ವಿಜಯಪುರದಲ್ಲಿ ನಾಳೆ ಭೀಮಗಾಯನ
ಸಪ್ತಸಾಗರ ವಾರ್ತೆ,ವಿಜಯಪುರ,ಮಾ.8:ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಮಾರ್ಚ್ 9ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂಜೆ 4 ಗಂಟೆಗೆ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ.ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ.ಸಿದ್ಧಾರ್ಥ ಯುವ ಕ್ರೀಡಾ…


