saptsagar_admin

ನೂತನ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರ ಸ್ವೀಕಾರ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.29: ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಔದ್ರಾಮ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.ಡಾ.ಔದ್ರಾಮ ಅವರು 2004ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು, ಅವರು ಈ ಹಿಂದೆ ವಿಜಯಪುರ ಮಹಾನಗರ‌ ಪಾಲಿಕೆ ಆಯುಕ್ತರಾಗಿ, ಅಪರ ಜಿಲ್ಲಾಧಿಕಾರಿಯಾಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Read More

ನಿಸ್ವಾರ್ಥದಿಂದ ಸಮಾಜ ಕಟ್ಟುವ ಕಾರ್ಯ ಮಾಡಿ:ಪೂಜಾರಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.29: ಸಮಾಜ ಸಂಘಟನೆಯಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶೃದ್ಧೆಯಿಂದ ಕಾರ್ಯ ನಿರ್ವಹಿಸಿ ನಿಸ್ವಾಥದಿಂದ ಸಮಾಜ ಕಟ್ಟುವ ಕಾಯಕ ಮಾಡಬೇಕೆಂದು ಮಕ್ಕಳ ಸಾಹಿತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹ.ಮ. ಪೂಜಾರಿ ಹೇಳಿದರು.ನಗರದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ ಹೂಗಾರ, ಪೂಜಾರಿ, ಜೀರ ಹಾಗೂ ಗುರವ ಸಮಾಜ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳಸದಸ್ಯರಿಗೆ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿ ನಮ್ಮ ಮಕ್ಕಳ ಶಿಕ್ಷಣ ಪ್ರಗತಿ ಕುರಿತು ಚಿಂತನೆ ಇರಬೇಕು. ನಮ್ಮ…

Read More

ಮರ್ಯಾದೆಗೇಡಿ ಹತ್ಯೆ: ದಲಿತ ಸ್ವರಾಜ್ಯ ಸೇನೆ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 29:ಹುಬ್ಬಳ್ಳಿ ತಾಲೂಕಿನ ಇನಾಮ ವೀರಪುರ ಗ್ರಾಮದ ಮಾನ್ಯಾ ಪಾಟೀಲ್ ಸಹೋದರಿಯ ಮರ್ಯಾದೆಗೇಡಿ ಹತ್ಯೆ ಖಂಡಿಸಿ ದಲಿತ ಸ್ವರಾಜ್ಯ ಸೇನೆ ವತಿಯಿಂದ ಜಿಲ್ಲಾಡಳಿತದ ಮೂಲಕ ಸೋಮವಾರ ರಾಷ್ಟ್ರಪತಿಗಳಿಗೆ ಖಂಡನಾ ಪತ್ರ ಸಲ್ಲಿಸಿದರು.ಈ ಘಟನೆಗೆ ಇಡೀ ಮಾನವ ಸಮಾಜವವೇ ತಲೆತಗ್ಗಿಸುವಂತೆ ಆಗಿದೆ. ಮಗಳ ಬಾಳಿನಲ್ಲಿ ಜನ್ಮದಾತನೇ ರಾಕ್ಷಸನಂತಾಗಿದ್ದಾನೆ ಎಂದು ಡಿಎಸ್ಎಸ್ ಅಧ್ಯಕ್ಷ ಗೌಡಪ್ಪ ಬಡಿಗೇರ ಖಂಡಿಸಿದರು. ಪೂರ್ಣ ವಯಸ್ಕರು ಒಪ್ಪಿ ಮದುವೆಯಾಗುವುದು ತಪ್ಪೇ. ಸಮಾಜದಲ್ಲಿ ಶೋಷಣೆಗೊಳಗಾದ ಎಲ್ಲ ಸಮುದಾಯಗಳಲ್ಲಿ, ಮಹಿಳಾ ಸಮುದಾಯ ಮೊದಲಾಗಿದೆ.ಬಸಮ್ಮ, ಸೌಜನ್ಯ,…

Read More

ಅರಿವಿನ ಮೂಲಕ ದೇವದಾಸಿ ಪದ್ಧತಿ ನಿರ್ಮೂಲನೆ ಸಾಧ್ಯ:ಪ್ರೊ. ಸುನಂದಮ್ಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ದೇವದಾಸಿ ಪದ್ಧತಿ ಸಮಾಜದ ಗಂಭೀರ ಪಿಡುಗಾಗಿ ಅನೇಕ ಮಕ್ಕಳ ಬದುಕನ್ನು ಶೋಷಣೆ ಮತ್ತು ದೌರ್ಜನ್ಯಕ್ಕೆ ತಳ್ಳುತ್ತಿದೆ. ಶಿಕ್ಷಣ ಮತ್ತು ಹಕ್ಕುಗಳ ಅರಿವಿನ ಮೂಲಕ ಮಾತ್ರ ಈ ಮಕ್ಕಳನ್ನು ಸಬಲಗೊಳಿಸಿ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯ ಎಂದು ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ.ಆರ್.ಸುನಂದಮ್ಮ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ…

Read More

ಹೋಟೆಲ್ ಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ನಗರ ಹೊರ ವಲಯದ ಸೊಲ್ಲಾಪುರ ರಸ್ತೆಯಲ್ಲಿನ ಹೋಟೆಲವೊಂದಕ್ಕೆ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಧಗಧಗನೇ ಹೊತ್ತಿ ಉರಿದು ಅಪಾರ ಹಾನಿಯಾಗಿದೆ.ಕೃಷ್ಣ ಪ್ಯಾಲೇಸ್ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿಯುತ್ತಿರುವುದನ್ನು ಸಾರ್ವಜನಿಕರು ಗಮನಿಸಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ಘಟನಾಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸುಮಾರು 1 ತಾಸಿಗೂ ಹೆಚ್ಚು ಕಾಲ ಹರ ಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ…

Read More

ಇಂಗಳೇಶ್ವರ ಚನ್ನಬಸವ ಸ್ವಾಮಿಜಿ ಕಾಯಕ ಸವ೯ಶ್ರೇಷ್ಠ: ಸಿದ್ಧರಾಮ ಶ್ರೀ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಆಧ್ಯಾತ್ಮಿಕ ಜೀವನದ ಮೌಲ್ಯಯುತ ತತ್ವಗಳನ್ನು ಪ್ರವಚನಗಳ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಲ್ಲಿ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಪ್ರಥಮರು. ಶಿಲೆಗಳಲ್ಲಿ ವಚನಗಳನ್ನು ಅರಳಿಸಿ ದೇಶದ ಗಮನ ಸೆಳೆದ ಇಂಗಳೇಶ್ವರ ಚನ್ನಬಸವ ಸ್ವಾಮಿಜಿ ಕಾಯಕ ಸವ೯ಶ್ರೇಷ್ಠವಾಗಿದೆ ಎಂದು ಮಸಬಿನಾಳ ವಿರಕ್ತಮಠದ ಸಿದ್ಧರಾಮ ಸ್ವಾಮಿಜಿ ಅಭಿಪ್ರಾಯ ವ್ಯಕ್ತಪಡಿಸಿದರುಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮಿಜಿ ಹಾಗೂ ಇಂಗಳೇಶ್ವರದ ಚನ್ನಬಸವ ಸ್ವಾಮಿಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿ ಆಧ್ಯಾತ್ಮಿಕ…

Read More

ಬಸವ ಜನ್ಮಭೂಮಿ ಶೈಕ್ಷಣಿಕ ಕ್ರಾಂತಿ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಕೊಲ್ಹಾರ, ಡಿ. 28 : ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದ ಈ ಪ್ರದೇಶದಲ್ಲಿ ಇದೀಗ ಭವಿಷ್ಯದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶನಿವಾರ ರಾತ್ರಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಕಟ್ಟಡ, ತಾಂಡಾ ಹಾಗೂ ಗ್ರಾಮದ ಮಕ್ಕಳಿಗೆ ಪ್ರತ್ಯೇಕವಾಗಿ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವರು, ಈ ಹಿಂದೆ ಸಾಕ್ಷರತೆಯಲ್ಲಿ ಅತ್ಯಂತ ಹಿಂದುಳಿದಿದ್ದ…

Read More

ಬಬಲೇಶ್ವರದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕ್ಷಣಗಣನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28 :ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.೨೯ ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನ್ನಿಧ್ಯದಲ್ಲಿ ಈ ಸಮಾವೇಶ ನಡೆಯಲಿದ್ದು. ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. 60*100 ಅಳತೆಯ ಬೃಹತ್ ವೇದಿಕೆಯನ್ನು ರೂಪಿಸಲಾಗಿದ್ದು, 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ 500 ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವ ನಿರೀಕ್ಷೆ ಇದ್ದು, ಹಿಂದೂ ಧರ್ಮ ಚಿಂತಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್….

Read More

ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ:ಶೇಖರಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28: ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ. ನಿರಂತರ ಪ್ರಯತ್ನಗಳ ನಡುವೆ ಎದುರಾಗುವ ವಿಫಲತೆಗಳೇ ಕೊನೆಗೆ ಯಶಸ್ಸಿನ ಮೆಟ್ಟಿಲಾಗುತ್ತವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಮತ್ನಾಳ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ರವಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ ಮತ್ತು ಕಿಶೋರ ನಾಯಕರ ಕ್ರೀಡಾ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ…

Read More

ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶ ಕೈಬಿಡಿ: ಶ್ರೀಗಳ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಬಸವ ಸಂಸ್ಕೃತಿ ಅಭಿಯಾನದ ವಿರುದ್ಧ, ಸ್ವಾಮೀಜಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಕನ್ಹೇರಿ ಶ್ರೀಗಳ ಬೆಂಬಲವಾಗಿ ನಿಂತು ಯಾವ ಸ್ವಾಮೀಜಿಯವರ ಬೆಂಬಲವಿಲ್ಲದೇ ಬಬಲೇಶ್ವರದಲ್ಲಿ ಸಮಾವೇಶ ಮಾಡಲು ಹೊರಟವರಿಗೆ ಏನೆಂದು ಕರೆಯಬೇಕು? ಎಂದು ಸಮಾವೇಶ ಆಯೋಜಿಸಿದರನ್ನು ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿಗಳು ಪ್ರಶ್ನಿಸಿದ್ದಾರೆ.ವಿಜಯಪುರದಲ್ಲಿ ಭಾನುವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ ಅವರು, ಯಾವ ಧರ್ಮದಲ್ಲೂ ದ್ವೇಷ ಮಾಡುವಂತದನ್ನು ಹೇಳಿಲ್ಲ. ಪ್ರೀತಿ, ವಾತ್ಸಲ್ಯ, ಸಹಬಾಳ್ವೆ ಕುರಿತು ಎಲ್ಲ ಪರಂಪರೆಗಳು ತಿಳಿಸುತ್ತವೆ. ಆದರೆ, ಸನ್ಮಾರ್ಗ ತೋರುವ…

Read More