಾಯವಾದಿ ಎಸ್. ಎಚ್. ಲಗಳಿ ನಿಧನ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19: ನಗರದ ಪ್ರಖ್ಯಾತ ಹಿರಿಯ ವಕೀಲ ಸುರೇಶ ಹಣಮಂತರಾಯ ಲಗಳಿ (77) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.ಮೃತರು ಸುದೀರ್ಘ ಕಾಲ ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಎಸ್. ಎಂ. ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಬಿ.ಎಲ್.ಡಿ.ಇ. ಸಂಸ್ಥೆ, ಡಿ.ಎಲ್.ಆರ್.ಸಿ. ಮತ್ತು ಸ್ಪಿನ್ನಿಂಗ್ ಮಿಲ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ವಿಜಯಪುರ ಡಿಸಿಸಿ ಬ್ಯಾಂಕ್‌ನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಖ್ಯಾತ ಕ್ರಿಮಿನಲ್ ವಕೀಲರಾಗಿದ್ದ ಇವರು, ವಿಜಯಪುರ ನಗರಸಭೆ ಸೇರಿದಂತೆ ಜಿಲ್ಲೆಯ ಹಲವು…

Read More

ಹಳ್ಳ-ಕೊಳ್ಳ ಒತ್ತುವರಿ ತೆರವುಗೊಳಿಸಿ, ಸಹಕರಿಸಿ: ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಬಬಲೇಶ್ವರ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಬಹುತೇಕ ಗ್ರಾಮಗಳಲ್ಲಿ ಹಳ್ಳ-ಕೊಳ್ಳಗಳು ಒತ್ತುವರಿಯಾಗಿವೆ. ರೈತರು ಸ್ವಯಂ ಪ್ರೇರಣೆಯಿಂದ ಹಳ್ಳ ಒತ್ತುವರಿ ತೆರುವುಗೊಳಿಸಬೇಕು. ಅಲ್ಲಿ ಬೆಳೆದಿರುವ ಗಿಡ-ಗಂಟಿ ತೆಗೆದು ಸಹಕರಿಸಿದರೆ ಹಳ್ಳ ತುಂಬಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟದ ಹೊಳೆಯನ್ನೇ ಹರಿಸುವೆ ಎಂದು ಬೃಹತ್‌ ಮತ್ತು ಮಧ್ಯಮ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಬಬಲೇಶ್ವರ ತಾಲೂಕಿನ ನಿಡೋಣಿ- ಯಕ್ಕುಂಡಿ-ನಾಗರಾಳ- ಕುಮಠೆ-ಅರ್ಜುಣಗಿ…

Read More

ನಮ್ಮ ಸಿಎಂ ಗಟ್ಟಿಯಾಗಿದ್ದಾರೆ- ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ನಮ್ಮ ಸಿಎಂ ಬಹಳ ಗಟ್ಟಿಯಾಗಿದ್ದಾರೆ.ಅವರು ಯಾವಗಲೂ ಎಂದೂ ಅಸಹಾಯಕರಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಭಾನುವಾರ ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು, ಸಿಎಂ ಅಸಹಾಯಕರಾಗಿದ್ದಾರೆ ಎಂದುಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಕ್ರಮ ಆಗುತ್ತದೆ. ನಾನು ಸಹ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೂ ನಮ್ಮ ಮೇಲೆ ಕೂಡ ಕ್ರಮವಾಗುತ್ತದೆ. ಪಕ್ಷದ ಶಿಸ್ತು ಎಲ್ಲರಿಗೂ ಅನ್ವಯಿಸುತ್ತದೆಎಲ್ಲರೂ ಪಕ್ಷದ ನಿಯಮಗಳನ್ನು…

Read More

ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುವುದನ್ನು ಬಿಟ್ಟರೆ ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಭಾನುವಾರ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ನಂದ್ಯಾಳ ಗ್ರಾಮದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು.ನಿನ್ನೆ ಪ್ರಧಾನಿಗಳ ಭಾಷಣ ನೋಡಿದರೆ ಭಾಷಣದಲ್ಲಿ ಘನತೆ‌ ಗೌರವ ಇರಬೇಕು. ಅದು ಇರಲಿಲ್ಲ. ಪದೇ ಪದೇ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳನ್ನು ವಿರೋಧಿಸಿ ಮಾತನಾಡಿದರು.ತರಾತುರಿಯಲ್ಲಿ…

Read More