ಸಿಎಂ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ : ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಸಂಭ್ರಮಾಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ,ಜ.8 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಜನವರಿ 7) ಹಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರದ ಬಹುದಿನಗಳ ಕನಸಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಿರುವುದನ್ನು ದಲಿತ ವಿದ್ಯಾರ್ಥಿ ಪರಿಷತ್ ಸ್ವಾಗತಿಸಿ ಗುರುವಾರ ಸಂಭ್ರಮಾಚರಣೆ ಮಾಡಿತು.ಮುಖ್ಯಮಂತ್ರಿಗಳು ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಾಡುವ ಬಗ್ಗೆ ಘೋಷಿಸಿದ ಹಿನ್ನೆಲೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ಈ ವೇಳೆ ಮಾತನಾಡಿದ ಪರಿಷತ್ ಜಿಲ್ಲಾ…


