ಬಸವಜ್ಯೋತಿ ಪಾದಯಾತ್ರೆಗೆ ಭವ್ಯ ಸ್ವಾಗತ
ಸಪ್ತಸಾಗರ ವಾರ್ತೆ ವಿಜಯಪುರ, ಏ. 20:ಜಗಜ್ಯೋತಿ ಬಸವೇಶ್ವರರ ಜಯಂತಿಯ ಶುಭ ಸಂದರ್ಭದಲ್ಲಿ, ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಹಮ್ಮಿಕೊಳ್ಳಲಾಗಿದ್ದ ಭವ್ಯ ಬಸವಜ್ಯೋತಿ ಪಾದಯಾತ್ರೆಯನ್ನು ನಗರದ ಬಸವ ಸಮಿತಿ ಹಾಗೂ ಸಿದ್ದೇಶ್ವರ ಬ್ಯಾಂಕ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಮತ್ತು ಗಣ್ಯರು ಸ್ವಾಗತಿಸಿದರು.ಬೆಂಗಳೂರಿನಲ್ಲಿ ನೆಲೆಸಿರುವ ವಿಜಯಪುರ ಜಿಲ್ಲೆಯ ಹಂದಿಗನೂರ ಗ್ರಾಮದ ಬಿ. ಬಿ. ಪಾಟೀಲ ಅವರ ನೇತೃತ್ವದಲ್ಲಿ ಹಾಗೂ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸಹಯೋಗದಲ್ಲಿ ಈ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ನಿನ್ನೆ ರಾತ್ರಿ ಬಸವನ ಬಾಗೇವಾಡಿಯಿಂದ ಆರಂಭಗೊಂಡ ಈ ಪಾದಯಾತ್ರೆಯು…


