ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಬದ್ಧ: ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಏ. 19:ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಕಾರ್ಯೋನ್ಮುಖನಾಗಿದ್ದೇನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿಯಲ್ಲಿ ಚಂದ್ರಗಿರಿ ಸಿದ್ರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರೆಗೆ ನಮ್ಮ ತಂದೆಯವರ ಕಾಲದಿಂದಲೂ ಬರುತ್ತಿದ್ದೇವೆ. ದೇವರು, ಶ್ರೀಗಳು ಮತ್ತು ಗ್ರಾಮಸ್ಥರ ಆಶೀರ್ವಾದದಿಂದ ಜಲಸಂಪನ್ಮೂಲ ಸಚಿವನಾಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ…


