saptsagar_admin

ನಮ್ಮ ಸೈನಿಕರು ಧೈರ್ಯ-ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಕಾರ್ಗಿಲ್ ಪರಂಪರೆಯು ಪ್ರತಿ ವಿದ್ಯಾರ್ಥಿಗೆ ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಬಲಿದಾನ, ಸಾಹಸದ ಮಹತ್ವವನ್ನು ತಿಳಿಸುತ್ತದೆ. ಭಾವೈಕ್ಯತೆಗಾಗಿ ಇಂದಿನ ಮಕ್ಕಳು ಏಕತೆ, ಗೌರವದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಕಾರ್ಗಿಲ್‌ ವಿಜಯೋತ್ಸವ-2025 ಹುತಾತ್ಮ ವೀರಯೋಧರಿಗೆ ನಮನ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.ಕಾರ್ಗಿಲ್ ಯುದ್ಧ ವೀರರ ಕಥೆಗಳು ರಾಷ್ಟ್ರಕ್ಕಾಗಿ ತ್ಯಾಗ, ಧೈರ್ಯ ಮತ್ತು ಸಮರ್ಪಣೆಯ ಅತ್ಯುನ್ನತ ಆದರ್ಶಗಳನ್ನು ಸಾರುತ್ತವೆ….

Read More

ದೋಷರಹಿತ-ಅಪಘಾತ ರಹಿತ ಹೆಸ್ಕಾಂಗೆ ಕ್ರಮ- ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ, ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದ್ರಿ ಅವರು ಹೇಳಿದರು.ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7…

Read More

ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಿ- ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಮಕ್ಕಳ ರಕ್ಷಣೆ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಹೇಳಿದರು.ಮಕ್ಕಳ ನಿರ್ದೇಶನಾಲಯ ಬೆಂಗಳೂರು, ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಭಾಗಿದಾರ…

Read More

ಧರ್ಮಸ್ಥಳ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹಿಸಿ ಸಿಎಂಗೆ ಆಮ್ ಆದ್ಮಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 25:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಅನಂತರ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಕರ್ನಾಟಕದ ನಾಗರಿಕರ ಪರವಾಗಿ ಮತ್ತು 2012 ರಲ್ಲಿ ಧರ್ಮಸ್ಥಳದಲ್ಲಿ ಕ್ರೂರವಾಗಿ ಅತ್ಯಾಚಾರ ಮತ್ತು ಕೊಲೆಗೆ…

Read More

ತಾಳಿಕೋಟೆಯಲ್ಲಿ ಕಳ್ಳರ ಚಡ್ಡಿ ಗ್ಯಾಂಗ್ ಸಿಸಿ ಕ್ಯಾಮೆರಾದಲ್ಲಿ ಸೆರೆ: ಜನರಲ್ಲಿ ಆತಂಕ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡು ಜನರಲ್ಲಿ ಭಯದ ವಾತಾವರಣ ಮೂಡಿಸಿದೆ.ಈ ಹಿಂದೆ ವಿಜಯಪುರ ಜಿಲ್ಲೆಯಲ್ಲಿ ಚಡ್ಡಿ ಗ್ಯಾಂಗ್ ಜನರ ನಿದ್ರೆಗೆಡಿಸಿ ಭಯದ ವಾತಾವರಣ ಮೂಡಿಸಿತ್ತು. ಕೆಲವು ತಿಂಗಳುಗಳಿಂದ ಚಡ್ಡಿ ಗ್ಯಾಂಗ್ ಉಪಟಳ ಇಲ್ಲವಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಈಗ ಮತ್ತೆ ಜಿಲ್ಲೆಯ ತಾಳಿಕೋಟೆ ಪಟ್ಟಣದ ಗಣೇಶನಗರದಲ್ಲಿಚಡ್ಡಿ ಗ್ಯಾಂಗ್ ಕದೀಮರು ಬಾಲ ಬಿಚ್ಚಿದ್ದಾರೆ. ಈ ಕದೀಮರ ಚಲನವಲನ ಸಿಸಿ ಕೆಮೆರಾದಲ್ಲಿ ಸೆರೆಯಾಗಿದೆ.ಆರು ಜನರು ಇರುವ ಕಳ್ಳರ ಚಡ್ಡಿ ಗ್ಯಾಂಗ್…

Read More

ಜು. 27 ರಂದು ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಜು. 27 ರಂದು ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ ಬೆಳಗಾವಿ ಜಿಲ್ಲೆಯ ಸವದತ್ತಿಯ ಗುರುರಾಜ ಭವನ್ ಲಿಂಗರಾಜ್ ಕಾಲೇಜ್ ನಲ್ಲಿ ನಡೆಯಲಿದೆ.ಕರ್ನಾಟಕ ಆರ್ಮ್ ಕುಸ್ತಿ,ಸಂಸ್ಥೆ ಮತ್ತು ಛತ್ರಪತಿ ಫೌಂಡೇಶನ್ ಹಾಗೂ ಸವದತ್ತಿ ವಿ ಎಸ್ ಫಿಟ್ನೆಸ್ ಸೆಂಟರ್ ಇವರ ವತಿಯಿಂದ ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರ ತೂಕದ ವಿವರ- 50- 55, 60-65,70-75,-80-85,-90-95,-100+100 ಈ ರೀತಿ 12 ವಿಭಾಗದಲ್ಲಿ ಕ್ರೀಡಾಕೂಟ ನಡೆಯಲಿದೆ.ಚಾಂಪಿಯನ್ ಆಫ್ ದಿ ಚಾಂಪಿಯನ್,…

Read More

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಜಿಲ್ಲಾ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 24:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹಾಗೂ ಸದಸ್ಯರು ಜುಲೈ 25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ. ಕೆ.ಟಿ. ತಿಪ್ಪೇಸ್ವಾಮಿ, ಮಂಜು, ವೆಂಕಟೇಶ ಹಾಗೂ ಅಪರ್ಣಾ ಎಂ. ಕೊಳ್ಳಾ ಅಧ್ಯಕ್ಷರ ಜೊತೆಗೂಡಿ ಜಿಲ್ಲೆಯ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜುಲೈ 25ರಂದು ಬೆಳಿಗ್ಗೆ 9ಗಂಟೆಯಿಂದ 1.30ರವರೆಗೆ ಮಕ್ಕಳ ಸಂಸ್ಥೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವ ಅವರು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ…

Read More

ಜಿಲ್ಲಾಧಿಕಾರಿ ಡಾ.ಆನಂದ ಅವರಿಂದ ಸರ್ಕಾರಿ ಕಚೇರಿಗಳು, ಆಸ್ಪತ್ರೆಗೆ ಭೇಟಿ ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು.ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‍ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ…

Read More

ಆಗಸ್ಟ್ 3 ರಂದು ಜಿಲ್ಲಾ ಯೋಗಾಸನ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆಯಿಂದ ಮಾನ್ಯತೆ ಪಡೆದ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾಆಗ ಅಂಗಸಂಸ್ಥೆಯಾದ ರಾಜ್ಯ ಯೋಗಾಸನ ಕ್ರೀಡಾ ಸಂಸ್ಥೆ, ಜಿಲ್ಲಾ ಹಾಗೂ ರಾಜ್ಯ ಮತು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಈ ನಿಮಿತ್ತ ಆಗಸ್ಟ್ 3ರಂದು ವಿಜಯಪುರ ತಾಲೂಕಿನ ತಿಡಗುಂದಿಯ ಮಾನಸ ಗಂಗೋತ್ರಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ ಏರ್ಪಡಿಸಲಾಗಿದೆ.ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಸ್ಪರ್ಧಾಳುಗಳು ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅವಕಾಶವನ್ನು…

Read More

ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ: ಆಶಾ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ…

Read More